ಬ್ರೇಕಿಂಗ್ ನ್ಯೂಸ್
28-06-21 07:52 pm Mangaluru Correspondent ಕರಾವಳಿ
ಮಂಗಳೂರು, ಜೂನ್ 28: ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರು ಒಟ್ಟಾಗಿಯೇ ಇದ್ದಾರೆ. ಅವರ ನಡುವೆ ಒಡಕು ಮುಡಿಸಲು ಬಿಜೆಪಿ ನಾಯಕರು ಯತ್ನಿಸುತ್ತಿದ್ದಾರೆ. ಬಿಜೆಪಿ ನಾಯಕರ ಈ ಪ್ರಯತ್ನ ಫಲಿಸುವುದಿಲ್ಲ. ಕಾಂಗ್ರೆಸ್ ಮುಖಂಡರನ್ನು ವಿಭಜಿಸಲು ಸಾಧ್ಯವಿಲ್ಲ ಎಂದು ಮಾಜಿ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಖಾದರ್, ಕಾಂಗ್ರೆಸ್ ಪಕ್ಷದ ನಾಯಕರೂ ಒಟ್ಟಾಗಿಯೇ ಇದ್ದಾರೆ. ಜನ ಸಾಮಾನ್ಯರಿಗೆ ಪ್ರಯೋಜನ ಆಗುವಂತಹ ಕೆಲಸ ಮಾಡಬೇಕು ಎನ್ನುವುದ ನಮ್ಮ ಉದ್ದೇಶ. ಆದರೆ, ನಮ್ಮ ನಾಯಕರ ಬಗ್ಗೆ ಬಿಜೆಪಿಯವರು ಮಾತನಾಡಲು ಆರಂಭಿಸಿದ್ದು ನೋಡಿದರೆ, ಇವರಿಗೆ ಮುಂದಿನ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎನ್ನುವುದು ಈಗಲೇ ಗೊತ್ತಾದಂತಿದೆ. ರಾಜ್ಯದಲ್ಲಿ ಜನರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತಿದ್ದಾರೆ ಎಂಬ ಜನರ ನಾಡಿ ಮಿಡಿತವನ್ನು ಬಿಜೆಪಿ ಮುಖಂಡರು ಅರ್ಥ ಮಾಡಿಕೊಂಡಿದ್ದಾರೆ. ಇದಕ್ಕಾಗಿ ಬಿಜೆಪಿ ನಾಯಕರು ಕಾಂಗ್ರೆಸ್ ಪಕ್ಷದ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ ಎಂದು ಲೇವಡಿ ಮಾಡಿದರು.
ಇದರ ಅರ್ಥ ಬಿಜೆಪಿ ನಾಯಕರು ಈಗಲೇ ಸೋಲನ್ನು ಒಪ್ಪಿಕೊಂಡಿದ್ದಾರೆ. ರಾಜ್ಯ ಸರಕಾರದ ಬೇಜವಾಬ್ದಾರಿ ಆಡಳಿತದಿಂದಾಗಿ ಬಿಜೆಪಿ ಮುಖಂಡರೇ ಅಸಮಾಧಾನಗೊಂಡಿದ್ದಾರೆ. ಹೀಗಾಗಿ ಕಾಂಗ್ರೆಸ್ ನಾಯಕರ ಬಗ್ಗೆ ಮಾತನಾಡುತ್ತಿದ್ದಾರೆ. ತಮ್ಮ ವೈಫಲ್ಯ ಜನರು ಕೇಳೋದು ಬೇಡ ಎಂದು ಡಿಕೆಶಿ, ಸಿದ್ದರಾಮಯ್ಯ ಬಗ್ಗೆ ಹೇಳುತ್ತಿದ್ದಾರೆ. ಆದರೆ, ಈ ರೀತಿಯ ಹೇಳಿಕೆಗಳಿಂದ ನಮ್ಮ ನಾಯಕರ ನಡುವೆ ಒಡಕು ಮೂಡಿಸಲು ಸಾಧ್ಯವಿಲ್ಲ ಎಂದು ಖಾದರ್ ಹೇಳಿದ್ದಾರೆ.
ಕನ್ನಡದ ಹೆಸರು ಬದಲಿಸುವುದನ್ನು ಒಪ್ಪಲ್ಲ:

ಕಾಸರಗೋಡಿನಲ್ಲಿ ಕನ್ನಡದ ಹೆಸರುಗಳನ್ನು ಬದಲಿಸುವ ವಿಚಾರದಲ್ಲಿ ಪ್ರತಿಕ್ರಿಯಿಸಿದ ಖಾದರ್, ಕರ್ನಾಟಕ - ಕೇರಳ ಗಡಿಭಾಗ ಸರ್ವೆಯಲ್ಲಿ ಮಾತ್ರ ಬೇರೆ ಬೇರೆ. ಜನರು ಎರಡೂ ಕಡೆ ಒಂದೇ ರೀತಿ ಇದ್ದಾರೆ. ಗಡಿನಾಡ ಪ್ರದೇಶದ ಜನರಿಗೆ ಯಾವುದೇ ಕಾರಣಕ್ಕೂ ಧಕ್ಕೆ ಆಗುವ ರೀತಿ ಸರಕಾರ ನಡೆದುಕೊಳ್ಳಬಾರದು. ಅಂತಹ ಪ್ರಸ್ತಾವನೆ ಇರುವುದು ನಮ್ಮ ಗಮನಕ್ಕೆ ಬಂದಿಲ್ಲ. ಯಾವುದೇ ಕಾರಣಕ್ಕೂ ನಾವು ಇದನ್ನು ಒಪ್ಪುವುದಿಲ್ಲ. ಮಂಜೆಶ್ವರದ ಶಾಸಕರು ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿ, ಗಡಿನಾಡಿನ ಕನ್ನಡಿಗರಿಗೆ ಗೌರವ ಸಲ್ಲಿಸಿದ್ದರು. ಕನ್ನಡದ ನಾಮಫಲಕ ಬದಲಿಸುವ ಕೆಲಸಕ್ಕೆ ಅಲ್ಲಿಯ ಶಾಸಕರು ಕೂಡ ಒಪ್ಪುವುದಿಲ್ಲ ಎಂದು ಹೇಳಿದರು.
People are tired of BJP’s administration. The overall development suggests that Congress will come back to power. It is impossible for BJP to create differences among Congress leaders as we all are united said MLA U T Khader in Mangalore.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 09:50 am
HK News Staffer
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
08-09-26 01:11 pm
HK News Staffer
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am
ಆಸ್ಪತ್ರೆ ಸಿಬ್ಬಂದಿಗೆ ಪ್ರಜ್ಞೆ ತಪ್ಪಿಸಿ ಲೈಂಗಿಕ ದೌ...
07-09-26 08:56 pm
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm