ಬ್ರೇಕಿಂಗ್ ನ್ಯೂಸ್
07-07-21 03:56 pm Mangalore Correspondent ಕರಾವಳಿ
ಉಳ್ಳಾಲ, ಜು.7: ಉಳ್ಳಾಲ ಕೋಟೆಪುರ ಕಡಲ ತೀರದಲ್ಲಿ ಮಿಡ್ ನೈಟ್ ಮರಳುಗಾರಿಕೆ ಅವ್ಯಾಹತವಾಗಿದ್ದು ಉಳ್ಳಾಲ ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿ ಐದು ಲೋಡ್ ಮರಳು ವಶಕ್ಕೆ ಪಡೆದು ಒಬ್ಬನನ್ನು ಬಂಧಿಸಿದ್ದಾರೆ.
ಕೋಟೆಪುರ ಕಡಲ ತೀರದಿಂದ ನಿತ್ಯವೂ ರಾತ್ರಿ 11 ಗಂಟೆಯಿಂದ ಮುಂಜಾನೆ 4 ಗಂಟೆ ತನಕ ಅಕ್ರಮ ಮರಳುಗಾರಿಕೆ ನಡೆಯುತ್ತಿರುವುದರ ಬಗ್ಗೆ ಹೆಡ್ ಲೈನ್ ಕರ್ನಾಟಕ ಇತ್ತೀಚೆಗೆ ವಿಡಿಯೋ ಸಹಿತ ವರದಿ ಮಾಡಿತ್ತು. ಇದರಿಂದ ಸ್ವಲ್ಪ ಕಾಲ ಮರಳುಗಾರಿಕೆ ದಂಧೆಗೆ ಬ್ರೇಕ್ ಬಿದ್ದಿತ್ತು. ಆನಂತರ ಎಂದಿನಂತೆ ಮರಳುಗಾರಿಕೆ ಎಗ್ಗಿಲ್ಲದೆ ನಡೆಯುತ್ತಲೇ ಇತ್ತು.





ಕೋಟೆಪುರದ ಮಸೀದಿ ಕಮಿಟಿಯ ಪ್ರಮುಖನೊಬ್ಬ ಅಕ್ರಮ ಮರಳುಗಾರಿಕೆಯ ಬ್ರೋಕರ್ ಆಗಿ ಕೆಲಸ ಮಾಡುತ್ತಿದ್ದಾಗಿ ಸ್ಥಳೀಯರು ಆರೋಪ ಮಾಡಿದ್ದರು. ಉಳ್ಳಾಲ ಠಾಣೆಯ ಕೂಗಳತೆ ದೂರದಲ್ಲಿ ನಡೆಯುವ ಅಕ್ರಮಗಳ ಬಗ್ಗೆ ಇಲ್ಲಿನ ಪೊಲೀಸರಿಗೆ ಗೊತ್ತಿಲ್ಲದೇ ಏನೂ ಇಲ್ಲ. ಆದರೂ ಪೊಲೀಸರು ಮಗುಮ್ಮಾಗಿ ಕುಳಿತಿದ್ದರು.
ಆದರೆ, ಎರಡು ದಿನಗಳ ಹಿಂದೆ ಕೋಟೆಪುರದ ಅಕ್ರಮದ ಬಗ್ಗೆ ಮೇಲಧಿಕಾರಿಗಳಿಗೆ ಒತ್ತಡ ಬಂದಿತ್ತು ಎನ್ನಲಾಗುತ್ತಿದ್ದು ಇದರ ಪರಿಣಾಮ ಇಂದು ಮುಂಜಾನೆ ಉಳ್ಳಾಲ ಪೊಲೀಸರು ದಾಳಿ ಮಾಡಿದ್ದಾರೆ. ಈ ವೇಳೆ, ಎರಡು ಈಚರ್ ಲಾರಿಯಲ್ಲಿ ಲೋಡ್ ಮಾಡಿದ್ದ ಮರಳು, ಎರಡು 407 ಟೆಂಪೋದಲ್ಲಿ ಲೋಡ್ ಮಾಡಿದ್ದ ಮರಳು ಹಾಗೂ ಕಡಲ ತೀರದಲ್ಲಿ ರಾಶಿ ಹಾಕಿದ್ದ ಮೂರು ಲೋಡ್ ಮರಳನ್ನು ವಶಕ್ಕೆ ಪಡೆಯಲಾಗಿದೆ. ಅಲ್ಲದೆ ಇವುಗಳಿಗೆ ಎಸ್ಕಾರ್ಟ್ ಆಗಿ ಹೋಗುತ್ತಿದ್ದ ನಾಲ್ಕು ದ್ವಿಚಕ್ರ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮರಳುಗಾರಿಕೆ ವೇಳೆ ಸ್ಥಳದಲ್ಲಿದ್ದ ಕೋಟೆಪುರದ ಶಾರುಕ್ ಎಂಬಾತನನ್ನು ಬಂಧಿಸಿದ್ದಾರೆ.
Kotepura seaside sand illegal sand mining Ullal police raid spot one arrested four trucks seized. Sand smugglers were constantly mining sand illegally for the sea and based on information ACP Ranjith Kumar and the team has raided the spot.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm