ಬ್ರೇಕಿಂಗ್ ನ್ಯೂಸ್
28-06-21 07:52 pm Mangaluru Correspondent ಕರಾವಳಿ
ಮಂಗಳೂರು, ಜೂನ್ 28: ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರು ಒಟ್ಟಾಗಿಯೇ ಇದ್ದಾರೆ. ಅವರ ನಡುವೆ ಒಡಕು ಮುಡಿಸಲು ಬಿಜೆಪಿ ನಾಯಕರು ಯತ್ನಿಸುತ್ತಿದ್ದಾರೆ. ಬಿಜೆಪಿ ನಾಯಕರ ಈ ಪ್ರಯತ್ನ ಫಲಿಸುವುದಿಲ್ಲ. ಕಾಂಗ್ರೆಸ್ ಮುಖಂಡರನ್ನು ವಿಭಜಿಸಲು ಸಾಧ್ಯವಿಲ್ಲ ಎಂದು ಮಾಜಿ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಖಾದರ್, ಕಾಂಗ್ರೆಸ್ ಪಕ್ಷದ ನಾಯಕರೂ ಒಟ್ಟಾಗಿಯೇ ಇದ್ದಾರೆ. ಜನ ಸಾಮಾನ್ಯರಿಗೆ ಪ್ರಯೋಜನ ಆಗುವಂತಹ ಕೆಲಸ ಮಾಡಬೇಕು ಎನ್ನುವುದ ನಮ್ಮ ಉದ್ದೇಶ. ಆದರೆ, ನಮ್ಮ ನಾಯಕರ ಬಗ್ಗೆ ಬಿಜೆಪಿಯವರು ಮಾತನಾಡಲು ಆರಂಭಿಸಿದ್ದು ನೋಡಿದರೆ, ಇವರಿಗೆ ಮುಂದಿನ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎನ್ನುವುದು ಈಗಲೇ ಗೊತ್ತಾದಂತಿದೆ. ರಾಜ್ಯದಲ್ಲಿ ಜನರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತಿದ್ದಾರೆ ಎಂಬ ಜನರ ನಾಡಿ ಮಿಡಿತವನ್ನು ಬಿಜೆಪಿ ಮುಖಂಡರು ಅರ್ಥ ಮಾಡಿಕೊಂಡಿದ್ದಾರೆ. ಇದಕ್ಕಾಗಿ ಬಿಜೆಪಿ ನಾಯಕರು ಕಾಂಗ್ರೆಸ್ ಪಕ್ಷದ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ ಎಂದು ಲೇವಡಿ ಮಾಡಿದರು.
ಇದರ ಅರ್ಥ ಬಿಜೆಪಿ ನಾಯಕರು ಈಗಲೇ ಸೋಲನ್ನು ಒಪ್ಪಿಕೊಂಡಿದ್ದಾರೆ. ರಾಜ್ಯ ಸರಕಾರದ ಬೇಜವಾಬ್ದಾರಿ ಆಡಳಿತದಿಂದಾಗಿ ಬಿಜೆಪಿ ಮುಖಂಡರೇ ಅಸಮಾಧಾನಗೊಂಡಿದ್ದಾರೆ. ಹೀಗಾಗಿ ಕಾಂಗ್ರೆಸ್ ನಾಯಕರ ಬಗ್ಗೆ ಮಾತನಾಡುತ್ತಿದ್ದಾರೆ. ತಮ್ಮ ವೈಫಲ್ಯ ಜನರು ಕೇಳೋದು ಬೇಡ ಎಂದು ಡಿಕೆಶಿ, ಸಿದ್ದರಾಮಯ್ಯ ಬಗ್ಗೆ ಹೇಳುತ್ತಿದ್ದಾರೆ. ಆದರೆ, ಈ ರೀತಿಯ ಹೇಳಿಕೆಗಳಿಂದ ನಮ್ಮ ನಾಯಕರ ನಡುವೆ ಒಡಕು ಮೂಡಿಸಲು ಸಾಧ್ಯವಿಲ್ಲ ಎಂದು ಖಾದರ್ ಹೇಳಿದ್ದಾರೆ.
ಕನ್ನಡದ ಹೆಸರು ಬದಲಿಸುವುದನ್ನು ಒಪ್ಪಲ್ಲ:

ಕಾಸರಗೋಡಿನಲ್ಲಿ ಕನ್ನಡದ ಹೆಸರುಗಳನ್ನು ಬದಲಿಸುವ ವಿಚಾರದಲ್ಲಿ ಪ್ರತಿಕ್ರಿಯಿಸಿದ ಖಾದರ್, ಕರ್ನಾಟಕ - ಕೇರಳ ಗಡಿಭಾಗ ಸರ್ವೆಯಲ್ಲಿ ಮಾತ್ರ ಬೇರೆ ಬೇರೆ. ಜನರು ಎರಡೂ ಕಡೆ ಒಂದೇ ರೀತಿ ಇದ್ದಾರೆ. ಗಡಿನಾಡ ಪ್ರದೇಶದ ಜನರಿಗೆ ಯಾವುದೇ ಕಾರಣಕ್ಕೂ ಧಕ್ಕೆ ಆಗುವ ರೀತಿ ಸರಕಾರ ನಡೆದುಕೊಳ್ಳಬಾರದು. ಅಂತಹ ಪ್ರಸ್ತಾವನೆ ಇರುವುದು ನಮ್ಮ ಗಮನಕ್ಕೆ ಬಂದಿಲ್ಲ. ಯಾವುದೇ ಕಾರಣಕ್ಕೂ ನಾವು ಇದನ್ನು ಒಪ್ಪುವುದಿಲ್ಲ. ಮಂಜೆಶ್ವರದ ಶಾಸಕರು ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿ, ಗಡಿನಾಡಿನ ಕನ್ನಡಿಗರಿಗೆ ಗೌರವ ಸಲ್ಲಿಸಿದ್ದರು. ಕನ್ನಡದ ನಾಮಫಲಕ ಬದಲಿಸುವ ಕೆಲಸಕ್ಕೆ ಅಲ್ಲಿಯ ಶಾಸಕರು ಕೂಡ ಒಪ್ಪುವುದಿಲ್ಲ ಎಂದು ಹೇಳಿದರು.
People are tired of BJP’s administration. The overall development suggests that Congress will come back to power. It is impossible for BJP to create differences among Congress leaders as we all are united said MLA U T Khader in Mangalore.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am