ಬ್ರೇಕಿಂಗ್ ನ್ಯೂಸ್
09-07-21 11:54 am Mangalore Correspondent ಕರಾವಳಿ
ಮಂಗಳೂರು, ಜುಲೈ 9 : ಕೋವಿಡ್ ಸೋಂಕಿನ ನಡುವೆಯೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಲೇರಿಯಾ ಹಾಗೂ ಡೆಂಗಿ ಅಬ್ಬರ ಹೆಚ್ಚಾಗಿದ್ದು, ಆತಂಕಕ್ಕೆ ಕಾರಣವಾಗಿದೆ. ರಾಜ್ಯದಲ್ಲಿ ಅತಿ ಹೆಚ್ಚು ಅಂದರೆ, ಶೇ.80 ರಷ್ಟು ಮಲೇರಿಯಾ ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಂಡುಬರುತ್ತಿದೆ ಎಂಬ ಮಾಹಿತಿಯನ್ನು ಆರೋಗ್ಯ ಇಲಾಖೆ ನೀಡಿದೆ.
ರಾಜ್ಯದಲ್ಲಿ ಕಳೆದ ವರ್ಷ ಒಟ್ಟು 1,701 ಮಲೇರಿಯಾ ಪ್ರಕರಣ ಪತ್ತೆಯಾಗಿದ್ದವು. ಈ ಪೈಕಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ 1,397 ಪ್ರಕರಣ ಪತ್ತೆಯಾಗಿದ್ದರೆ, ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ದಾಖಲೆಯ 1,306 ಪ್ರಕರಣಗಳು ಪತ್ತೆಯಾಗಿದ್ದವು. ಈ ಬಾರಿ ಕೂಡ ಮಲೇರಿಯಾ ಪ್ರಕರಣ ಹೆಚ್ಚುವ ಭೀತಿ ಎದುರಾಗಿದೆ.
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಲೇರಿಯಾ ಪ್ರಕರಣಗಳ ಸಂಖ್ಯೆ ಜೂನ್ ತಿಂಗಳಿನಿಂದ ಏರಿಕೆ ಆಗುತ್ತಿದೆ. ಮೇ ತಿಂಗಳ ಅಂತ್ಯದ ವೇಳೆಗೆ ಜಿಲ್ಲೆಯಲ್ಲಿ 277 ಮಲೇರಿಯಾ ಪ್ರಕರಣ ಪತ್ತೆಯಾಗಿದ್ದವು. ಇದರಲ್ಲಿ ಪಾಲಿಕೆ ವ್ಯಾಪ್ತಿಯಲ್ಲಿಯೇ 255 ಪ್ರಕರಣ ದಾಖಲಾಗಿವೆ. ಇದರ ಜತೆಗೆ ಗ್ರಾಮೀಣ ಪ್ರದೇಶಗಳಲ್ಲಿ ಡೆಂಗಿ ಅಬ್ಬರ ಜೋರಾಗುತ್ತಿದ್ದು ಮೇ ಅಂತ್ಯದ ವೇಳೆಗೆ ಜಿಲ್ಲೆಯಲ್ಲಿ 122 ಪ್ರಕರಣ ಪತ್ತೆಯಾಗಿವೆ.
2019ರಲ್ಲಿ ಪಾಲಿಕೆ ವ್ಯಾಪ್ತಿಯಲ್ಲಿ 2,593 ಮಲೇರಿಯಾ ಪ್ರಕರಣ ದಾಖಲಾಗಿದ್ದವು. ಜಿಲ್ಲೆಯಲ್ಲಿ 2,797 ಮಲೇರಿಯಾ ಪ್ರಕರಣ ಪತ್ತೆಯಾಗಿದ್ದವು. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಹಾಗೂ ಪಾಲಿಕೆ ಈ ಬಾರಿ ಗ್ರಾಮೀಣ ಪ್ರದೇಶಗಳಲ್ಲಿ ಮಲೇರಿಯಾ ಹಾಗೂ ಡೆಂಗಿ ರೋಗದ ಬಗ್ಗೆ ಮತ್ತು ಸೊಳ್ಳೆಗಳ ನಿಯಂತ್ರಣದ ವಿಚಾರದಲ್ಲಿ ಜಾಗೃತಿ ಮೂಡಿಸುವ ಹೆಜ್ಜೆ ಇಟ್ಟಿದೆ.
‘ಜಿಲ್ಲೆಯಲ್ಲಿ ಮಲೇರಿಯಾ ಹಾಗೂ ಡೆಂಗಿ ಬಗ್ಗೆ ಜನರಿಗೆ ಮಾಹಿತಿ ನೀಡುವ ಉದ್ದೇಶದಿಂದ ಕ್ಷೇತ್ರ ಹಾಗೂ ಮನೆ ಭೇಟಿ, ಲಾರ್ವಾ ಸರ್ವೆ ಕಾರ್ಯ ನಡೆಸಲಾಗುತ್ತಿದೆ. ವೈದ್ಯಾಧಿಕಾರಿ ನೇತೃತ್ವದಲ್ಲಿ ಗ್ರಾಮ, ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಕಾರ್ಯಪಡೆ ರಚನೆ ಮಾಡಲಾಗಿದೆ. ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ ನಿರಂತರವಾಗಿ ನಡೆಸಲಾಗುತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ನವೀನ್ಚಂದ್ರ ಕುಲಾಲ್ ತಿಳಿಸಿದರು.
ದಿನದ 24 ಗಂಟೆ ಸೇವೆ ವ್ಯವಸ್ಥೆ
ಕೋವಿಡ್ ಸೋಂಕು ಒಮ್ಮೆ ಬಾಧಿಸಿ ಹೋಗಬಹುದು, ಆದರೆ ಡೆಂಗಿ, ಮಲೇರಿಯಾ ಪದೇ ಪದೇ ಬರಬಹುದು. ಮಳೆಗಾಲದಲ್ಲಿ ಸೊಳ್ಳೆಗಳಿಂದ ರಕ್ಷಣೆ ಪಡೆಯಬೇಕು. ನೀರು ನಿಲ್ಲದಂತೆ ಜಾಗ್ರತೆ ವಹಿಸಬೇಕು. ಬಿಟ್ಟು ಬಿಟ್ಟು ಬರುವ ಚಳಿ ಜ್ವರ, ತಲೆ ನೋವು, ಮೈಕೈ, ನೋವು ಇದ್ದರೆ ಕೂಡಲೇ ಪರೀಕ್ಷೆ ಮಾಡಿಸಿಕೊಳ್ಳಬೇಕು. ಆರೋಗ್ಯ ಇಲಾಖೆ ದಿನದ 24 ಗಂಟೆ ಉಚಿತ ಸೇವೆ ನೀಡುತ್ತಿದೆ. ಮೊಬೈಲ್ 9448556872 ಸಂಪರ್ಕಿಸಿ ಸೇವೆ ಪಡೆಯಬಹುದು ಎಂದು ದಕ್ಷಿಣ ಕನ್ನಡ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.
Amid coronavirus Dakshina Kannada stands first in reporting Malaria and Dengue cases in State with 80 percent of cases being detected from Mangalore.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 12:58 pm
Mangalore Correspondent
ಗುಂಡಿ ಬಿದ್ದ ಹೆದ್ದಾರಿ ತಕ್ಷಣ ದುರಸ್ತಿ ; ಸುರತ್ಕಲ್...
12-09-25 11:32 am
ಬಂಗ್ಲೆಗುಡ್ಡೆ ಕಾಡಿನಲ್ಲಿ ರಾಶಿ ರಾಶಿ ಹೆಣಗಳ ಅವಶೇಷ,...
11-09-25 10:42 pm
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm