ಸ್ಕೂಟರ್ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾದ ಮಹಿಳಾ ಪೇದೆ ; ಆಸ್ಪತ್ರೆಗೆ ಕರೆದೊಯ್ದ ಸಚಿವ ಕೋಟ

23-06-21 03:25 pm       Mangalore Correspondent   ಕರಾವಳಿ

ಅಪಘಾತಕ್ಕೀಡಾಗಿ ಗಾಯಗೊಂಡಿದ್ದ ಮಹಿಳಾ ಪೊಲೀಸ್ ಪೇದೆಯನ್ನು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಮ್ಮದೇ ವಾಹನದಲ್ಲಿ ಆಸ್ಪತ್ರೆಗೆ ತಲುಪಿಸಿ ಮಾನವೀಯತೆ ಮೆರೆದಿದ್ದಾರೆ.

ಮಂಗಳೂರು, ಜೂನ್ 23: ಮೂಲ್ಕಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಕ್ಕೀಡಾಗಿ ರಸ್ತೆಗೆ ಬಿದ್ದು ಗಾಯಗೊಂಡಿದ್ದ ಮಹಿಳಾ ಪೊಲೀಸ್ ಪೇದೆಯನ್ನು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಮ್ಮದೇ ವಾಹನದಲ್ಲಿ ಆಸ್ಪತ್ರೆಗೆ ತಲುಪಿಸಿ ಮಾನವೀಯತೆ ಮೆರೆದಿದ್ದಾರೆ.

ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಸಿಬಂದಿಯಾಗಿರುವ ರೇಣುಕಾ ತನ್ನ ಸ್ಕೂಟರಿನಲ್ಲಿ ಮನೆಗೆ ಊಟಕ್ಕೆಂದು ತೆರಳುತ್ತಿದ್ದಾಗ ನಿಯಂತ್ರ ತಪ್ಪಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಟಾಟಾ ಏಸ್ ಪಿಕಪ್ ವಾಹನಕ್ಕೆ ಡಿಕ್ಕಿಯಾಗಿದ್ದಾರೆ. ಇದರಿಂದ ರಸ್ತೆಗೆ ಬಿದ್ದು ತಲೆಯ ಭಾಗಕ್ಕೆ ಗಾಯಗೊಂಡಿದ್ದರು. ಅದೇ ಸಂದರ್ಭದಲ್ಲಿ ಹೆದ್ದಾರಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ಕಾರು ಬಂದಿದ್ದು, ಪೊಲೀಸ್ ಪೇದೆ ಗಾಯಗೊಂಡಿದ್ದನ್ನು ಗಮನಿಸಿ ತಮ್ಮದೇ ಕಾರಿನಲ್ಲಿ ಆಸ್ಪತ್ರೆಗೆ ಒಯ್ದಿದ್ದಾರೆ.

ರೇಣುಕಾ ಅವರನ್ನು ಇನ್ನೋವಾ ಕಾರಿನಲ್ಲಿ ಕುಳ್ಳಿರಿಸಿ, ಮುಲ್ಕಿಯ ಸೈಂಟ್ ಆನ್ಸ್ ಆಸ್ಪತ್ರೆಗೆ ಸೇರಿಸಿದ್ದಾರೆ. ಮಧ್ಯಾಹ್ನ 12.20ರರ ಸುಮಾರಿಗೆ ಘಟನೆ ನಡೆದಿದ್ದು, ಕೋಟ ಶ್ರೀನಿವಾಸ ಪೂಜಾರಿಯವರು ಉಡುಪಿ ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದರು.

Video: 

ಸ್ಕೂಟರ್ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾದ ಮಹಿಳಾ ಪೇದೆ ; ಆಸ್ಪತ್ರೆಗೆ ಕರೆದೊಯ್ದ ಸಚಿವ ಕೋಟ

ಸ್ಕೂಟರ್ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾದ ಮಹಿಳಾ ಪೇದೆ ; ಆಸ್ಪತ್ರೆಗೆ ಕರೆದೊಯ್ದ ಸಚಿವ ಕೋಟ #kotapoojary #accident #accidentnewsmangalore

Posted by Headline Karnataka on Wednesday, June 23, 2021

Mangalore Minister Kota Srinivas Poojary shifts accident victim woman police constable in his own car to hospital after the woman fell off-road when she lost control.