ಬ್ರೇಕಿಂಗ್ ನ್ಯೂಸ್
28-06-21 02:15 pm Mangalore Correspondent ಕರಾವಳಿ
ಉಳ್ಳಾಲ, ಜೂ.28: ರಕ್ತದೊತ್ತಡ ತಪಾಸಣೆಗೆಂದು ನಗರದ ಖಾಸಗಿ ಆಸ್ಪತ್ರೆಗೆ ಸ್ನೇಹಿತರ ಜೊತೆಗೆ ತೆರಳಿದ್ದ ಯುವಕ ವೈದ್ಯರು ಬಿಪಿ ಚೆಕ್ ಮಾಡುವಷ್ಟರಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ.
ಕುಂಪಲ ಆಶ್ರಯ ಕಾಲನಿ ನಿವಾಸಿ ರಾಜೇಶ್ ರಾವ್ (31) ಹೃದಯಾಘಾತಕ್ಕೆ ಬಲಿಯಾದ ಯುವಕ. ರಾಜೇಶ್ ಅವರು ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದು ಕಳೆದ ಶುಕ್ರವಾರ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ತಪಾಸಣೆಗೆ ತೆರಳಿದ್ದರು. ವೈದ್ಯರು ಮತ್ತೆ ಸೋಮವಾರ ತಪಾಸಣೆಗೆ ಬರಲು ತಿಳಿಸಿದ್ದರಂತೆ. ಅದರಂತೆ ಇಂದು ಬೆಳಗ್ಗೆ ರಾಜೇಶ್ ಅವರ ಸ್ನೇಹಿತರಾದ ಪ್ರಕಾಶ್ ಕುಂಪಲ, ಶೈಲೇಶ್ ಮೊದಲಾದವರು ರಾಜೇಶನ್ನು ನಗರದ ಕೆಎಂಸಿ ಆಸ್ಪತ್ರೆಗೆ ಉನ್ನತ ತಪಾಸಣೆಗೆ ಕರೆದೊಯ್ದಿದ್ದಾರೆ. ತಪಾಸಣೆಗೆ ತೆರಳುವಾಗ ರಾಜೇಶ್ ಅವರೇ ಕಾರು ಚಲಾಯಿಸಿದ್ದಾರೆ. ಆಸ್ಪತ್ರೆಯಲ್ಲಿ ರಕ್ತದೊತ್ತಡ ತಪಾಸಣೆ ನಡೆಸುವ ವೇಳೆ ರಾಜೇಶ್ ಕುಸಿದು ಬಿದ್ದಿದ್ದು ಸ್ನೇಹಿತರ ಮುಂದೆಯೇ ಸಾವನ್ನಪ್ಪಿದ್ದಾರೆ.


ರಾಜೇಶ್ ಅವರು ತಂದೆ, ತಾಯಿ ಮತ್ತು ತಂಗಿಯನ್ನು ಅಗಲಿದ್ದಾರೆ. ರಾಜೇಶ್ ಅವರು ರಿಕ್ಷಾ ಚಾಲಕರಾಗಿದ್ದು ಕುಂಪಲ ಹಿಂದೂ ಜಾಗರಣ ವೇದಿಕೆಯ ಸಕ್ರಿಯ ಸದಸ್ಯರಾಗಿದ್ದು ಅಪಾರ ಸ್ನೇಹಿತರನ್ನು ಹೊಂದಿದ್ದರು. ಸ್ನೇಹಿತರೊಂದಿಗೆ ಅವರು ಸಮಾಜಮುಖಿ ಕಾರ್ಯಗಳಲ್ಲೂ ತನ್ನನ್ನು ತೊಡಗಿಸಿದ್ದರು. ರಾಜೇಶ್ ಅಕಾಲಿಕ ಅಗಲಿಕೆಗೆ ಹಿಂದೂ ಜಾಗರಣಾ ವೇದಿಕೆ ಸಂತಾಪ ವ್ಯಕ್ತಪಡಿಸಿದೆ.
Mangalore Auto driver dies of Heart Attack at Private Hospital while checking BP. The deceased has been identified as Rajesh Roa (31) from Kumpala.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm