ಬ್ರೇಕಿಂಗ್ ನ್ಯೂಸ್
05-07-21 12:38 pm Mangalore Correspondent ಕರಾವಳಿ
ಕಾಸರಗೋಡು, ಜುಲೈ 3: ದೋಣಿ ದುರಂತದಲ್ಲಿ ಸಮುದ್ರ ಪಾಲಾಗಿದ್ದ ಮೂವರ ಮೃತದೇಹ ಪತ್ತೆಯಾಗಿದೆ. ಕಾಸರಗೋಡಿನ ಕಿಯೂರಿ ನಲ್ಲಿ ರವಿವಾರ ಬೆಳಗ್ಗೆ ದೋಣಿಯೊಂದು ಮಗುಚಿ ಮೂವರು ನಾಪತ್ತೆಯಾಗಿದ್ದರು.
ಮೃತರನ್ನು ಕಸಬಾ ತೀರದ ಸಂದೀಪ್ (34), ರತೀಶ್ (35) ಮತ್ತು ಕಾರ್ತಿಕ್ (22) ಎಂದು ಗುರುತಿಸಲಾಗಿದ್ದು, ಅವರ ಮೃತದೇಹ ಇಂದು ಬೆಳಗ್ಗೆ ಬೇಕಲ ಕೋಟಿಕುಳಂ ತೀರದಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಸಬಾ ತೀರದಿಂದ ಆಂಜನೇಯ ಎಂಬ ಫೈಬರ್ ದೋಣಿಯಲ್ಲಿ ಏಳು ಮಂದಿ ಮೀನುಗಾರಿಕೆಗೆ ತೆರಳಿದ್ದು, ಕಿಯೂರು ಸಮೀಪ ಅಲೆಗಳ ಅಬ್ಬರಕ್ಕೆ ದೋಣಿ ಮಗುಚಿ ಬಿದ್ದು ಈ ಘಟನೆ ನಡೆದಿತ್ತು ಎಂದು ದೂರಲಾಗಿದೆ.

ನಾಲ್ವರನ್ನು ಇನ್ನೊಂದು ದೋಣಿಯಲ್ಲಿದ್ದ ಹಾಗೂ ಸ್ಥಳೀಯ ಮೀನುಗಾರರು ರಕ್ಷಿಸಿದ್ದರು. ಅಡ್ಕತ್ತಬೈಲ್ ಬೀಚ್ ನ ಬಿ.ಮನಿಕುಟ್ಟನ್ (36), ಕೋಟಿಕುಳಂ ಕಡಪ್ಪುರದ ರವಿ (22), ನೆಲ್ಲಿಕುಂಜೆಯ ಶಶಿ(35) ಮತ್ತು ಕಸಬಾದ ಶಿಬಿನ್ (23) ಅಪಾಯದಿಂದ ಪಾರಾಗಿದ್ದರು. ದುರಂತ ಬಳಿಕ ಸ್ಥಳೀಯ ಮೀನುಗಾರರು, ಕರಾವಳಿ ಪೊಲೀಸರು, ಅಗ್ನಿಶಾಮಕ ದಳ ಸಿಬ್ಬಂದಿ ಕಾರ್ಯಚರಣೆ ನಡೆಸಿದ್ದು, ರಾತ್ರಿ ತನಕ ಶೋಧ ಮುಂದುವರಿದಿತ್ತು.
ಸ್ಥಳಕ್ಕೆ ಆಗಮಿಸಿದ ಬೇಕಲ ಹಾಗೂ ಕರಾವಳಿ ಪೊಲೀಸರು ಮಹಜರು ನಡೆಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆ ಗಾಗಿ ಕಾಸರಗೋಡು ಜನರಲ್ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿಸಿದ್ದಾರೆ.
Three young fishermen, including a teenager, are feared dead and four others swam to safety when their boat capsized at the mouth of the harbor in Kasaragod on Sunday.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm