ಬ್ರೇಕಿಂಗ್ ನ್ಯೂಸ್
28-06-21 04:02 pm Udupi Correspondent ಕರಾವಳಿ
ಉಡುಪಿ, ಜೂನ್ 28: ಸಿಎಂ ಮೇಲೆ ಸಾರ್ವಜನಿಕರು ದಾಳಿ ಮಾಡುತ್ತಾರೆ ಎಂದು ಹೇಳಿಕೆ ನೀಡಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಗೃಹಸಚಿವ ಬಸವರಾಜ್ ಬೊಮ್ಮಾಯಿ ತಿರಗೇಟು ನೀಡಿದ್ದಾರೆ. ಡಿಕೆಶಿ ಯಾವ ಇಂಟೆಲಿಜೆನ್ಸ್ ರಿಪೋರ್ಟ್ ತೆಗೆದುಕೊಂಡಿದ್ದಾರೋ ಗೊತ್ತಿಲ್ಲ. ಡಿಕೆಶಿ ಹೇಳಿದಂತಹ ಯಾವುದೇ ಇಂಟೆಲಿಜೆನ್ಸ್ ರಿಪೋರ್ಟ್ ನಮ್ಮಲ್ಲಿಲ್ಲ. ಮುಖ್ಯಮಂತ್ರಿಗಳು ರಾಜ್ಯಾದ್ಯಂತ ಜಿಲ್ಲಾ ಪ್ರವಾಸ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಉಡುಪಿಗೆ ಆಗಮಿಸಿದ್ದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಚಾಮರಾಜನಗರದಲ್ಲಿ ಆಕ್ಸಿಜನ್ ದುರಂತದ ಬಳಿಕ ಸಿಎಂ ಭೇಟಿ ನೀಡದ ಬಗ್ಗೆ ಡಿಕೆಶಿ ಟೀಕೆಯ ಬಗ್ಗೆ ಹೀಗೆಂದು ಉತ್ತರಿಸಿದ್ದಾರೆ. ಯಡಿಯೂರಪ್ಪ ಜನರಿಂದ, ಜನರ ಮಧ್ಯದಿಂದ ಬಂದವರು. ಹೋರಾಟಗಳನ್ನು ಮಾಡಿ ಮುಖ್ಯಮಂತ್ರಿಯಾದವರು. ಯಡಿಯೂರಪ್ಪ ಯಾವತ್ತೂ ಜನರ ಜೊತೆಗೇ ಇರುವವರು. ಜನರ ಮಧ್ಯೆ ಹೋಗಲು ಅವರಿಗೆ ಯಾವುದೇ ತೊಂದರೆ ಇಲ್ಲ. ಆ ರೀತಿಯ ಆತಂಕ ಏನಿದ್ದರೂ ಅದು ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಎಂದು ಹೇಳಿದರು.

ಜಾರಕಿಹೊಳಿ ಮುಂಬೈ ಪ್ರವಾಸದ ಬಗ್ಗೆ ಕೇಳಿದ ಪ್ರಶ್ನೆಗೆ, ನನಗೆ ಆ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಮಾಹಿತಿ ಇಲ್ಲದ ಮೇಲೆ ಮಾತನಾಡುವುದೂ ಸರಿಯಾಗಲ್ಲ ಎಂದು ಬೊಮ್ಮಾಯಿ ಹೇಳಿದರು. ಬೆಂಗಳೂರಿನ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಹತ್ಯೆ ಪ್ರಕರಣದಲ್ಲಿ ಈಗಾಗ್ಲೇ ಹಲವರ ಬಂಧನ ಆಗಿದೆ. ಪೊಲೀಸರ ತನಿಖೆ ಸಂದರ್ಭದಲ್ಲಿ ಹಲವಾರು ಆಯಾಮಗಳು ತೆರೆದುಕೊಳ್ಳುತ್ತಿವೆ. ಕೂಲಂಕುಷವಾಗಿ ಪೊಲೀಸ್ ತನಿಖೆ ನಡೆಯುತ್ತಿದ್ದು ಒಂದೊಂದಾಗಿಯೇ ಎಲ್ಲಾ ವಿಚಾರಗಳು ಹೊರಬರುತ್ತಿವೆ ಎಂದು ಹೇಳಿದರು.
Karnataka Home Minister Basavaraj Bommai slams DK Shivakumar in Udupi.
02-04-26 09:31 pm
HK News Staffer
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
ಸಂಸದ ರಾಘವ್ ಚಡ್ಡಾಗೆ ಆಪ್ ಶಾಕ್; ರಾಜ್ಯಸಭೆ ಉಪ ನಾಯಕ...
02-04-26 07:44 pm
ಆಟವಾಡುತ್ತಿದ್ದ ಮಗು ನೀರಿನ ಬಕೆಟ್ಗೆ ಬಿದ್ದು ಸಾವು;...
02-04-26 03:56 pm
03-04-26 07:35 am
HK News Staffer
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm