ಬ್ರೇಕಿಂಗ್ ನ್ಯೂಸ್
05-07-21 04:20 pm Mangalore Correspondent ಕರಾವಳಿ
ಉಳ್ಳಾಲ, ಜು.5: ಕರ್ನಾಟಕ ರಾಜ್ಯ ಕಾರ್ಮಿಕರ ಕಲ್ಯಾಣ ಇಲಾಖೆಯಿಂದ ಕೋವಿಡ್ ಸಂಕಷ್ಟ ಕಾಲದಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಕೊಡಲಾಗುವ ಆಹಾರ ಕಿಟ್ ವಿತರಣಾ ಪಟ್ಟಿಯಲ್ಲಿ ಅನೇಕ ನೊಂದಾಯಿತ ಕಾರ್ಮಿಕರ ಹೆಸರನ್ನು ಕೈಬಿಡಲಾಗಿದೆ. ಈ ಸಮಸ್ಯೆಯನ್ನು ಶೀಘ್ರ ಬಗೆಹರಿಸಿ ಎಲ್ಲರಿಗೂ ಕಿಟ್ ದೊರಕುವಂತೆ ಮಾಡುತ್ತೇನೆ ಎಂದು ಶಾಸಕ ಯು.ಟಿ ಖಾದರ್ ಹೇಳಿದ್ದಾರೆ.



ತಲಪಾಡಿ ಗ್ರಾಮ ಪಂಚಾಯತ್ ನಲ್ಲಿ ಪಂಚಾಯತ್ ವ್ಯಾಪ್ತಿಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಇಂದು ಅವರು ಆಹಾರ ಕಿಟ್ ವಿತರಿಸಿದರು. ಕಾರ್ಮಿಕ ಇಲಾಖೆಗೆ ಹೆಸರು ನೋಂದಾಯಿಸಿದರೂ ಅನೇಕರ ಹೆಸರುಗಳನ್ನು ಫಲಾನುಭವಿಗಳ ಪಟ್ಟಿಯಲ್ಲಿ ಕೈಬಿಡಲಾಗಿತ್ತು. ನೋಂದಾಯಿತ ಅನೇಕ ಕಾರ್ಮಿಕರು ಆಹಾರ ಕಿಟ್ ಸಿಗುತ್ತದೆಂದು ಪಂಚಾಯತ್ ಕಚೇರಿಗೆ ಬಂದಿದ್ದರು. ಪಂಚಾಯತ್ ಪಿಡಿಓ ಅವರಲ್ಲಿ ತಮ್ಮ ಹೆಸರೇಕೆ ಕೈ ಬಿಡಲಾಗಿದೆ ಎಂದು ಕೇಳಿದರೆ ಅವರಲ್ಲೂ ಸಮರ್ಪಕ ಉತ್ತರ ದೊರೆತಿಲ್ಲ. ಹಾಗಾಗಿ ಕಾರ್ಮಿಕರು ನೇರ ಶಾಸಕರಲ್ಲೇ ಈ ಬಗ್ಗೆ ಪ್ರಶ್ನಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಶಾಸಕ ಯು.ಟಿ. ಖಾದರ್ ಅವರು ಫಲಾನುಭವಿಗಳ ಪಟ್ಟಿಯಲ್ಲಿ ಕೈಬಿಡಲಾದ ಕಾರ್ಮಿಕರ ಪಟ್ಟಿಯನ್ನ ನೀಡಿ, ಇಲಾಖೆಯಲ್ಲಿ ಆಗಿರುವ ಲೋಪಗಳನ್ನು ಸಂಬಂಧಪಟ್ಟ ಅಧಿಕಾರಿಗಳಲ್ಲಿ ಪರಿಶೀಲಿಸಿ ಆದಷ್ಟು ಶೀಘ್ರ ಎಲ್ಲ ನೊಂದಾಯಿತ ಕಾರ್ಮಿಕರಿಗೆ ಆಹಾರ ಕಿಟ್ ಸಿಗುವಂತೆ ಮಾಡುತ್ತೇನೆಂದರು.




ನೋಂದಣಿ ಮಾಡದ ಕಟ್ಟಡ ಕಾರ್ಮಿಕರು ಅತೀ ಶೀಘ್ರ ನೋಂದಣಿ ಮಾಡಿ ಇಲಾಖೆಯಿಂದ ತಮ್ಮ ಕುಟುಂಬಕ್ಕೆ ಸಿಗುವ ವಿವಿಧ ಸೌಲಭ್ಯಗಳನ್ನ ಬಳಸಿಕೊಳ್ಳಿ. ಕಾರ್ಮಿಕ ಇಲಾಖೆಗೆ ಹೆಸರು ನೋಂದಾಯಿಸಲು ಕಾರ್ಮಿಕರಿಗೆ ಅನುಕೂಲವಾಗುವಂತೆ ತಲಪಾಡಿಯಲ್ಲಿ ಪ್ರತ್ಯೇಕ ಶಿಬಿರವನ್ನೂ ಆಯೋಜಿಸುವುದಾಗಿ ಹೇಳಿದರು.
ತಲಪಾಡಿ ಗ್ರಾಪಂ ಅಧ್ಯಕ್ಷೆ ಪುಷ್ಪಾವತಿ ಶೆಟ್ಟಿ, ಉಪಾಧ್ಯಕ್ಷ ಫಯಾಝ್ ಪಿಲಿಕೂರ್ , ತಾಪಂ ಮಾಜಿ ಅಧ್ಯಕ್ಷ ಮಹಮ್ಮದ್ ಮೋನು, ತಲಪಾಡಿ ಗ್ರಾ.ಪಂ ಮಾಜಿ ಅಧ್ಯಕ್ಷ ಖಾದರ್, ಮುಖಂಡರಾದ ಸತೀಶ್ ಉಳ್ಳಾಲ್, ಪಿಡಿಓ ಕೇಶವ ಪೂಜಾರಿ, ತಾಪಂ ಮಾಜಿ ಸದಸ್ಯರಾದ ಸಿದ್ದೀಕ್ ಕೊಳಂಗೆರೆ, ಸುರೇಖಾ ಚಂದ್ರಹಾಸ್, ಗ್ರಾ.ಪಂ ಸದಸ್ಯರು ಉಪಸ್ಥಿತರಿದ್ದರು.
Ullal Labourers registered for Food Kit supply go empty-handed workers slam MLA UT Khader.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 09:50 am
HK News Staffer
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
08-09-26 01:11 pm
HK News Staffer
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am
ಆಸ್ಪತ್ರೆ ಸಿಬ್ಬಂದಿಗೆ ಪ್ರಜ್ಞೆ ತಪ್ಪಿಸಿ ಲೈಂಗಿಕ ದೌ...
07-09-26 08:56 pm
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm