ಬ್ರೇಕಿಂಗ್ ನ್ಯೂಸ್
23-06-21 06:54 pm Richard, HK Mangaluru ಕರಾವಳಿ
ಉಳ್ಳಾಲ, ಜೂ.23: ಇಂಜಿನಿಯರಿಂಗ್ ಪದವಿ ಮುಗಿಸಿದ್ದ ಯುವಕನೊಬ್ಬ ಸೋಮೇಶ್ವರ ಕಡಲ ಕಿನಾರೆಯ ರುದ್ರಪಾದೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಸೋಮೇಶ್ವರ ಪುರಸಭಾ ಕಚೇರಿ ಬಳಿಯ ನಿವಾಸಿ ಪವನ್ ಭಟ್ (30) ಆತ್ಮಹತ್ಯೆಗೈದ ಯುವಕ. ಗಣೇಶ್ ಪ್ರಸನ್ನ ಮತ್ತು ರಾಜೇಶ್ವರಿ ದಂಪತಿಯ ಹಿರಿಯ ಮಗನಾದ ಪವನ್ ಮೈಸೂರಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮುಗಿಸಿದ್ದ ಎನ್ನಲಾಗಿದೆ. ಮೈಸೂರಿನಿಂದ ಬಂದ ಬಳಿಕ ನಿತ್ಯವೂ ಸೋಮೇಶ್ವರ ದೇವಸ್ಥಾನಕ್ಕೆ ಪವನ್ ಬಂದು ಹೋಗುತ್ತಿದ್ದರೆನ್ನಲಾಗಿದೆ.
ಇಂದು ಸಂಜೆ 4.30ರ ಹೊತ್ತಿಗೆ ಸಮುದ್ರ ಕಿನಾರೆಗೆ ಬಂದಿದ್ದ ಪವನ್, ರುದ್ರಪಾದೆಯ ಮೇಲಿಂದ ಏಕಾಏಕಿ ಸಮುದ್ರಕ್ಕೆ ಜಿಗಿದದ್ದನ್ನ ಸ್ಥಳೀಯರು ಕಂಡಿದ್ದಾರೆ.





ಅಲೆಗಳ ಜೊತೆ ಸೆಣಸಾಡಿದ ಈಜುರಕ್ಷಕರು !
ಪವನ್ ಹಾರಿದ್ದನ್ನು ನೋಡಿದ ಈಜು ರಕ್ಷಕರು ರಕ್ಷಣೆಗೆ ಧಾವಿಸಿದ್ದಾರೆ. ಆದರೆ, ರುದ್ರಪಾದೆಯ ಕೆಳಭಾಗದಲ್ಲಿ ತೀವ್ರ ಆಳ ಇರುವುದರಿಂದ ಸುಳಿ ಇದ್ದು ಸಕಾಲದಲ್ಲಿ ರಕ್ಷಣೆ ಸಾಧ್ಯವಾಗಲಿಲ್ಲ.
ಬಳಿಕ ಶವ ಅಲೆಗಳಲ್ಲಿ ತೇಲಿ ಬಂದಿದ್ದನ್ನು ಗಮನಿಸಿದ ತಂಡ ಕಡಲಿನ ಅಬ್ಬರ ಜಾಸ್ತಿ ಇದ್ದರೂ ಗೃಹ ರಕ್ಷಕ ಸಿಬ್ಬಂದಿ ಪ್ರಸಾದ್ ಸುವರ್ಣ, ವೀನುಗಾರರಾದ ಸಾಗರ್, ಕರಾವಳಿ ಕಾವಲು ಪಡೆಯ ಮೋಹನ್, ಸುಜಿತ್, ಸೋಮೇಶ್ವರ ದೇವಸ್ಥಾನದ ಸಿಬ್ಬಂದಿ ವಿನಾಯಕ ಸೇರಿ ಅಲೆಗಳೊಂದಿಗೆ ಸೆಣಸಾಡಿ ಮೃತದೇಹವನ್ನ ದಡಕ್ಕೆ ಎಳೆದಿದ್ದಾರೆ.
ಮೃತ ಪವನ್ ಪ್ರತಿಭಾನ್ವಿತರಾಗಿದ್ದು ಖಿನ್ನತೆಯಿಂದಾಗಿ ಸಾವಿಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ. ಪವನ್ ಸೋಮೇಶ್ವರ ಆನಂದಾಶ್ರಮ ಪ್ರೌಢಶಾಲೆಯ ಹಿಂದಿ ಪಂಡಿತರೆಂದೇ ಖ್ಯಾತರಾದ ನಿವೃತ್ತ ಅಧ್ಯಾಪಕರಾದ ಕೆ.ವಿ. ಕೃಷ್ಣ ಭಟ್ ಅವರ ಮೊಮ್ಮಗನಾಗಿದ್ದು ವಿದ್ಯಾರ್ಥಿ ದಿಸೆಯಲ್ಲೇ ಪ್ರತಿಭಾನ್ವಿತನಾಗಿದ್ದ.
ಮೃತಪಟ್ಟ ಮಗನನ್ನು ಕಡಲ ಕಿನಾರೆಯಲ್ಲೇ ಆಲಂಗಿಸಿ ರೋದಿಸುತ್ತಿದ್ದ ತಾಯಿ ರಾಜೇಶ್ವರಿ ಅವರ ಗೋಳಾಟ ಅಲ್ಲಿ ಸೇರಿದ್ದ ಸಾರ್ವಜನಿಕರು ಮತ್ತು ಪೊಲೀಸರನ್ನು ಮನ ಕಲಕುವಂತೆ ಮಾಡಿತ್ತು.
Mangalore Engineer commits suicide after falling into sea in Someshwara at Ullal . The deceased has been identified as Pawan Bhat (30).
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 09:50 am
HK News Staffer
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
08-09-26 02:26 pm
HK News Staffer
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am
ಆಸ್ಪತ್ರೆ ಸಿಬ್ಬಂದಿಗೆ ಪ್ರಜ್ಞೆ ತಪ್ಪಿಸಿ ಲೈಂಗಿಕ ದೌ...
07-09-26 08:56 pm
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm