ಬ್ರೇಕಿಂಗ್ ನ್ಯೂಸ್
23-06-21 06:54 pm Richard, HK Mangaluru ಕರಾವಳಿ
ಉಳ್ಳಾಲ, ಜೂ.23: ಇಂಜಿನಿಯರಿಂಗ್ ಪದವಿ ಮುಗಿಸಿದ್ದ ಯುವಕನೊಬ್ಬ ಸೋಮೇಶ್ವರ ಕಡಲ ಕಿನಾರೆಯ ರುದ್ರಪಾದೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಸೋಮೇಶ್ವರ ಪುರಸಭಾ ಕಚೇರಿ ಬಳಿಯ ನಿವಾಸಿ ಪವನ್ ಭಟ್ (30) ಆತ್ಮಹತ್ಯೆಗೈದ ಯುವಕ. ಗಣೇಶ್ ಪ್ರಸನ್ನ ಮತ್ತು ರಾಜೇಶ್ವರಿ ದಂಪತಿಯ ಹಿರಿಯ ಮಗನಾದ ಪವನ್ ಮೈಸೂರಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮುಗಿಸಿದ್ದ ಎನ್ನಲಾಗಿದೆ. ಮೈಸೂರಿನಿಂದ ಬಂದ ಬಳಿಕ ನಿತ್ಯವೂ ಸೋಮೇಶ್ವರ ದೇವಸ್ಥಾನಕ್ಕೆ ಪವನ್ ಬಂದು ಹೋಗುತ್ತಿದ್ದರೆನ್ನಲಾಗಿದೆ.
ಇಂದು ಸಂಜೆ 4.30ರ ಹೊತ್ತಿಗೆ ಸಮುದ್ರ ಕಿನಾರೆಗೆ ಬಂದಿದ್ದ ಪವನ್, ರುದ್ರಪಾದೆಯ ಮೇಲಿಂದ ಏಕಾಏಕಿ ಸಮುದ್ರಕ್ಕೆ ಜಿಗಿದದ್ದನ್ನ ಸ್ಥಳೀಯರು ಕಂಡಿದ್ದಾರೆ.





ಅಲೆಗಳ ಜೊತೆ ಸೆಣಸಾಡಿದ ಈಜುರಕ್ಷಕರು !
ಪವನ್ ಹಾರಿದ್ದನ್ನು ನೋಡಿದ ಈಜು ರಕ್ಷಕರು ರಕ್ಷಣೆಗೆ ಧಾವಿಸಿದ್ದಾರೆ. ಆದರೆ, ರುದ್ರಪಾದೆಯ ಕೆಳಭಾಗದಲ್ಲಿ ತೀವ್ರ ಆಳ ಇರುವುದರಿಂದ ಸುಳಿ ಇದ್ದು ಸಕಾಲದಲ್ಲಿ ರಕ್ಷಣೆ ಸಾಧ್ಯವಾಗಲಿಲ್ಲ.
ಬಳಿಕ ಶವ ಅಲೆಗಳಲ್ಲಿ ತೇಲಿ ಬಂದಿದ್ದನ್ನು ಗಮನಿಸಿದ ತಂಡ ಕಡಲಿನ ಅಬ್ಬರ ಜಾಸ್ತಿ ಇದ್ದರೂ ಗೃಹ ರಕ್ಷಕ ಸಿಬ್ಬಂದಿ ಪ್ರಸಾದ್ ಸುವರ್ಣ, ವೀನುಗಾರರಾದ ಸಾಗರ್, ಕರಾವಳಿ ಕಾವಲು ಪಡೆಯ ಮೋಹನ್, ಸುಜಿತ್, ಸೋಮೇಶ್ವರ ದೇವಸ್ಥಾನದ ಸಿಬ್ಬಂದಿ ವಿನಾಯಕ ಸೇರಿ ಅಲೆಗಳೊಂದಿಗೆ ಸೆಣಸಾಡಿ ಮೃತದೇಹವನ್ನ ದಡಕ್ಕೆ ಎಳೆದಿದ್ದಾರೆ.
ಮೃತ ಪವನ್ ಪ್ರತಿಭಾನ್ವಿತರಾಗಿದ್ದು ಖಿನ್ನತೆಯಿಂದಾಗಿ ಸಾವಿಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ. ಪವನ್ ಸೋಮೇಶ್ವರ ಆನಂದಾಶ್ರಮ ಪ್ರೌಢಶಾಲೆಯ ಹಿಂದಿ ಪಂಡಿತರೆಂದೇ ಖ್ಯಾತರಾದ ನಿವೃತ್ತ ಅಧ್ಯಾಪಕರಾದ ಕೆ.ವಿ. ಕೃಷ್ಣ ಭಟ್ ಅವರ ಮೊಮ್ಮಗನಾಗಿದ್ದು ವಿದ್ಯಾರ್ಥಿ ದಿಸೆಯಲ್ಲೇ ಪ್ರತಿಭಾನ್ವಿತನಾಗಿದ್ದ.
ಮೃತಪಟ್ಟ ಮಗನನ್ನು ಕಡಲ ಕಿನಾರೆಯಲ್ಲೇ ಆಲಂಗಿಸಿ ರೋದಿಸುತ್ತಿದ್ದ ತಾಯಿ ರಾಜೇಶ್ವರಿ ಅವರ ಗೋಳಾಟ ಅಲ್ಲಿ ಸೇರಿದ್ದ ಸಾರ್ವಜನಿಕರು ಮತ್ತು ಪೊಲೀಸರನ್ನು ಮನ ಕಲಕುವಂತೆ ಮಾಡಿತ್ತು.
Mangalore Engineer commits suicide after falling into sea in Someshwara at Ullal . The deceased has been identified as Pawan Bhat (30).
02-04-26 09:31 pm
HK News Staffer
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
ಸಂಸದ ರಾಘವ್ ಚಡ್ಡಾಗೆ ಆಪ್ ಶಾಕ್; ರಾಜ್ಯಸಭೆ ಉಪ ನಾಯಕ...
02-04-26 07:44 pm
ಆಟವಾಡುತ್ತಿದ್ದ ಮಗು ನೀರಿನ ಬಕೆಟ್ಗೆ ಬಿದ್ದು ಸಾವು;...
02-04-26 03:56 pm
03-04-26 07:35 am
HK News Staffer
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm