ಬ್ರೇಕಿಂಗ್ ನ್ಯೂಸ್
07-07-21 03:56 pm Mangalore Correspondent ಕರಾವಳಿ
ಉಳ್ಳಾಲ, ಜು.7: ಉಳ್ಳಾಲ ಕೋಟೆಪುರ ಕಡಲ ತೀರದಲ್ಲಿ ಮಿಡ್ ನೈಟ್ ಮರಳುಗಾರಿಕೆ ಅವ್ಯಾಹತವಾಗಿದ್ದು ಉಳ್ಳಾಲ ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿ ಐದು ಲೋಡ್ ಮರಳು ವಶಕ್ಕೆ ಪಡೆದು ಒಬ್ಬನನ್ನು ಬಂಧಿಸಿದ್ದಾರೆ.
ಕೋಟೆಪುರ ಕಡಲ ತೀರದಿಂದ ನಿತ್ಯವೂ ರಾತ್ರಿ 11 ಗಂಟೆಯಿಂದ ಮುಂಜಾನೆ 4 ಗಂಟೆ ತನಕ ಅಕ್ರಮ ಮರಳುಗಾರಿಕೆ ನಡೆಯುತ್ತಿರುವುದರ ಬಗ್ಗೆ ಹೆಡ್ ಲೈನ್ ಕರ್ನಾಟಕ ಇತ್ತೀಚೆಗೆ ವಿಡಿಯೋ ಸಹಿತ ವರದಿ ಮಾಡಿತ್ತು. ಇದರಿಂದ ಸ್ವಲ್ಪ ಕಾಲ ಮರಳುಗಾರಿಕೆ ದಂಧೆಗೆ ಬ್ರೇಕ್ ಬಿದ್ದಿತ್ತು. ಆನಂತರ ಎಂದಿನಂತೆ ಮರಳುಗಾರಿಕೆ ಎಗ್ಗಿಲ್ಲದೆ ನಡೆಯುತ್ತಲೇ ಇತ್ತು.
ಕೋಟೆಪುರದ ಮಸೀದಿ ಕಮಿಟಿಯ ಪ್ರಮುಖನೊಬ್ಬ ಅಕ್ರಮ ಮರಳುಗಾರಿಕೆಯ ಬ್ರೋಕರ್ ಆಗಿ ಕೆಲಸ ಮಾಡುತ್ತಿದ್ದಾಗಿ ಸ್ಥಳೀಯರು ಆರೋಪ ಮಾಡಿದ್ದರು. ಉಳ್ಳಾಲ ಠಾಣೆಯ ಕೂಗಳತೆ ದೂರದಲ್ಲಿ ನಡೆಯುವ ಅಕ್ರಮಗಳ ಬಗ್ಗೆ ಇಲ್ಲಿನ ಪೊಲೀಸರಿಗೆ ಗೊತ್ತಿಲ್ಲದೇ ಏನೂ ಇಲ್ಲ. ಆದರೂ ಪೊಲೀಸರು ಮಗುಮ್ಮಾಗಿ ಕುಳಿತಿದ್ದರು.
ಆದರೆ, ಎರಡು ದಿನಗಳ ಹಿಂದೆ ಕೋಟೆಪುರದ ಅಕ್ರಮದ ಬಗ್ಗೆ ಮೇಲಧಿಕಾರಿಗಳಿಗೆ ಒತ್ತಡ ಬಂದಿತ್ತು ಎನ್ನಲಾಗುತ್ತಿದ್ದು ಇದರ ಪರಿಣಾಮ ಇಂದು ಮುಂಜಾನೆ ಉಳ್ಳಾಲ ಪೊಲೀಸರು ದಾಳಿ ಮಾಡಿದ್ದಾರೆ. ಈ ವೇಳೆ, ಎರಡು ಈಚರ್ ಲಾರಿಯಲ್ಲಿ ಲೋಡ್ ಮಾಡಿದ್ದ ಮರಳು, ಎರಡು 407 ಟೆಂಪೋದಲ್ಲಿ ಲೋಡ್ ಮಾಡಿದ್ದ ಮರಳು ಹಾಗೂ ಕಡಲ ತೀರದಲ್ಲಿ ರಾಶಿ ಹಾಕಿದ್ದ ಮೂರು ಲೋಡ್ ಮರಳನ್ನು ವಶಕ್ಕೆ ಪಡೆಯಲಾಗಿದೆ. ಅಲ್ಲದೆ ಇವುಗಳಿಗೆ ಎಸ್ಕಾರ್ಟ್ ಆಗಿ ಹೋಗುತ್ತಿದ್ದ ನಾಲ್ಕು ದ್ವಿಚಕ್ರ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮರಳುಗಾರಿಕೆ ವೇಳೆ ಸ್ಥಳದಲ್ಲಿದ್ದ ಕೋಟೆಪುರದ ಶಾರುಕ್ ಎಂಬಾತನನ್ನು ಬಂಧಿಸಿದ್ದಾರೆ.
Kotepura seaside sand illegal sand mining Ullal police raid spot one arrested four trucks seized. Sand smugglers were constantly mining sand illegally for the sea and based on information ACP Ranjith Kumar and the team has raided the spot.
04-10-25 10:54 pm
Bangalore Correspondent
ಸ್ವತಃ ಕಾಂಗ್ರೆಸ್ ನಾಯಕರೇ ಸಿದ್ದು ಯಾವಾಗ ಸಿಎಂ ಪಟ್ಟ...
04-10-25 10:16 pm
ಮಹಾರಾಷ್ಟ್ರದ ಸಮುದ್ರದಲ್ಲಿ ಘೋರ ದುರಂತ ; ಬೆಳಗಾವಿಯ...
04-10-25 09:18 pm
Belagavi Heart Attack, SSLC: ಬೆಳಗಾವಿ ; SSLC ಓ...
04-10-25 07:22 pm
ಐಟಿ ನಗರಿ ಬೆಂಗಳೂರು 'ಸೈಬರ್ ಕ್ರೈಮ್' ಕ್ಯಾಪಿಟಲ್...
03-10-25 06:08 pm
04-10-25 04:45 pm
HK Staffer
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
04-10-25 02:57 pm
HK News Desk
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm