ಬ್ರೇಕಿಂಗ್ ನ್ಯೂಸ್
22-06-21 09:32 pm Richard, Mangaluru ಕರಾವಳಿ
ಮಂಗಳೂರು, ಜೂನ್ 22: ಕಡೆಗೂ ಕೆಎಸ್ಸಾರ್ಟಿಸಿ ಮತ್ತು ಖಾಸಗಿ ಬಸ್ ಗಳನ್ನು ಸಂಚರಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಅವಕಾಶ ಮಾಡಿಕೊಟ್ಟಿದೆ. ಬೆಳಗ್ಗೆ ಏಳು ಗಂಟೆಯಿಂದ ಮಧ್ಯಾಹ್ನ ಎರಡು ಗಂಟೆ ವರೆಗೆ 50 ಶೇ. ಸೀಟ್ ಭರ್ತಿಯೊಂದಿಗೆ ಬಸ್ ಸಂಚಾರ ಮಾಡಲು ಅವಕಾಶ ನೀಡಲಾಗಿದೆ. ಜೂನ್ 23 ರಿಂದಲೇ ಈ ಆದೇಶ ಜಾರಿಗೆ ಬರಲಿದೆ. ಈ ಬಗ್ಗೆ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ.
ಅಲ್ಲದೆ, ಕೋವಿಡ್ ಮಾರ್ಗಸೂಚಿ ಉಲ್ಲಂಘನೆಯಾಗದೆ ಬೆಳಗ್ಗೆ 7 ರಿಂದ ಮಧ್ಯಾಹ್ನ 2ರ ವರೆಗೆ ವಾಣಿಜ್ಯ ಚಟುವಟಿಕೆಗಳನ್ನು ಕೈಗೊಳ್ಳಲು ಕೂಡ ಅವಕಾಶ ಮಾಡಲಾಗಿದೆ. ಎರಡು ದಿನಗಳಲ್ಲಿ ಎರಡು ಬಾರಿ ಆದೇಶ, ಜಿಲ್ಲಾ ಉಸ್ತುವಾರಿ ಸಚಿವರ ಹೇಳಿಕೆಯಿಂದ ಜಿಲ್ಲಾಡಳಿತದ ದಿಕ್ಕು ತಪ್ಪಿದ್ಯಾ ಎನ್ನುವ ಅನುಮಾನ ಬಂದಿದೆ.

ಇಂದು ದ.ಕ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ತುರ್ತು ಸಭೆಯನ್ನು ನಡೆಸಿದ್ದಾರೆ.
ಶುಕ್ರವಾರ ರಾತ್ರಿ 7 ರಿಂದ ಸೋಮವಾರ ಬೆಳಗ್ಗೆ 7ರ ವರೆಗೆ ಪೂರ್ಣ ಪ್ರಮಾಣದ ವಾರಾಂತ್ಯ ಕರ್ಫ್ಯೂ ಇರಲಿದೆ. ಹಾಲಿನ ಮಾರಾಟ ಕೇಂದ್ರಗಳನ್ನು ತೆರೆಯಲು ಮಾತ್ರ ಈ ಸಮಯದಲ್ಲಿ ಅವಕಾಶ ಕೊಡಲಾಗುವುದು. ಉಳಿದಂತೆ, ಯಾವುದೇ ಚಟುಚಟಿಕೆಗಳಿಗೆ ಅವಕಾಶವಿಲ್ಲ ಎಂದು ಕೋಟ ತಿಳಿಸಿದ್ದಾರೆ.
ಮದುವೆ ಹಾಗೂ ಸಮಾರಂಭಗಳಲ್ಲಿ 25 ಜನರಿಗೆ ಸೀಮಿತಗೊಳಿಸಿ ಮನೆಯಲ್ಲಿಯೇ ಮಾಡಿಕೊಳ್ಳಲು ಅವಕಾಶ ಮಾಡಿಕೊಡಲಾಗಿದೆ. ಧಾರ್ಮಿಕ ಕೇಂದ್ರ, ಕಲ್ಯಾಣ ಮಂಟಪ ಹಾಗೂ ಇತರೆ ಭವನಗಳಲ್ಲಿ ಸಮಾರಂಭಗಳನ್ನು ನಡೆಸಲು ಅವಕಾಶವಿಲ್ಲ ಎಂದರು.
ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಮಾತನಾಡಿ, ಜಿಲ್ಲೆಯಲ್ಲಿ ಕೋವಿಡ್ ಪರೀಕ್ಷೆಗಳನ್ನು ದಿನಕ್ಕೆ 9,000 ದಿಂದ 10,000 ದ ವರೆಗೆ ಮಾಡಲಾಗುತ್ತಿದೆ. ಇದಕ್ಕೆ ಸ್ಥಳೀಯ ಜನಪ್ರತಿನಿಧಿಗಳು ಸಹಕರಿಸಿ ಹೆಚ್ಚು ಪರೀಕ್ಷೆ ಆಗುವಂತೆ ನೋಡಿಕೊಳ್ಳಬೇಕು ಎಂದರು.
ಸಭೆಯಲ್ಲಿ ಶಾಸಕರಾದ ಉಮಾನಾಥ್ ಕೋಟ್ಯಾನ್, ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ರಾಜೇಶ್ ನಾಯ್ಕ್, ಪ್ರತಾಪ್ಚಂದ್ರ ಶೆಟ್ಟಿ, ಹರೀಶ್ ಕುಮಾರ್, ಪೊಲೀಸ್ ವರಿಷ್ಠಾಧಿಕಾರಿ ಹೃಷಿಕೇಶ್ ಸೋನವಾನೆ, ಡಿ.ಸಿ.ಪಿ ಹರಿರಾಂ ಶಂಕರ್, ಮಹಾನಗರ ಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕುಮಾರ್ ಹಾಗೂ ಮತ್ತಿತರರ ಅಧಿಕಾರಿಗಳು ಉಪಸ್ಥಿತರಿದ್ದರು.
With lockdown relaxations now in force, the district administration has issued an order in this direction. The below order will be implemented from June 23 to July 5. "Buses will be allowed to operate from Monday to Friday from 7 am to 1 pm with 50% capacity.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 07:49 pm
Mangalore Correspondent
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm