ಬ್ರೇಕಿಂಗ್ ನ್ಯೂಸ್
01-07-21 05:10 pm Mangalore Correspondent ಕರಾವಳಿ
ಮಂಗಳೂರು, ಜುಲೈ 1: ಸಾಕು ದನಗಳನ್ನು ಹೊರಗಡೆ ಕಟ್ಟುವ ವಿಚಾರದಲ್ಲಿ ಜಗಳವಾಗಿ ತಂದೆಯೇ ತನ್ನ ಮಗನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ ಪ್ರಕರಣದಲ್ಲಿ ತೀವ್ರ ಗಾಯಗೊಂಡಿದ್ದ ಮಗ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.
ನಗರದ ಜಪ್ಪಿನಮೊಗರು ಎಂಬಲ್ಲಿ ವಾರದ ಹಿಂದೆ ಈ ದುರ್ಘಟನೆ ನಡೆದಿತ್ತು. ಸ್ವಾಮೀತ್ ಶೆಟ್ಟಿ (25) ಎಂಬಾತ ಸುಟ್ಟ ಗಾಯಗಳೊಂದಿಗೆ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ.


ಆರೋಪಿ ವಿಶ್ವನಾಥ ಶೆಟ್ಟಿ (52) ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಅ.ಕ್ರ 85/2021 ಕಲಂ 504, 506, 323, 307 ಐಪಿಸಿ ಪ್ರಕರಣ ದಾಖಲಾಗಿದೆ.
ಒಂದು ವಾರದ ಹಿಂದೆ ಜಪ್ಪಿನಮೊಗರು ಗ್ರಾಮದ ಕೊಪ್ಪರಿಗೆಗುತ್ತು ಎಂಬಲ್ಲಿ ಸಾಕು ದನಗಳನ್ನು ಹೊರಗಡೆ ಕಟ್ಟಿ ಹಾಕಿದ್ದ ವಿಚಾರದಲ್ಲಿ ಕುಡಿದು ಬಂದ ವಿಶ್ವನಾಥ ಶೆಟ್ಟಿ ಮಗನೊಂದಿಗೆ ತಕರಾರು ಮಾಡಿ ಹೊಡೆದಿದ್ದ. ಬಳಿಕ ಮನೆಯ ಒಳಗಡೆ ಬಂದು ಬಾಗಿಲು ಮುಚ್ಚಿ, ಪ್ಲಾಸ್ಟಿಕ್ ಕ್ಯಾನಲ್ಲಿದ್ದ ಪೆಟ್ರೊಲ್ ಅನ್ನು ಮಗನ ಮೈಗೆ ಸುರಿದು ಸಿಗರ್ ಲೈಟರಿನಿಂದ ಬೆಂಕಿ ಹಚ್ಚಿದ್ದರು. ಬೆಂಕಿ ತಗಲಿ ಗಂಭೀರ ಸ್ಥಿತಿಯಲ್ಲಿದ್ದ ಮಗನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕುಡಿದ ಮತ್ತಿನಲ್ಲಿ ಎಸಗಿದ್ದ ಪಾಪ ಕೃತ್ಯ ಈಗ ತಂದೆಗೇ ಉರುಳಾಗಿ ಪರಿಣಮಿಸಿದ್ದು ನತದೃಷ್ಟ ಯುವಕ ಸಾವು ಕಂಡಿದ್ದಾನೆ.
Read: ದನವನ್ನು ಕಟ್ಟುವ ವಿಚಾರದಲ್ಲಿ ಮಗನಿಗೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ತಂದೆ
Swamith Shetty (25), who was admitted to a private hospital in critical condition after his father Vishwanath Shetty (52) poured petrol on him and set him on fire over an issue of managing cattle at their home, succumbed to his injuries on the morning of Thursday, July 1.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 05:07 pm
HK News Staffer
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm