ಬ್ರೇಕಿಂಗ್ ನ್ಯೂಸ್
01-07-21 05:10 pm Mangalore Correspondent ಕರಾವಳಿ
ಮಂಗಳೂರು, ಜುಲೈ 1: ಸಾಕು ದನಗಳನ್ನು ಹೊರಗಡೆ ಕಟ್ಟುವ ವಿಚಾರದಲ್ಲಿ ಜಗಳವಾಗಿ ತಂದೆಯೇ ತನ್ನ ಮಗನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ ಪ್ರಕರಣದಲ್ಲಿ ತೀವ್ರ ಗಾಯಗೊಂಡಿದ್ದ ಮಗ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.
ನಗರದ ಜಪ್ಪಿನಮೊಗರು ಎಂಬಲ್ಲಿ ವಾರದ ಹಿಂದೆ ಈ ದುರ್ಘಟನೆ ನಡೆದಿತ್ತು. ಸ್ವಾಮೀತ್ ಶೆಟ್ಟಿ (25) ಎಂಬಾತ ಸುಟ್ಟ ಗಾಯಗಳೊಂದಿಗೆ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ.


ಆರೋಪಿ ವಿಶ್ವನಾಥ ಶೆಟ್ಟಿ (52) ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಅ.ಕ್ರ 85/2021 ಕಲಂ 504, 506, 323, 307 ಐಪಿಸಿ ಪ್ರಕರಣ ದಾಖಲಾಗಿದೆ.
ಒಂದು ವಾರದ ಹಿಂದೆ ಜಪ್ಪಿನಮೊಗರು ಗ್ರಾಮದ ಕೊಪ್ಪರಿಗೆಗುತ್ತು ಎಂಬಲ್ಲಿ ಸಾಕು ದನಗಳನ್ನು ಹೊರಗಡೆ ಕಟ್ಟಿ ಹಾಕಿದ್ದ ವಿಚಾರದಲ್ಲಿ ಕುಡಿದು ಬಂದ ವಿಶ್ವನಾಥ ಶೆಟ್ಟಿ ಮಗನೊಂದಿಗೆ ತಕರಾರು ಮಾಡಿ ಹೊಡೆದಿದ್ದ. ಬಳಿಕ ಮನೆಯ ಒಳಗಡೆ ಬಂದು ಬಾಗಿಲು ಮುಚ್ಚಿ, ಪ್ಲಾಸ್ಟಿಕ್ ಕ್ಯಾನಲ್ಲಿದ್ದ ಪೆಟ್ರೊಲ್ ಅನ್ನು ಮಗನ ಮೈಗೆ ಸುರಿದು ಸಿಗರ್ ಲೈಟರಿನಿಂದ ಬೆಂಕಿ ಹಚ್ಚಿದ್ದರು. ಬೆಂಕಿ ತಗಲಿ ಗಂಭೀರ ಸ್ಥಿತಿಯಲ್ಲಿದ್ದ ಮಗನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕುಡಿದ ಮತ್ತಿನಲ್ಲಿ ಎಸಗಿದ್ದ ಪಾಪ ಕೃತ್ಯ ಈಗ ತಂದೆಗೇ ಉರುಳಾಗಿ ಪರಿಣಮಿಸಿದ್ದು ನತದೃಷ್ಟ ಯುವಕ ಸಾವು ಕಂಡಿದ್ದಾನೆ.
Read: ದನವನ್ನು ಕಟ್ಟುವ ವಿಚಾರದಲ್ಲಿ ಮಗನಿಗೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ತಂದೆ
Swamith Shetty (25), who was admitted to a private hospital in critical condition after his father Vishwanath Shetty (52) poured petrol on him and set him on fire over an issue of managing cattle at their home, succumbed to his injuries on the morning of Thursday, July 1.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am