ಬ್ರೇಕಿಂಗ್ ನ್ಯೂಸ್
28-06-21 12:55 pm Mangalore Correspondent ಕರಾವಳಿ
ಉಳ್ಳಾಲ, ಜೂ.28: ರಾಷ್ಟ್ರೀಯ ಹೆದ್ದಾರಿ ಕೋಟೆಕಾರು ಬೀರಿಯಲ್ಲಿರುವ ಟಿಕ್ಕ ಪಾಯಿಂಟ್ ಎಂಬ ಫಾಸ್ಟ್ ಫುಡ್ ಸೆಂಟರಿಗೆ ಮಾತ್ರ ಇಂದು ವೀಕೆಂಡ್ ಲಾಕ್ಡೌನ್ ಇರಲಿಲ್ಲ. ಲಾಕ್ಡೌನಲ್ಲಿ ಹೊಟೇಲ್ ಒಳಗೆ ಕುಳಿತು ತಿನ್ನಲು ಅವಕಾಶ ಇರದಿದ್ದರೂ, ಭಾನುವಾರ ಸಂಜೆಯಿಂದಲೇ ಟಿಕ್ಕಾ ಪಾಯಿಂಟ್ ನಲ್ಲಿ ಭರ್ಜರಿ ವ್ಯಾಪಾರ ನಡೆದಿದೆ.
ಹೆದ್ದಾರಿಯ ಅಂಚಿನಲ್ಲಿರುವ ಟಿಕ್ಕಾ ಪಾಯಿಂಟ್ ಫಾಸ್ಟ್ ಫುಡ್ ಸೆಂಟರ್ ವೀಕೆಂಡಲ್ಲಿ ಯಾವತ್ತೂ ಭರ್ಜರಿ ವ್ಯಾಪಾರಕ್ಕೆ ಪ್ರಸಿದ್ಧಿ. ಈ ಬಾರಿ ಲಾಕ್ಡೌನ್ ಇದ್ದರೂ ಅದನ್ನು ಲೆಕ್ಕಿಸದೆ ವ್ಯಾಪಾರ ನಡೆಸಲಾಗಿದೆ. ಕಳೆದ ಎರಡು ತಿಂಗಳ ಲಾಕ್ಡೌನಲ್ಲಿಯೂ ಪಾರ್ಸೆಲ್ ನೆಪದಲ್ಲಿ ಈ ಫಾಸ್ಟ್ ಫುಡ್ ಮಳಿಗೆ ಇದೇ ರೀತಿ ಲಕ್ಷಾಂತರ ರೂಪಾಯಿ ವ್ಯವಹಾರ ನಡೆಸಿದೆ ಎಂದು ಸ್ಥಳೀಯರು ಹೇಳುತ್ತಾರೆ.
ಈ ವಾರದ ವೀಕೆಂಡ್ ಲಾಕ್ಡೌನಲ್ಲಿ ಪೊಲೀಸರು ಕೆಲಸಕ್ಕೆ ತೆರಳುವ ಬಡಪಾಯಿ ದ್ವಿಚಕ್ರ ವಾಹನ ಸವಾರರ ವಾಹನಗಳನ್ನ ಜಪ್ತಿಗೊಳಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ. ಅಲ್ಲದೆ ಸಣ್ಣ ಪುಟ್ಟ ಅಂಗಡಿ ಮುಂಗಟ್ಟುಗಳನ್ನೂ ಬಂದ್ ಮಾಡಿಸಿ ವೀಕೆಂಡ್ ಲಾಕ್ಡೌನನ್ನ ಕಟ್ಟುನಿಟ್ಟಾಗಿ ನಿಭಾಯಿಸಿದ್ದಾರೆ. ಆದರೆ ಉಳ್ಳಾಲ ಪೊಲೀಸರು ಮಾತ್ರ ಹೆದ್ದಾರಿ ಬದಿಯಲ್ಲೇ ಇರುವ ಲಾಕ್ಡೌನ್ ನಿಯಮವನ್ನ ಲೆಕ್ಕಿಸದೆ ಕಾರ್ಯಾಚರಿಸುತ್ತಿರುವ ಟಿಕ್ಕಾ ಪಾಯಿಂಟನ್ನು ಮಾತ್ರ ಬಂದ್ ಮಾಡಿಸಿಲ್ಲ.


ಟಿಕ್ಕದಲ್ಲಿ ಪಾಲು ಪಡೆದರೇ ಅಧಿಕಾರಿಗಳು ?
ಟಿಕ್ಕಾ ಪಾಯಿಂಟ್ ಲಾಕ್ಡೌನ್ ಸಮಯದಲ್ಲಿ ನಿಯಮ ಮೀರಿ ನಡು ರಾತ್ರಿಯವರೆಗೂ ವಹಿವಾಟು ನಡೆಸಿದೆ. ಪಾರ್ಸೆಲ್ ಮಾತ್ರ ಎಂಬ ಅವಕಾಶವನ್ನು ಬಳಸ್ಕೊಂಡು ವೀಕೆಂಡ್ ಲಾಕ್ಡೌನಲ್ಲೂ ಹೊಟೇಲ್ ತೆರೆದಿಟ್ಟು ಮೇಲಿನ ಅಂತಸ್ತಿನಲ್ಲಿ ಗ್ರಾಹಕರಿಗೆ ಟೇಬಲ್ ಹಾಸಿ ಆಹಾರ ಸಪ್ಲೈ ಮಾಡುತ್ತಿದೆ. ಸ್ಥಳೀಯ ಕೋಟೆಕಾರು ಪಟ್ಟಣ ಪಂಚಾಯತ್ ಅಧಿಕಾರಿಗಳು ಮತ್ತು ಉಳ್ಳಾಲದ ಪೊಲೀಸರು ಈ ಬಗ್ಗೆ ತಿಳಿದಿದ್ದರೂ ಮೌನವಾಗಿ ಸಮ್ಮತಿ ನೀಡಿದ್ದಾರೆ ಎನ್ನಲಾಗುತ್ತಿದೆ. ಅಲ್ಲದೆ, ಒಳಭಾಗದಲ್ಲಿಯೂ ಯಾವುದೇ ಮಾಸ್ಕ್ ಆಗಲೀ, ಅಂತರವನ್ನಾಗಲೀ ಇಟ್ಟುಕೊಳ್ಳದೆ ವ್ಯಾಪಾರ ನಡೆಸಲಾಗುತ್ತಿದೆ.


ಕ್ರಮ ಕೈಗೊಳ್ಳುತ್ತೇನೆಂದ ನಗರ ಡಿಸಿಪಿ
ವೀಕೆಂಡ್ ಲಾಕ್ಡೌನಲ್ಲೂ ನಿಯಮ ಮೀರಿ ವ್ಯಾಪಾರ ನಡೆಸುತ್ತಿರುವ ಟಿಕ್ಕ ಪಾಯಿಂಟ್ ಬಗ್ಗೆ ಮಂಗಳೂರು ನಗರ ಡಿಸಿಪಿ ಹರಿರಾಂ ಶಂಕರ್ ಅವರಿಗೆ ಮಾಹಿತಿ ನೀಡಿದ್ದು ಅಕ್ರಮವಾಗಿ ನಡೆಸಲಾಗುತ್ತಿದ್ದರೆ ಕೇಸು ದಾಖಲಿಸುವುದಾಗಿ ಹೇಳಿದ್ದಾರೆ.
Ullal Kotekar Tikka Point Restaurant violates covid guidelines hotel open for dinner. The covid guidelines state that hotels are only opened for delivery.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm