ಬ್ರೇಕಿಂಗ್ ನ್ಯೂಸ್
30-06-21 10:00 pm Richard, Mangaluru ಕರಾವಳಿ
ಮಂಗಳೂರು, ಜೂನ್ 30: ಮಂಗಳೂರು ನಗರದಲ್ಲಿ ಜುಲೈ ಒಂದರಿಂದಲೇ ಖಾಸಗಿ ಸಿಟಿ ಬಸ್ ಆರಂಭಿಸಲು ಬಸ್ ಮಾಲಕರ ಸಂಘ ನಿರ್ಧರಿಸಿದೆ. ಆದರೆ, ಬಸ್ ದರವನ್ನು 20 ಶೇಕಡಾ ಏರಿಸುವುದಾಗಿ ಸಿಟಿ ಬಸ್ ಮಾಲಕರ ಸಂಘ ಅಧ್ಯಕ್ಷ ದಿಲ್ ರಾಜ್ ಆಳ್ವ ತಿಳಿಸಿದ್ದಾರೆ.
ವಾರದ ಹಿಂದೆ ಲಾಕ್ಡೌನ್ ಸಡಿಲಿಕೆ ಆದರೂ, ಜುಲೈ ಬಳಿಕವೇ ಖಾಸಗಿ ಬಸ್ ಆರಂಭಿಸುವುದಾಗಿ ಬಸ್ ಮಾಲಕರು ತಿಳಿಸಿದ್ದರು. ಅದರಂತೆ, ಸಿಟಿ ಬಸ್ ಗಳನ್ನು ಜುಲೈ ಒಂದರಿಂದ ಆರಂಭಿಸಲು ನಿರ್ಧರಿಸಿದ್ದು ಆರಂಭದಲ್ಲಿ ಕೆಲವು ರೂಟ್ ಗಳಲ್ಲಿ ಸೀಮಿತ ಬಸ್ ಗಳನ್ನು ಮಾತ್ರ ರಸ್ತೆಗಿಳಿಸುವುದಾಗಿ ತಿಳಿಸಿದ್ದಾರೆ.
20 ಶೇ. ದರ ಏರಿಕೆಯೊಂದಿಗೆ ಬಸ್ ಇಳಿಸಲಾಗುತ್ತಿದೆ. ಆದರೆ ಆರಂಭದಲ್ಲಿ ಸೀಮಿತ ಸಂಖ್ಯೆಯ ಬಸ್ ಗಳನ್ನು ಇಳಿಸಿ, ಜುಲೈ 5 ರ ನಂತರ ಪೂರ್ಣ ಮಟ್ಟದಲ್ಲಿ ಬಸ್ ಗಳನ್ನು ರಸ್ತೆಗೆ ಇಳಿಸುವುದಾಗಿ ಖಾಸಗಿ ಸಿಟಿ ಬಸ್ ಮಾಲಕರ ಸಂಘದ ಅಧ್ಯಕ್ಷ ದಿಲ್ ರಾಜ್ ಆಳ್ವಾ ತಿಳಿಸಿದ್ದಾರೆ.
ಆದರೆ, ಖಾಸಗಿ ಬಸ್ ಗಳ ದರ ಏರಿಕೆಗೆ ಜಿಲ್ಲಾಡಳಿತ ಒಪ್ಪಿಗೆ ನೀಡಿಲ್ಲ. ಆರ್ ಟಿಓ ಅಧಿಕಾರಿಗಳು ಮತ್ತು ಖಾಸಗಿ ಬಸ್ ಮಾಲಕರನ್ನು ಕರೆದು ಮೀಟಿಂಗ್ ನಡೆಸುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಆದರೆ, ಖಾಸಗಿ ಬಸ್ ಮಾಲಕರು ದರ ಏರಿಸಿಯೇ ಸಂಚಾರ ನಡೆಸುವುದಾಗಿ ಹೇಳಿದ್ದಾರೆ. ಡೀಸೆಲ್ ದರ ಏರಿಕೆ ಆಗಿರುವುದರಿಂದ ಬಸ್ ದರ ಏರಿಕೆ ಅನಿವಾರ್ಯ. ಅಲ್ಲದೆ, 50 ಶೇ. ಅಷ್ಟೇ ಪ್ರಯಾಣಿಕರನ್ನು ಒಯ್ಯಲು ಅವಕಾಶ ಇರುವುದರಿಂದ ದರ ಏರಿಸದೆ ವಿಧಿಯಿಲ್ಲ ಎನ್ನುತ್ತಿದ್ಡಾರೆ.
After over a month of lockdown period, private buses will begin to ply in Mangalore from July 1, duly following Covid protocols with 50% seating capacity and 20 per cent hike in fares.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 09:50 am
HK News Staffer
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
08-09-26 01:11 pm
HK News Staffer
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am
ಆಸ್ಪತ್ರೆ ಸಿಬ್ಬಂದಿಗೆ ಪ್ರಜ್ಞೆ ತಪ್ಪಿಸಿ ಲೈಂಗಿಕ ದೌ...
07-09-26 08:56 pm
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm