ಬ್ರೇಕಿಂಗ್ ನ್ಯೂಸ್
23-06-21 06:54 pm Richard, HK Mangaluru ಕರಾವಳಿ
ಉಳ್ಳಾಲ, ಜೂ.23: ಇಂಜಿನಿಯರಿಂಗ್ ಪದವಿ ಮುಗಿಸಿದ್ದ ಯುವಕನೊಬ್ಬ ಸೋಮೇಶ್ವರ ಕಡಲ ಕಿನಾರೆಯ ರುದ್ರಪಾದೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಸೋಮೇಶ್ವರ ಪುರಸಭಾ ಕಚೇರಿ ಬಳಿಯ ನಿವಾಸಿ ಪವನ್ ಭಟ್ (30) ಆತ್ಮಹತ್ಯೆಗೈದ ಯುವಕ. ಗಣೇಶ್ ಪ್ರಸನ್ನ ಮತ್ತು ರಾಜೇಶ್ವರಿ ದಂಪತಿಯ ಹಿರಿಯ ಮಗನಾದ ಪವನ್ ಮೈಸೂರಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮುಗಿಸಿದ್ದ ಎನ್ನಲಾಗಿದೆ. ಮೈಸೂರಿನಿಂದ ಬಂದ ಬಳಿಕ ನಿತ್ಯವೂ ಸೋಮೇಶ್ವರ ದೇವಸ್ಥಾನಕ್ಕೆ ಪವನ್ ಬಂದು ಹೋಗುತ್ತಿದ್ದರೆನ್ನಲಾಗಿದೆ.
ಇಂದು ಸಂಜೆ 4.30ರ ಹೊತ್ತಿಗೆ ಸಮುದ್ರ ಕಿನಾರೆಗೆ ಬಂದಿದ್ದ ಪವನ್, ರುದ್ರಪಾದೆಯ ಮೇಲಿಂದ ಏಕಾಏಕಿ ಸಮುದ್ರಕ್ಕೆ ಜಿಗಿದದ್ದನ್ನ ಸ್ಥಳೀಯರು ಕಂಡಿದ್ದಾರೆ.
ಅಲೆಗಳ ಜೊತೆ ಸೆಣಸಾಡಿದ ಈಜುರಕ್ಷಕರು !
ಪವನ್ ಹಾರಿದ್ದನ್ನು ನೋಡಿದ ಈಜು ರಕ್ಷಕರು ರಕ್ಷಣೆಗೆ ಧಾವಿಸಿದ್ದಾರೆ. ಆದರೆ, ರುದ್ರಪಾದೆಯ ಕೆಳಭಾಗದಲ್ಲಿ ತೀವ್ರ ಆಳ ಇರುವುದರಿಂದ ಸುಳಿ ಇದ್ದು ಸಕಾಲದಲ್ಲಿ ರಕ್ಷಣೆ ಸಾಧ್ಯವಾಗಲಿಲ್ಲ.
ಬಳಿಕ ಶವ ಅಲೆಗಳಲ್ಲಿ ತೇಲಿ ಬಂದಿದ್ದನ್ನು ಗಮನಿಸಿದ ತಂಡ ಕಡಲಿನ ಅಬ್ಬರ ಜಾಸ್ತಿ ಇದ್ದರೂ ಗೃಹ ರಕ್ಷಕ ಸಿಬ್ಬಂದಿ ಪ್ರಸಾದ್ ಸುವರ್ಣ, ವೀನುಗಾರರಾದ ಸಾಗರ್, ಕರಾವಳಿ ಕಾವಲು ಪಡೆಯ ಮೋಹನ್, ಸುಜಿತ್, ಸೋಮೇಶ್ವರ ದೇವಸ್ಥಾನದ ಸಿಬ್ಬಂದಿ ವಿನಾಯಕ ಸೇರಿ ಅಲೆಗಳೊಂದಿಗೆ ಸೆಣಸಾಡಿ ಮೃತದೇಹವನ್ನ ದಡಕ್ಕೆ ಎಳೆದಿದ್ದಾರೆ.
ಮೃತ ಪವನ್ ಪ್ರತಿಭಾನ್ವಿತರಾಗಿದ್ದು ಖಿನ್ನತೆಯಿಂದಾಗಿ ಸಾವಿಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ. ಪವನ್ ಸೋಮೇಶ್ವರ ಆನಂದಾಶ್ರಮ ಪ್ರೌಢಶಾಲೆಯ ಹಿಂದಿ ಪಂಡಿತರೆಂದೇ ಖ್ಯಾತರಾದ ನಿವೃತ್ತ ಅಧ್ಯಾಪಕರಾದ ಕೆ.ವಿ. ಕೃಷ್ಣ ಭಟ್ ಅವರ ಮೊಮ್ಮಗನಾಗಿದ್ದು ವಿದ್ಯಾರ್ಥಿ ದಿಸೆಯಲ್ಲೇ ಪ್ರತಿಭಾನ್ವಿತನಾಗಿದ್ದ.
ಮೃತಪಟ್ಟ ಮಗನನ್ನು ಕಡಲ ಕಿನಾರೆಯಲ್ಲೇ ಆಲಂಗಿಸಿ ರೋದಿಸುತ್ತಿದ್ದ ತಾಯಿ ರಾಜೇಶ್ವರಿ ಅವರ ಗೋಳಾಟ ಅಲ್ಲಿ ಸೇರಿದ್ದ ಸಾರ್ವಜನಿಕರು ಮತ್ತು ಪೊಲೀಸರನ್ನು ಮನ ಕಲಕುವಂತೆ ಮಾಡಿತ್ತು.
Mangalore Engineer commits suicide after falling into sea in Someshwara at Ullal . The deceased has been identified as Pawan Bhat (30).
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm