ಬ್ರೇಕಿಂಗ್ ನ್ಯೂಸ್
28-06-21 02:15 pm Mangalore Correspondent ಕರಾವಳಿ
ಉಳ್ಳಾಲ, ಜೂ.28: ರಕ್ತದೊತ್ತಡ ತಪಾಸಣೆಗೆಂದು ನಗರದ ಖಾಸಗಿ ಆಸ್ಪತ್ರೆಗೆ ಸ್ನೇಹಿತರ ಜೊತೆಗೆ ತೆರಳಿದ್ದ ಯುವಕ ವೈದ್ಯರು ಬಿಪಿ ಚೆಕ್ ಮಾಡುವಷ್ಟರಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ.
ಕುಂಪಲ ಆಶ್ರಯ ಕಾಲನಿ ನಿವಾಸಿ ರಾಜೇಶ್ ರಾವ್ (31) ಹೃದಯಾಘಾತಕ್ಕೆ ಬಲಿಯಾದ ಯುವಕ. ರಾಜೇಶ್ ಅವರು ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದು ಕಳೆದ ಶುಕ್ರವಾರ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ತಪಾಸಣೆಗೆ ತೆರಳಿದ್ದರು. ವೈದ್ಯರು ಮತ್ತೆ ಸೋಮವಾರ ತಪಾಸಣೆಗೆ ಬರಲು ತಿಳಿಸಿದ್ದರಂತೆ. ಅದರಂತೆ ಇಂದು ಬೆಳಗ್ಗೆ ರಾಜೇಶ್ ಅವರ ಸ್ನೇಹಿತರಾದ ಪ್ರಕಾಶ್ ಕುಂಪಲ, ಶೈಲೇಶ್ ಮೊದಲಾದವರು ರಾಜೇಶನ್ನು ನಗರದ ಕೆಎಂಸಿ ಆಸ್ಪತ್ರೆಗೆ ಉನ್ನತ ತಪಾಸಣೆಗೆ ಕರೆದೊಯ್ದಿದ್ದಾರೆ. ತಪಾಸಣೆಗೆ ತೆರಳುವಾಗ ರಾಜೇಶ್ ಅವರೇ ಕಾರು ಚಲಾಯಿಸಿದ್ದಾರೆ. ಆಸ್ಪತ್ರೆಯಲ್ಲಿ ರಕ್ತದೊತ್ತಡ ತಪಾಸಣೆ ನಡೆಸುವ ವೇಳೆ ರಾಜೇಶ್ ಕುಸಿದು ಬಿದ್ದಿದ್ದು ಸ್ನೇಹಿತರ ಮುಂದೆಯೇ ಸಾವನ್ನಪ್ಪಿದ್ದಾರೆ.
ರಾಜೇಶ್ ಅವರು ತಂದೆ, ತಾಯಿ ಮತ್ತು ತಂಗಿಯನ್ನು ಅಗಲಿದ್ದಾರೆ. ರಾಜೇಶ್ ಅವರು ರಿಕ್ಷಾ ಚಾಲಕರಾಗಿದ್ದು ಕುಂಪಲ ಹಿಂದೂ ಜಾಗರಣ ವೇದಿಕೆಯ ಸಕ್ರಿಯ ಸದಸ್ಯರಾಗಿದ್ದು ಅಪಾರ ಸ್ನೇಹಿತರನ್ನು ಹೊಂದಿದ್ದರು. ಸ್ನೇಹಿತರೊಂದಿಗೆ ಅವರು ಸಮಾಜಮುಖಿ ಕಾರ್ಯಗಳಲ್ಲೂ ತನ್ನನ್ನು ತೊಡಗಿಸಿದ್ದರು. ರಾಜೇಶ್ ಅಕಾಲಿಕ ಅಗಲಿಕೆಗೆ ಹಿಂದೂ ಜಾಗರಣಾ ವೇದಿಕೆ ಸಂತಾಪ ವ್ಯಕ್ತಪಡಿಸಿದೆ.
Mangalore Auto driver dies of Heart Attack at Private Hospital while checking BP. The deceased has been identified as Rajesh Roa (31) from Kumpala.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm