ಬ್ರೇಕಿಂಗ್ ನ್ಯೂಸ್
11-07-21 07:54 pm Mangaluru Correspondent ಕರಾವಳಿ
ಮಂಗಳೂರು, ಜುಲೈ 11: ಅಟೋ ಚಾಲಕನನ್ನು ಅಡ್ಡಗಟ್ಟಿ ಬಸ್ ಚಾಲಕ ಸೇರಿ ರಸ್ತೆ ಮಧ್ಯದಲ್ಲೇ ಕಪಾಳಕ್ಕೆ ಹೊಡೆದು ಹಲ್ಲೆಗೈದ ಘಟನೆ ಸುರತ್ಕಲ್ ಬಳಿ ನಡೆದಿದೆ.
ಆಟೋ ಚಾಲಕ ಸುಧಾಕರ ಎಂಬವರು ಇಂದು ಬೆಳಗ್ಗೆ 8.30ರ ಸುಮಾರಿಗೆ ಸುರತ್ಕಲ್ ಮಾರಿಗುಡಿ ಬಳಿ ಕೈ ಅಡ್ಡಹಿಡಿ್ದದು ನಿಲ್ಲಿಸಿದ ಇಬ್ಬರನ್ನು ಕುಳ್ಳಿರಿಸಿಕೊಂಡು ತೆರಳಿದ್ದರು. ಇದನ್ನು ಗಮನಿಸಿದ ಉಡುಪಿಯಿಂದ ಮಂಗಳೂರಿನತ್ತ ಬರುತ್ತಿದ್ದ ಕೊಹಿನೂರ್ ಹೆಸರಿನ ಖಾಸಗಿ ಬಸ್ ಚಾಲಕ ನೇರವಾಗಿ ಮುನ್ನುಗ್ಗಿ ಬಂದು ಆಟೋವನ್ನು ಅಡ್ಡಹಾಕಿ ಚಾಲಕನ ಮೇಲೆ ಕೈಮಾಡಿದ್ದಾರೆ.
ನಮ್ಮ ಪ್ರಯಾಣಿಕರನ್ನು ನೀನು ಯಾಕೆ ಒಯ್ಯುತ್ತಿದ್ದೀಯಾ ಎಂದು ಪ್ರಶ್ನೆ ಮಾಡಿ್್ದದ್ದಲ್ಲದೆ, ಆಟೋ ಚಾಲಕ ಚೇಳ್ಯಾರ್ ಪದವು ನಿವಾಸಿ 55 ವರ್ಷದ ಸುಧಾಕರ್ ಮೇಲೆ ಬಸ್ ಚಾಲಕ ಕಪಾಳಕ್ಕೆ ಬಾರಿಸಿದ್ದಾನೆ. ಅಲ್ಲದೆ, ಬಸ್ ಕಂಡಕ್ಟರ್ ಕೂಡ ಸ್ಥಳಕ್ಕೆ ಬಂದು ಆಟೋ ಚಾಲಕನ ಮೇಲೆ ಹಲ್ಲೆ ಮಾಡಿದ್ದಾನೆ. ಪ್ರಯಾಣಿಕರನ್ನು ಆಸ್ಪತ್ರೆಗೆ ಒಯ್ಯುತ್ತಿರುವುದಾಗಿ ಹೇಳಿದರೂ, ಬಸ್ ಸಿಬಂದಿ ಕೇಳದೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ನೆಲಕ್ಕೆ ದೂಡಿ ಹಾಕಿ ಮೂರ್ನಾಲ್ಕು ಬಾರಿ ಕೆನ್ನೆಗೆ ಬಾರಿಸಿದ್ದು ರಸ್ತೆ ಬದಿಯ ಕಟ್ಟಡದ ಸಿಸಿಟಿವಿಯಲ್ಲಿ ದಾಖಲಾಗಿದೆ. ಹಲ್ಲೆ ಘಟನೆ ಬಗ್ಗೆ ರಿಕ್ಷಾ ಚಾಲಕರು ಸುರತ್ಕಲ್ ಪೊಲೀಸರಿಗೆ ದೂರು ನೀಡಿ, ಕೂಡಲೇ ಬಸ್ ಸೀಜ್ ಮಾಡುವಂತೆ ಒತ್ತಾಯಿಸಿದ್ದಾರೆ. ದೂರು ಸ್ವೀಕರಿಸಿದ ಪೊಲೀಸರು ಬಸ್ ಸಿಬಂದಿಯನ್ನು ಬಂಧಿಸುವುದಲ್ಲದೆ, ಬಸ್ಸನ್ನೂ ಸೀಜ್ ಮಾಡುವುದಾಗಿ ಹೇಳಿಕೊಂಡಿದ್ದರು. ಆದರೆ, ಬೆಳಗ್ಗೆ ದೂರು ದಾಖಲಾಗಿೂ ಸಂಜೆಯಾದ್ರೂ ಘಟನೆ ಬಗ್ಗೆ ಪೊಲೀಸರು ಕ್ರಮ ಜರುಗಿಸಿಲ್ಲ. ಬಸ್ಸನ್ನೂ ಸೀಜ್ ಮಾಡಿಲ್ಲ ಎಂದು ಸುರತ್ಕಲ್ ಪರಿಸರದ ಆಟೋ ಚಾಲಕರು ಹೆಡ್ ಲೈನ್ ಕರ್ನಾಟಕಕ್ಕೆ ಕರೆ ಮಾಡಿ ತಿಳಿಸಿದ್ದಾರೆ.
ಘಟನೆ ಬಗ್ಗೆ ಪೊಲೀಸರು ಕ್ರಮ ಜರುಗಿಸದಿದ್ದರೆ ನಾಳೆ ಬಸ್ ತಡೆದು ಪ್ರತಿಭಟನೆ ನಡೆಸುತ್ತೇವೆ ಎಂದು ಸುರತ್ಕಲ್ ಆಟೋ ಚಾಲಕರ ಸಂಘದ ಅಧ್ಯಕ್ಷ ಲತೀಫ್ ತಿಳಿಸಿದ್ದಾರೆ.
Mangalore Kohinoor Bus Driver Brutally attacks Auto Driver for Picking up Passenger. The driver along with Conductor pulled the auto driver on road and attacked him. A case has been registered at the Surathkal police station.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm