ಬ್ರೇಕಿಂಗ್ ನ್ಯೂಸ್
11-07-21 02:24 pm Mangaluru Correspondent ಕರಾವಳಿ
ಉಳ್ಳಾಲ, ಜು.11: ಧಾರಾಕಾರ ಮಳೆಯ ನಡುವೆ ಹೆದ್ದಾರಿಯಲ್ಲಿ ಬ್ರೇಕ್ ಹೊಡೆದು ಹಠಾತ್ತನೆ ನಿಂತ ಸಿಟಿ ಬಸ್ಸಿನ ಹಿಂಬದಿಗೆ ಬೈಕ್ ಡಿಕ್ಕಿಯಾಗಿದ್ದು ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ರಾ.ಹೆ. 66 ರ ಉಚ್ಚಿಲದಲ್ಲಿ ನಡೆದಿದೆ.



ಬೈಕ್ ಸವಾರ ಆಂಧ್ರ ಪ್ರದೇಶದ ಮೂಲದ ಶಶಿಧರ್ ರೆಡ್ಡಿ ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಂಧ್ರ ಮೂಲದ ಶಶಿಧರ್ ರೆಡ್ಡಿ (27) ಮತ್ತು ಶಾನು ಭಾಝ್ (31) ಎಂಬವರು ತಲಪಾಡಿ ಟೋಲ್ ಪ್ಲಾಝಾದ ಸಿಬ್ಬಂದಿಗಳಾಗಿದ್ದು ಕರ್ತವ್ಯಕ್ಕೆ ತೆರಳುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಉಚ್ಚಿಲದಲ್ಲಿ ಖಾಸಗಿ ಸಿಟಿ ಬಸ್ಸೊಂದು ಹಠಾತ್ತಾಗಿ ಬ್ರೇಕ್ ಹೊಡೆದ ಕಾರಣ ಹಿಂದಿನಿಂದ ಧಾವಿಸುತ್ತಿದ್ದ ಬೈಕ್ ಸವಾರರು ಡಿಕ್ಕಿ ಹೊಡೆದಿದ್ದಾರೆ. ಅಪಘಾತದ ತೀವ್ರತೆಗೆ ಬೈಕ್ ಸಂಪೂರ್ಣವಾಗಿ ಬಸ್ಸಿನ ಒಳಗೆ ನುಗ್ಗಿದೆ. ಬೈಕ್ ಸವಾರ ಶಶಿಧರ್ ತಲೆಗೆ ಗಂಭೀರ ಗಾಯಗಳಾಗಿದ್ದು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಹ ಸವಾರ ಶಾನು ಭಾಝ್ ಕೂಡ ಗಾಯಾಳುವಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಉಚ್ಚಿಲ ಹೆದ್ದಾರಿಯಲ್ಲಿ ರಸ್ತೆಯಲ್ಲೇ ಅವೈಜ್ಞಾನಿಕವಾಗಿ ಬಸ್ಸುಗಳನ್ನು ನಿಲುಗಡೆ ಮಾಡುವುದರಿಂದ ಇಲ್ಲಿ ಅಪಘಾತಗಳಾಗುತ್ತಿವೆ. ಈ ಹಿಂದೆಯೂ ಇದೇ ರೀತಿ ಅಪಘಾತ ಆಗಿದ್ದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Mangalore Rider Critical after Bike rams Speeding Bus after sudden brake at Uchila Near Talapady.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 09:50 am
HK News Staffer
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
08-09-26 11:17 am
HK News Staffer
ಆಸ್ಪತ್ರೆ ಸಿಬ್ಬಂದಿಗೆ ಪ್ರಜ್ಞೆ ತಪ್ಪಿಸಿ ಲೈಂಗಿಕ ದೌ...
07-09-26 08:56 pm
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm