ಬ್ರೇಕಿಂಗ್ ನ್ಯೂಸ್
23-06-21 04:06 pm Mangalore Correspondent ಕರಾವಳಿ
ಉಳ್ಳಾಲ, ಜೂ.23: ವಿದ್ಯಾರ್ಥಿಗಳು ಬಲಿಷ್ಠರಾದರೆ ಮಾತ್ರ ಈ ದೇಶ ಬಲಿಷ್ಠವಾಗುತ್ತದೆ ಹೊರತು ಮಂತ್ರಿಗಳು, ಸಂಸದರು, ಶಾಸಕರಿಂದ ಸಾಧ್ಯವಿಲ್ಲ. ಹಾಗಾಗಿ ಶಿಕ್ಷಣದಲ್ಲಿ ಸ್ಪರ್ಧೆಗೆ ಸರಕಾರ ಎಲ್ಲ ರೀತಿಯ ವ್ಯವಸ್ಥೆ ಮಾಡುತ್ತಿದ್ದು ಶಿಕ್ಷಣಕ್ಕೆ ಆದ್ಯತೆ ನೀಡುವುದೇ ಮುಖ್ಯ ಗುರಿ ಎಂದು ಶಾಸಕ ಯು.ಟಿ. ಖಾದರ್ ಹೇಳಿದರು.
ಅವರು ಇಂದು ಕುರ್ನಾಡು ಮುಡಿಪುವಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ಮಾರ್ಟ್ ಕ್ಲಾಸ್ ಹಾಗೂ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ ಗಳನ್ನು ವಿತರಿಸಿ ಮಾತನಾಡಿದರು.
ಯಾವುದೇ ಅಭಿವೃದ್ಧಿಯಲ್ಲಿ ಕನಿಷ್ಟ ಮುಂದಿನ ಮೂವತ್ತು ವರ್ಷಗಳ ದೂರದೃಷ್ಟಿ ಇರಬೇಕು. ಇಲ್ಲಿ ಸುಂದರ ಪರಿಸರ, ಸುಂದರ ಕಟ್ಟಡ, ನುರಿತ ಉಪನ್ಯಾಸಕರು, ಸಿಬ್ಬಂದಿ ಎಲ್ಲ ಸೌಲಭ್ಯಗಳಿಂದ ಸುಸಜ್ಜಿತವಾಗಿದ್ದು ಈಗ ಕಲಿಯುತ್ತಿರುವ ವಿದ್ಯಾರ್ಥಿಗಳ ಸಾಧನೆ ಮುಂದೆ ಕಲಿಯಲು ಬರುವ ವಿದ್ಯಾರ್ಥಿಗಳಿಗೆ ಪೂರಕವಾಗಬೇಕು ಎಂದರು.


ಕಾಲೇಜಿನ ಪ್ರಾಂಶುಪಾಲರಾದ ಗಿರಿಧರ್ ರಾವ್ ಪ್ರಾಸ್ತಾವಿಕ ಮಾತುಗಳನ್ನಾಡಿ ಮುಡಿಪು ಪ್ರಥಮ ದರ್ಜೆ ಕಾಲೇಜಿಗೆ ಹೊಸ ಕಟ್ಟಡದ ಜೊತೆಗೆ ಸ್ಮಾರ್ಟ್ ಕ್ಲಾಸ್ ಯೋಜನೆಯಡಿ ಮೂರು ತರಗತಿ ನಡೆಸಿಕೊಡಲು ಹಾಗೂ ಪ್ರಥಮ ಪದವಿಯ 93 ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ ದೊರಕಿಸಿಕೊಟ್ಟಿರುವುದು ಶ್ಲಾಘನೀಯ. ವರ್ಷದ ಹಿಂದೆ ಒಂದು ತರಗತಿಯಲ್ಲಿದ್ದ ಕೆಲವು ವರ್ಗದ ವಿದ್ಯಾರ್ಥಿಗಳಿಗೆ ಮಾತ್ರ ಟ್ಯಾಬ್ ಸಿಗುತ್ತಿದ್ದು , ಈಗ ತರಗತಿಯ ಎಲ್ಲ ವಿದ್ಯಾರ್ಥಿಗಳಿಗೆ ದೊರಕಿರುವುದು ತುಂಬ ಖುಷಿ ಕೊಟ್ಟಿದೆ ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಸದಸ್ಯೆ ಮಮತಾ ಡಿ.ಎಸ್. ಗಟ್ಟಿ, ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಪ್ರಶಾಂತ ಕಾಜವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಚಂದ್ರಹಾಸ್ ಕರ್ಕೇರ, ಕಾಲೇಜಿನ ಐಟಿ ಸಂಚಾಲಕ ಅಜಯ್, ಅಬ್ದುಲ್ ಜಲೀಲ್ ಮೋಂಟುಗೋಳಿ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು, ಪದವಿಪೂರ್ವ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
Mudupi government school inaugurates Smart Class with tabs.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm