ಬ್ರೇಕಿಂಗ್ ನ್ಯೂಸ್
21-06-21 03:35 pm Mangaluru Correspondent ಕರಾವಳಿ
ಉಳ್ಳಾಲ, ಜೂ.21: ಕೋವಿಡ್ ನಿಂದ ಮೃತಪಟ್ಟ 12 ಮಂದಿ ಅನಾಥರ ಸದ್ಗತಿಗೆ ಪ್ರಾರ್ಥಿಸಿ ಇತಿಹಾಸ ಪ್ರಸಿದ್ಧ ಸೋಮೇಶ್ವರ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಹಿಂಭಾಗದ ಕಡಲ ತೀರದಲ್ಲಿ ಜಿಲ್ಲಾಡಳಿತದ ವತಿಯಿಂದ ತಿಲಹೋಮ, ಪಿಂಡ ಪ್ರದಾನ ಮಾಡಲಾಯಿತು.
ಜಿಲ್ಲೆಯಲ್ಲಿ ಕೋವಿಡ್ ನಿಂದ ಮೃತಪಟ್ಟ 12 ಮಂದಿಯ ಮೃತದೇಹದ ಸಂಸ್ಕಾರ ಮಾಡಿದ್ದು, ಮೃತದೇಹಗಳ ಅಸ್ಥಿಯನ್ನು ಶೇಖರಿಸಿ ಸೋಮೇಶ್ವರ ಕಡಲ ಕಿನಾರೆಯಲ್ಲಿ ಉಳ್ಳಾಲ ವೀರಭದ್ರ ದೇವಸ್ಥಾನದ ಪುರೋಹಿತರಾದ ಶಂಕರ ಕೃಷ್ಣ ಅಡಿಗ ಮಾರ್ಗದರ್ಶನದಲ್ಲಿ ತಿಲಹೋಮ ನಡೆಸಿ ಪಿಂಡ ಪ್ರದಾನ ಮಾಡಲಾಯಿತು. ಮೃತರ ಪರವಾಗಿ ತಾಲೂಕು ಪಂಚಾಯತ್ ಮಾಜಿ ಸದಸ್ಯ ರವಿಶಂಕರ್ ಸೋಮೇಶ್ವರ ಅವರು ವಿಧಿ ವಿಧಾನಗಳನ್ನು ನೆರವೇರಿಸಿದರು. ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು ಸೋಮೇಶ್ವರ ಸಮುದ್ರಕ್ಕೆ ಪಿಂಡ ಪ್ರದಾನ ಮಾಡಿದರು.
ಕೋವಿಡ್ ನಿಂದ ಜಿಲ್ಲೆಯಲ್ಲಿ ಮೃತಪಟ್ಟ 12 ಮಂದಿ ಅನಾಥರ ಮೃತದೇಹಗಳನ್ನ ಶಾಸ್ತ್ರೋಕ್ತವಾಗಿ ಅಂತ್ಯ ಸಂಸ್ಕಾರ ನಡೆಸಿದ್ದಲ್ಲದೆ, ಅವರೆಲ್ಲರ ಆತ್ಮಕ್ಕೆ ಸದ್ಗತಿ ದೊರೆಯಬೇಕೆಂಬ ಉದ್ದೇಶದಿಂದ ಜಿಲ್ಲಾಡಳಿತದ ವತಿಯಿಂದಲೇ ಪಿಂಡ ಪ್ರದಾನ ಮಾಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದರು.
ಸಹಾಯಕ ಆಯಕ್ತ ಮದನ್ ಮೋಹನ್, ತಹಶೀಲ್ದಾರ್ ಗುರುಪ್ರಸಾದ್, ದ.ಕ. ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಕಸ್ತೂರಿ ಪಂಜ, ದಿ.ಮೈಸೂರ್ ಇಲೆಕ್ಟ್ರಿಕಲ್ಸ್ ಲಿ. ಅಧ್ಯಕ್ಷ ಸಂತೋಷ್ ಕುಮಾರ್ ಬೋಳಿಯಾರು, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಈಶ್ವರ ಕಟೀಲು, ಕಾರ್ಯದರ್ಶಿ ಸತೀಶ್ ಕುಂಪಲ, ಕ್ಷೇತ್ರಾಧ್ಯಕ್ಷ ಚಂದ್ರಹಾಸ್ ಪಂಡಿತ್ ಹೌಸ್, ಮುಖಂಡರಾದ ಚಂದ್ರಹಾಸ್ ಉಳ್ಳಾಲ್, ಚಂದ್ರಶೇಖರ ಉಚ್ಚಿಲ್, ಜಿಪಂ ಸದಸ್ಯೆ ಧನಲಕ್ಷ್ಮಿ ಗಟ್ಟಿ, ಪ್ರಮುಖರಾದ ಯಶವಂತ ಅಮೀನ್, ಹೇಮಂತ್ ಶೆಟ್ಟಿ, ಪುರುಷೋತ್ತಮ ಕಲ್ಲಾಪು, ಸುರೇಶ್ ಭಟ್ನಗರ, ದೀಪಕ್ ಪಿಲಾರು ಮೊದಲಾದವರು ಉಪಸ್ಥಿತರಿದ್ದರು.
State BJP President Naleen Kumar Kateel performs Pind Daan of 12 unknown persons who died of Covid at Someshwara temple in Ullal.
18-07-25 10:59 pm
Bangalore Correspondent
ರಾಜ್ಯದಲ್ಲಿ ಪರಮಾಣು ಸ್ಥಾವರಕ್ಕೆ ಒಪ್ಪಿಗೆ ; ಮತ್ತೆ...
18-07-25 10:31 pm
Accident in Chitradurga: ಟಾಟಾ ಏಸ್ ಗಾಡಿ ಹರಿದು...
18-07-25 08:01 pm
ಸಿಎಂ ಸಿದ್ದರಾಮಯ್ಯ ನಿಧನ ; ಫೇಸ್ಬುಕ್ ಅವಾಂತರಕ್ಕೆ...
18-07-25 07:11 pm
Dharmasthala Case, SIT, CM Siddaramaiah: ಧರ್ಮ...
18-07-25 04:48 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
18-07-25 10:11 pm
Mangalore Correspondent
Mangalore, Floodwater, Kumpala death: ಎಡೆಬಿಡದ...
18-07-25 03:19 pm
Mangalore Rain, Thokottu: ಧಾರಕಾರ ಮಳೆ ; ತೊಕ್ಕೊ...
18-07-25 02:36 pm
"Celebrating Excellence: 37 Achievers Felicit...
17-07-25 06:30 pm
Wild Elephant Attack, Dharmasthala: ಧರ್ಮಸ್ಥಳ...
17-07-25 04:14 pm
18-07-25 12:40 pm
Mangalore Correspondent
Mangalore Fraud, WhatsApp, crime: ಕಂಪನಿಯ ಎಂಡಿ...
18-07-25 12:01 pm
Mangalore Kadri Police, Crime, Snake; ಹೆಬ್ಬಾವ...
18-07-25 11:36 am
Crore Fraud, Roshan Saldanha Arrest, Mangalor...
17-07-25 10:42 pm
Uppinangady Murder: ಕೌಟುಂಬಿಕ ಕಲಹ ; ಮಾತಿಗೆ ಮಾತ...
17-07-25 02:30 pm