ಬ್ರೇಕಿಂಗ್ ನ್ಯೂಸ್
26-06-21 10:51 pm Mangaluru Correspondent ಕರಾವಳಿ
ಮಂಗಳೂರು, ಜೂನ್ 26: ಹಂಪನಕಟ್ಟೆಯ ಶ್ರೀನಿವಾಸ ಹೊಟೇಲ್ ಕಟ್ಟಡ ಕುಸಿತದ ಭೀತಿ ಎದುರಿಸುತ್ತಿದೆ. ಕಟ್ಟಡ ಕುಸಿಯುವ ಭೀತಿಯಿಂದಾಗಿ ಆ ಭಾಗದಲ್ಲಿ ಪೊಲೀಸರು ರಸ್ತೆ ಸಂಚಾರವನ್ನು ಕಡಿತಗೊಳಿಸಿದ್ದಾರೆ ಎಂಬ ವದಂತಿ ಹರಡಿತ್ತು. ಈ ಬಗ್ಗೆ ಪೊಲೀಸರಲ್ಲಿ ಕೇಳಿದರೆ ಯಾರಿಗೂ ಮಾಹಿತಿ ಇರಲಿಲ್ಲ.
ಈ ಬಗ್ಗೆ ಶ್ರೀನಿವಾಸ ಕಾಲೇಜ್ ಆಫ್ ಹೊಟೇಲ್ ಮ್ಯಾನೇಜ್ಮೆಂಟಿನ ನಿರಂಜನ್ ರಾವ್ ಬಳಿ ಮಾಹಿತಿ ಕೇಳಿದಾಗ, ವಾಟ್ಸಪ್ ನಲ್ಲಿ ಏನೇನೋ ಬರುತ್ತಿರುವುದು ಗಮನಕ್ಕೆ ಬಂದಿದೆ. ನಾವೇನು ಮಾಡೋಕಾಗುತ್ತದೆ. ಕಟ್ಟಡದ ಕೆಲವು ಕಡೆ ನವೀಕರಣದ ಕಾಮಗಾರಿ ನಡೆಯುತ್ತಿದೆ. ಮಳೆಯಿಂದಾಗಿ ಕೆಲಸಕ್ಕೆ ಅಡ್ಡಿಯಾಗಿದೆ. ವಿಂಡೋ ಭಾಗದಲ್ಲಿ ಕವರಿಂಗ್ ಕೆಲಸ ನಡೆಯುತ್ತಿದ್ದು ಸಿಮೆಂಟ್ ಚಪ್ಪಡಿ ಕೆಳಗೆ ಬಿದ್ದು ಯಾರದಾದ್ರೂ ತಲೆಗೆ ಬೀಳುವುದು ಬೇಡ ಎಂದು ಟರ್ಪಾಲ್ ಹಾಕಿ ಮುಚ್ಚಲಾಗಿದೆ. ಇದು ಬಿಟ್ಟರೆ, ಇಡೀ ಕಟ್ಟಡ ಕುಸಿಯುವಂಥದ್ದೇನು ನಡೆದಿಲ್ಲ. ಟರ್ಪಾಲ್ ಹಾಕಿದ್ದು ಮತ್ತು ಕೆಲಸ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕೆಲವು ಕಡೆ ಸಿಮೆಂಟ್ ಅಗೆದಿರುವುದನ್ನು ನೋಡಿ ತಪ್ಪಾಗಿ ಅರ್ಥ ಮಾಡಿಕೊಂಡಿದ್ದಾರೆ ಎಂದು ಹೇಳಿದರು.

ಈ ಬಗ್ಗೆ ಮಂಗಳೂರು ನಗರ ಟ್ರಾಫಿಕ್ ಎಸಿಪಿ ನಟರಾಜ್ ಬಳಿ ಕೇಳಿದರೆ, ಜಾಲತಾಣದಲ್ಲಿ ಈ ರೀತಿ ವದಂತಿ ಹರಡುತ್ತಿರುವುದು ತಿಳಿದುಬಂದಿದೆ. ಆದರೆ, ಅಂತಹ ಯಾವುದೇ ಮಾಹಿತಿ ಇಲ್ಲ. ಶ್ರೀನಿವಾಸ ಹೊಟೇಲ್ ಕಟ್ಟಡದಲ್ಲಿ ಕೆಲಸ ನಡೆಯುತ್ತಿರುವುದು ಗೊತ್ತಿದೆ. ಅದನ್ನೇ ಕೆಲವರು ತಪ್ಪಾಗಿ ಅರ್ಥೈಸಿ ಈ ರೀತಿ ಸುದ್ದಿ ಹಬ್ಬಿಸಿದ್ದಾರೆ ಎಂದು ತಿಳಿಸಿದ್ದಾರೆ.
ವಾಟ್ಸಪ್ ಜಾಲತಾಣದಲ್ಲಿ ಹರಡುತ್ತಿರುವ ವದಂತಿ ಕೇಳಿ ಶ್ರೀನಿವಾಸ ಹೊಟೇಲ್ ಕಟ್ಟಡ ಕುಸಿಯುತ್ತಿದೆಯೇ ಎನ್ನುವ ಆತಂಕದಲ್ಲಿ ಬಹಳಷ್ಟು ಮಂದಿ ಮಾಧ್ಯಮದ ಮಂದಿಗೆ ಪ್ರಶ್ನೆ ಮಾಡಿದ್ದರು.
Mangalore Fake rumour spreads about Hotel Srinivas about to collapse management says its renovation
07-03-26 08:05 pm
HK News Staffer
ಗ್ಯಾರಂಟಿ ಯೋಜನೆ ಸರಿದೂಗಿಸಲು ಸಿದ್ದರಾಮಯ್ಯ ಎಂಟು ಲಕ...
07-03-26 07:17 pm
ಜನಸಂಖ್ಯೆ ಕುಸಿತ ತಡೆಯಲು ಆಂಧ್ರ ಸರ್ಕಾರ ಹೊಸ ಯೋಜನೆ...
07-03-26 12:01 pm
ಕಾರವಾರ, ಯಾದಗಿರಿಗೆ 100 ಕೋಟಿ ರೂ. ವೆಚ್ಚದಲ್ಲಿ ಸೂಪ...
06-03-26 07:03 pm
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
07-03-26 11:58 am
HK News Staffer
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
07-03-26 10:17 pm
HK News Staffer
ತಾಲೂಕು ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ; ಹೆರಿಗೆ ಸ...
07-03-26 09:45 pm
ನೇತ್ರಾವತಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ ಪತ್...
07-03-26 07:20 pm
ಬಜೆಟ್ ನಲ್ಲಿ ಮೀನುಗಾರಿಕೆ ಕ್ಷೇತ್ರಕ್ಕೆ ಬಂಪರ್; ಉಚಿ...
06-03-26 07:01 pm
ಮಂಗಳೂರಿನ ನಿವೃತ್ತ ಬ್ಯಾಂಕ್ ಉದ್ಯೋಗಿ ಲೇಡಿಗೆ ಸೈಬರ್...
06-03-26 04:08 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm