ಬ್ರೇಕಿಂಗ್ ನ್ಯೂಸ್
01-07-21 05:10 pm Mangalore Correspondent ಕರಾವಳಿ
ಮಂಗಳೂರು, ಜುಲೈ 1: ಸಾಕು ದನಗಳನ್ನು ಹೊರಗಡೆ ಕಟ್ಟುವ ವಿಚಾರದಲ್ಲಿ ಜಗಳವಾಗಿ ತಂದೆಯೇ ತನ್ನ ಮಗನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ ಪ್ರಕರಣದಲ್ಲಿ ತೀವ್ರ ಗಾಯಗೊಂಡಿದ್ದ ಮಗ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.
ನಗರದ ಜಪ್ಪಿನಮೊಗರು ಎಂಬಲ್ಲಿ ವಾರದ ಹಿಂದೆ ಈ ದುರ್ಘಟನೆ ನಡೆದಿತ್ತು. ಸ್ವಾಮೀತ್ ಶೆಟ್ಟಿ (25) ಎಂಬಾತ ಸುಟ್ಟ ಗಾಯಗಳೊಂದಿಗೆ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ.


ಆರೋಪಿ ವಿಶ್ವನಾಥ ಶೆಟ್ಟಿ (52) ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಅ.ಕ್ರ 85/2021 ಕಲಂ 504, 506, 323, 307 ಐಪಿಸಿ ಪ್ರಕರಣ ದಾಖಲಾಗಿದೆ.
ಒಂದು ವಾರದ ಹಿಂದೆ ಜಪ್ಪಿನಮೊಗರು ಗ್ರಾಮದ ಕೊಪ್ಪರಿಗೆಗುತ್ತು ಎಂಬಲ್ಲಿ ಸಾಕು ದನಗಳನ್ನು ಹೊರಗಡೆ ಕಟ್ಟಿ ಹಾಕಿದ್ದ ವಿಚಾರದಲ್ಲಿ ಕುಡಿದು ಬಂದ ವಿಶ್ವನಾಥ ಶೆಟ್ಟಿ ಮಗನೊಂದಿಗೆ ತಕರಾರು ಮಾಡಿ ಹೊಡೆದಿದ್ದ. ಬಳಿಕ ಮನೆಯ ಒಳಗಡೆ ಬಂದು ಬಾಗಿಲು ಮುಚ್ಚಿ, ಪ್ಲಾಸ್ಟಿಕ್ ಕ್ಯಾನಲ್ಲಿದ್ದ ಪೆಟ್ರೊಲ್ ಅನ್ನು ಮಗನ ಮೈಗೆ ಸುರಿದು ಸಿಗರ್ ಲೈಟರಿನಿಂದ ಬೆಂಕಿ ಹಚ್ಚಿದ್ದರು. ಬೆಂಕಿ ತಗಲಿ ಗಂಭೀರ ಸ್ಥಿತಿಯಲ್ಲಿದ್ದ ಮಗನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕುಡಿದ ಮತ್ತಿನಲ್ಲಿ ಎಸಗಿದ್ದ ಪಾಪ ಕೃತ್ಯ ಈಗ ತಂದೆಗೇ ಉರುಳಾಗಿ ಪರಿಣಮಿಸಿದ್ದು ನತದೃಷ್ಟ ಯುವಕ ಸಾವು ಕಂಡಿದ್ದಾನೆ.
Read: ದನವನ್ನು ಕಟ್ಟುವ ವಿಚಾರದಲ್ಲಿ ಮಗನಿಗೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ತಂದೆ
Swamith Shetty (25), who was admitted to a private hospital in critical condition after his father Vishwanath Shetty (52) poured petrol on him and set him on fire over an issue of managing cattle at their home, succumbed to his injuries on the morning of Thursday, July 1.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm