ಬ್ರೇಕಿಂಗ್ ನ್ಯೂಸ್
01-07-21 05:10 pm Mangalore Correspondent ಕರಾವಳಿ
ಮಂಗಳೂರು, ಜುಲೈ 1: ಸಾಕು ದನಗಳನ್ನು ಹೊರಗಡೆ ಕಟ್ಟುವ ವಿಚಾರದಲ್ಲಿ ಜಗಳವಾಗಿ ತಂದೆಯೇ ತನ್ನ ಮಗನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ ಪ್ರಕರಣದಲ್ಲಿ ತೀವ್ರ ಗಾಯಗೊಂಡಿದ್ದ ಮಗ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.
ನಗರದ ಜಪ್ಪಿನಮೊಗರು ಎಂಬಲ್ಲಿ ವಾರದ ಹಿಂದೆ ಈ ದುರ್ಘಟನೆ ನಡೆದಿತ್ತು. ಸ್ವಾಮೀತ್ ಶೆಟ್ಟಿ (25) ಎಂಬಾತ ಸುಟ್ಟ ಗಾಯಗಳೊಂದಿಗೆ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ.
ಆರೋಪಿ ವಿಶ್ವನಾಥ ಶೆಟ್ಟಿ (52) ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಅ.ಕ್ರ 85/2021 ಕಲಂ 504, 506, 323, 307 ಐಪಿಸಿ ಪ್ರಕರಣ ದಾಖಲಾಗಿದೆ.
ಒಂದು ವಾರದ ಹಿಂದೆ ಜಪ್ಪಿನಮೊಗರು ಗ್ರಾಮದ ಕೊಪ್ಪರಿಗೆಗುತ್ತು ಎಂಬಲ್ಲಿ ಸಾಕು ದನಗಳನ್ನು ಹೊರಗಡೆ ಕಟ್ಟಿ ಹಾಕಿದ್ದ ವಿಚಾರದಲ್ಲಿ ಕುಡಿದು ಬಂದ ವಿಶ್ವನಾಥ ಶೆಟ್ಟಿ ಮಗನೊಂದಿಗೆ ತಕರಾರು ಮಾಡಿ ಹೊಡೆದಿದ್ದ. ಬಳಿಕ ಮನೆಯ ಒಳಗಡೆ ಬಂದು ಬಾಗಿಲು ಮುಚ್ಚಿ, ಪ್ಲಾಸ್ಟಿಕ್ ಕ್ಯಾನಲ್ಲಿದ್ದ ಪೆಟ್ರೊಲ್ ಅನ್ನು ಮಗನ ಮೈಗೆ ಸುರಿದು ಸಿಗರ್ ಲೈಟರಿನಿಂದ ಬೆಂಕಿ ಹಚ್ಚಿದ್ದರು. ಬೆಂಕಿ ತಗಲಿ ಗಂಭೀರ ಸ್ಥಿತಿಯಲ್ಲಿದ್ದ ಮಗನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕುಡಿದ ಮತ್ತಿನಲ್ಲಿ ಎಸಗಿದ್ದ ಪಾಪ ಕೃತ್ಯ ಈಗ ತಂದೆಗೇ ಉರುಳಾಗಿ ಪರಿಣಮಿಸಿದ್ದು ನತದೃಷ್ಟ ಯುವಕ ಸಾವು ಕಂಡಿದ್ದಾನೆ.
Read: ದನವನ್ನು ಕಟ್ಟುವ ವಿಚಾರದಲ್ಲಿ ಮಗನಿಗೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ತಂದೆ
Swamith Shetty (25), who was admitted to a private hospital in critical condition after his father Vishwanath Shetty (52) poured petrol on him and set him on fire over an issue of managing cattle at their home, succumbed to his injuries on the morning of Thursday, July 1.
04-10-25 10:54 pm
Bangalore Correspondent
ಸ್ವತಃ ಕಾಂಗ್ರೆಸ್ ನಾಯಕರೇ ಸಿದ್ದು ಯಾವಾಗ ಸಿಎಂ ಪಟ್ಟ...
04-10-25 10:16 pm
ಮಹಾರಾಷ್ಟ್ರದ ಸಮುದ್ರದಲ್ಲಿ ಘೋರ ದುರಂತ ; ಬೆಳಗಾವಿಯ...
04-10-25 09:18 pm
Belagavi Heart Attack, SSLC: ಬೆಳಗಾವಿ ; SSLC ಓ...
04-10-25 07:22 pm
ಐಟಿ ನಗರಿ ಬೆಂಗಳೂರು 'ಸೈಬರ್ ಕ್ರೈಮ್' ಕ್ಯಾಪಿಟಲ್...
03-10-25 06:08 pm
04-10-25 04:45 pm
HK Staffer
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
04-10-25 02:57 pm
HK News Desk
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm