ಬ್ರೇಕಿಂಗ್ ನ್ಯೂಸ್
26-06-21 10:51 pm Mangaluru Correspondent ಕರಾವಳಿ
ಮಂಗಳೂರು, ಜೂನ್ 26: ಹಂಪನಕಟ್ಟೆಯ ಶ್ರೀನಿವಾಸ ಹೊಟೇಲ್ ಕಟ್ಟಡ ಕುಸಿತದ ಭೀತಿ ಎದುರಿಸುತ್ತಿದೆ. ಕಟ್ಟಡ ಕುಸಿಯುವ ಭೀತಿಯಿಂದಾಗಿ ಆ ಭಾಗದಲ್ಲಿ ಪೊಲೀಸರು ರಸ್ತೆ ಸಂಚಾರವನ್ನು ಕಡಿತಗೊಳಿಸಿದ್ದಾರೆ ಎಂಬ ವದಂತಿ ಹರಡಿತ್ತು. ಈ ಬಗ್ಗೆ ಪೊಲೀಸರಲ್ಲಿ ಕೇಳಿದರೆ ಯಾರಿಗೂ ಮಾಹಿತಿ ಇರಲಿಲ್ಲ.
ಈ ಬಗ್ಗೆ ಶ್ರೀನಿವಾಸ ಕಾಲೇಜ್ ಆಫ್ ಹೊಟೇಲ್ ಮ್ಯಾನೇಜ್ಮೆಂಟಿನ ನಿರಂಜನ್ ರಾವ್ ಬಳಿ ಮಾಹಿತಿ ಕೇಳಿದಾಗ, ವಾಟ್ಸಪ್ ನಲ್ಲಿ ಏನೇನೋ ಬರುತ್ತಿರುವುದು ಗಮನಕ್ಕೆ ಬಂದಿದೆ. ನಾವೇನು ಮಾಡೋಕಾಗುತ್ತದೆ. ಕಟ್ಟಡದ ಕೆಲವು ಕಡೆ ನವೀಕರಣದ ಕಾಮಗಾರಿ ನಡೆಯುತ್ತಿದೆ. ಮಳೆಯಿಂದಾಗಿ ಕೆಲಸಕ್ಕೆ ಅಡ್ಡಿಯಾಗಿದೆ. ವಿಂಡೋ ಭಾಗದಲ್ಲಿ ಕವರಿಂಗ್ ಕೆಲಸ ನಡೆಯುತ್ತಿದ್ದು ಸಿಮೆಂಟ್ ಚಪ್ಪಡಿ ಕೆಳಗೆ ಬಿದ್ದು ಯಾರದಾದ್ರೂ ತಲೆಗೆ ಬೀಳುವುದು ಬೇಡ ಎಂದು ಟರ್ಪಾಲ್ ಹಾಕಿ ಮುಚ್ಚಲಾಗಿದೆ. ಇದು ಬಿಟ್ಟರೆ, ಇಡೀ ಕಟ್ಟಡ ಕುಸಿಯುವಂಥದ್ದೇನು ನಡೆದಿಲ್ಲ. ಟರ್ಪಾಲ್ ಹಾಕಿದ್ದು ಮತ್ತು ಕೆಲಸ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕೆಲವು ಕಡೆ ಸಿಮೆಂಟ್ ಅಗೆದಿರುವುದನ್ನು ನೋಡಿ ತಪ್ಪಾಗಿ ಅರ್ಥ ಮಾಡಿಕೊಂಡಿದ್ದಾರೆ ಎಂದು ಹೇಳಿದರು.
ಈ ಬಗ್ಗೆ ಮಂಗಳೂರು ನಗರ ಟ್ರಾಫಿಕ್ ಎಸಿಪಿ ನಟರಾಜ್ ಬಳಿ ಕೇಳಿದರೆ, ಜಾಲತಾಣದಲ್ಲಿ ಈ ರೀತಿ ವದಂತಿ ಹರಡುತ್ತಿರುವುದು ತಿಳಿದುಬಂದಿದೆ. ಆದರೆ, ಅಂತಹ ಯಾವುದೇ ಮಾಹಿತಿ ಇಲ್ಲ. ಶ್ರೀನಿವಾಸ ಹೊಟೇಲ್ ಕಟ್ಟಡದಲ್ಲಿ ಕೆಲಸ ನಡೆಯುತ್ತಿರುವುದು ಗೊತ್ತಿದೆ. ಅದನ್ನೇ ಕೆಲವರು ತಪ್ಪಾಗಿ ಅರ್ಥೈಸಿ ಈ ರೀತಿ ಸುದ್ದಿ ಹಬ್ಬಿಸಿದ್ದಾರೆ ಎಂದು ತಿಳಿಸಿದ್ದಾರೆ.
ವಾಟ್ಸಪ್ ಜಾಲತಾಣದಲ್ಲಿ ಹರಡುತ್ತಿರುವ ವದಂತಿ ಕೇಳಿ ಶ್ರೀನಿವಾಸ ಹೊಟೇಲ್ ಕಟ್ಟಡ ಕುಸಿಯುತ್ತಿದೆಯೇ ಎನ್ನುವ ಆತಂಕದಲ್ಲಿ ಬಹಳಷ್ಟು ಮಂದಿ ಮಾಧ್ಯಮದ ಮಂದಿಗೆ ಪ್ರಶ್ನೆ ಮಾಡಿದ್ದರು.
Mangalore Fake rumour spreads about Hotel Srinivas about to collapse management says its renovation
18-07-25 10:59 pm
Bangalore Correspondent
ರಾಜ್ಯದಲ್ಲಿ ಪರಮಾಣು ಸ್ಥಾವರಕ್ಕೆ ಒಪ್ಪಿಗೆ ; ಮತ್ತೆ...
18-07-25 10:31 pm
Accident in Chitradurga: ಟಾಟಾ ಏಸ್ ಗಾಡಿ ಹರಿದು...
18-07-25 08:01 pm
ಸಿಎಂ ಸಿದ್ದರಾಮಯ್ಯ ನಿಧನ ; ಫೇಸ್ಬುಕ್ ಅವಾಂತರಕ್ಕೆ...
18-07-25 07:11 pm
Dharmasthala Case, SIT, CM Siddaramaiah: ಧರ್ಮ...
18-07-25 04:48 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
18-07-25 10:11 pm
Mangalore Correspondent
Mangalore, Floodwater, Kumpala death: ಎಡೆಬಿಡದ...
18-07-25 03:19 pm
Mangalore Rain, Thokottu: ಧಾರಕಾರ ಮಳೆ ; ತೊಕ್ಕೊ...
18-07-25 02:36 pm
"Celebrating Excellence: 37 Achievers Felicit...
17-07-25 06:30 pm
Wild Elephant Attack, Dharmasthala: ಧರ್ಮಸ್ಥಳ...
17-07-25 04:14 pm
18-07-25 12:40 pm
Mangalore Correspondent
Mangalore Fraud, WhatsApp, crime: ಕಂಪನಿಯ ಎಂಡಿ...
18-07-25 12:01 pm
Mangalore Kadri Police, Crime, Snake; ಹೆಬ್ಬಾವ...
18-07-25 11:36 am
Crore Fraud, Roshan Saldanha Arrest, Mangalor...
17-07-25 10:42 pm
Uppinangady Murder: ಕೌಟುಂಬಿಕ ಕಲಹ ; ಮಾತಿಗೆ ಮಾತ...
17-07-25 02:30 pm