ಬ್ರೇಕಿಂಗ್ ನ್ಯೂಸ್
11-07-21 07:54 pm Mangaluru Correspondent ಕರಾವಳಿ
ಮಂಗಳೂರು, ಜುಲೈ 11: ಅಟೋ ಚಾಲಕನನ್ನು ಅಡ್ಡಗಟ್ಟಿ ಬಸ್ ಚಾಲಕ ಸೇರಿ ರಸ್ತೆ ಮಧ್ಯದಲ್ಲೇ ಕಪಾಳಕ್ಕೆ ಹೊಡೆದು ಹಲ್ಲೆಗೈದ ಘಟನೆ ಸುರತ್ಕಲ್ ಬಳಿ ನಡೆದಿದೆ.
ಆಟೋ ಚಾಲಕ ಸುಧಾಕರ ಎಂಬವರು ಇಂದು ಬೆಳಗ್ಗೆ 8.30ರ ಸುಮಾರಿಗೆ ಸುರತ್ಕಲ್ ಮಾರಿಗುಡಿ ಬಳಿ ಕೈ ಅಡ್ಡಹಿಡಿ್ದದು ನಿಲ್ಲಿಸಿದ ಇಬ್ಬರನ್ನು ಕುಳ್ಳಿರಿಸಿಕೊಂಡು ತೆರಳಿದ್ದರು. ಇದನ್ನು ಗಮನಿಸಿದ ಉಡುಪಿಯಿಂದ ಮಂಗಳೂರಿನತ್ತ ಬರುತ್ತಿದ್ದ ಕೊಹಿನೂರ್ ಹೆಸರಿನ ಖಾಸಗಿ ಬಸ್ ಚಾಲಕ ನೇರವಾಗಿ ಮುನ್ನುಗ್ಗಿ ಬಂದು ಆಟೋವನ್ನು ಅಡ್ಡಹಾಕಿ ಚಾಲಕನ ಮೇಲೆ ಕೈಮಾಡಿದ್ದಾರೆ.
ನಮ್ಮ ಪ್ರಯಾಣಿಕರನ್ನು ನೀನು ಯಾಕೆ ಒಯ್ಯುತ್ತಿದ್ದೀಯಾ ಎಂದು ಪ್ರಶ್ನೆ ಮಾಡಿ್್ದದ್ದಲ್ಲದೆ, ಆಟೋ ಚಾಲಕ ಚೇಳ್ಯಾರ್ ಪದವು ನಿವಾಸಿ 55 ವರ್ಷದ ಸುಧಾಕರ್ ಮೇಲೆ ಬಸ್ ಚಾಲಕ ಕಪಾಳಕ್ಕೆ ಬಾರಿಸಿದ್ದಾನೆ. ಅಲ್ಲದೆ, ಬಸ್ ಕಂಡಕ್ಟರ್ ಕೂಡ ಸ್ಥಳಕ್ಕೆ ಬಂದು ಆಟೋ ಚಾಲಕನ ಮೇಲೆ ಹಲ್ಲೆ ಮಾಡಿದ್ದಾನೆ. ಪ್ರಯಾಣಿಕರನ್ನು ಆಸ್ಪತ್ರೆಗೆ ಒಯ್ಯುತ್ತಿರುವುದಾಗಿ ಹೇಳಿದರೂ, ಬಸ್ ಸಿಬಂದಿ ಕೇಳದೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ನೆಲಕ್ಕೆ ದೂಡಿ ಹಾಕಿ ಮೂರ್ನಾಲ್ಕು ಬಾರಿ ಕೆನ್ನೆಗೆ ಬಾರಿಸಿದ್ದು ರಸ್ತೆ ಬದಿಯ ಕಟ್ಟಡದ ಸಿಸಿಟಿವಿಯಲ್ಲಿ ದಾಖಲಾಗಿದೆ. ಹಲ್ಲೆ ಘಟನೆ ಬಗ್ಗೆ ರಿಕ್ಷಾ ಚಾಲಕರು ಸುರತ್ಕಲ್ ಪೊಲೀಸರಿಗೆ ದೂರು ನೀಡಿ, ಕೂಡಲೇ ಬಸ್ ಸೀಜ್ ಮಾಡುವಂತೆ ಒತ್ತಾಯಿಸಿದ್ದಾರೆ. ದೂರು ಸ್ವೀಕರಿಸಿದ ಪೊಲೀಸರು ಬಸ್ ಸಿಬಂದಿಯನ್ನು ಬಂಧಿಸುವುದಲ್ಲದೆ, ಬಸ್ಸನ್ನೂ ಸೀಜ್ ಮಾಡುವುದಾಗಿ ಹೇಳಿಕೊಂಡಿದ್ದರು. ಆದರೆ, ಬೆಳಗ್ಗೆ ದೂರು ದಾಖಲಾಗಿೂ ಸಂಜೆಯಾದ್ರೂ ಘಟನೆ ಬಗ್ಗೆ ಪೊಲೀಸರು ಕ್ರಮ ಜರುಗಿಸಿಲ್ಲ. ಬಸ್ಸನ್ನೂ ಸೀಜ್ ಮಾಡಿಲ್ಲ ಎಂದು ಸುರತ್ಕಲ್ ಪರಿಸರದ ಆಟೋ ಚಾಲಕರು ಹೆಡ್ ಲೈನ್ ಕರ್ನಾಟಕಕ್ಕೆ ಕರೆ ಮಾಡಿ ತಿಳಿಸಿದ್ದಾರೆ.
ಘಟನೆ ಬಗ್ಗೆ ಪೊಲೀಸರು ಕ್ರಮ ಜರುಗಿಸದಿದ್ದರೆ ನಾಳೆ ಬಸ್ ತಡೆದು ಪ್ರತಿಭಟನೆ ನಡೆಸುತ್ತೇವೆ ಎಂದು ಸುರತ್ಕಲ್ ಆಟೋ ಚಾಲಕರ ಸಂಘದ ಅಧ್ಯಕ್ಷ ಲತೀಫ್ ತಿಳಿಸಿದ್ದಾರೆ.
Mangalore Kohinoor Bus Driver Brutally attacks Auto Driver for Picking up Passenger. The driver along with Conductor pulled the auto driver on road and attacked him. A case has been registered at the Surathkal police station.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm