ಬ್ರೇಕಿಂಗ್ ನ್ಯೂಸ್
13-07-21 03:47 pm Mangalore Correspondent ಕರಾವಳಿ
ಬಂಟ್ವಾಳ, ಜುಲೈ 13: ಮನೆಯಲ್ಲಿ ಗ್ಯಾಸ್ ಗೀಸರ್ ಬಳಸಿ ಸ್ನಾನ ಮಾಡುತ್ತಿದ್ದ ಯುವಕನೊಬ್ಬ ಬಾತ್ ರೂಮಿನಲ್ಲೇ ಉಸಿರುಕಟ್ಟಿ ಸಾವು ಕಂಡ ಘಟನೆ ಫರಂಗಿಪೇಟೆಯಲ್ಲಿ ನಡೆದಿದೆ. ಫರಂಗಿಪೇಟೆಯ ಮಾರಿಪಳ್ಳ ನಿವಾಸಿ ಇಸ್ಮಾಯಿಲ್ ಎಂಬವರ ಪುತ್ರ ಇಜಾಸ್ ಅಹ್ಮದ್ (23) ಮೃತ ಯುವಕ. ಜುಲೈ 12ರಂದು ಸಂಜೆ ಬಾತ್ ರೂಮಿನಲ್ಲಿ ಸ್ನಾನ ಮಾಡುತ್ತಿದ್ದಾಗ ಘಟನೆ ನಡೆದಿದೆ.
ಮಳೆ ಇದ್ದುದರಿಂದ ಗೀಸರ್ ಆನ್ ಮಾಡಿ, ಇಜಾಸ್ ಸ್ನಾನಕ್ಕೆ ಹೋಗಿದ್ದ. ಆದರೆ, ಒಂದು ಗಂಟೆ ಕಳೆದರೂ ಹೊರಗೆ ಬರದ್ದನ್ನು ಕಂಡು ತಂದೆ ಮತ್ತು ಇತರ ಸೋದರರು ಸೇರಿ ಬಾಗಿಲು ಬಡಿದು ಕರೆದಿದ್ದಾರೆ. ಬಾಗಿಲು ಬಡಿದರೂ ಸ್ಪಂದಿಸದ್ದರಿಂದ ಬಳಿಕ ಒಡೆದು ನೋಡಿದಾಗ, ಇಜಾಸ್ ನೆಲದಲ್ಲಿ ಕುಸಿದು ಬಿದ್ದಿರುವುದು ಕಂಡಿದೆ. ಕೂಡಲೇ ಆಸ್ಪತ್ರೆಗೆ ಒಯ್ದಿದ್ದು, ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಗೀಸರ್ ವರ್ಕಿಂಗ್ ಇರುವಾಗ ಕಾರ್ಬನ್ ಮೋನೋಕ್ಸೈಡ್ ಬಿಡುಗಡೆಯಾಗುವುದು ಮತ್ತು ಈ ವೇಳೆ ಬಾತ್ ರೂಮ್ ಬಾಗಿಲು ಬಂದ್ ಮಾಡಿದ್ದರಿಂದ ಅದನ್ನು ಸೇವಿಸಿ ಮೃತಪಟ್ಟಿದ್ದಾನೆ ಎನ್ನಲಾಗುತ್ತಿದೆ. ಇಜಾಸ್ ಹುಬ್ಬಳ್ಳಿಯಲ್ಲಿ ಆಭರಣ ಮಳಿಗೆಯಲ್ಲಿ ಕೆಲಸಕ್ಕಿದ್ದು, ವಾರದ ಹಿಂದಷ್ಟೇ ಊರಿಗೆ ಬಂದಿದ್ದ. ಇಜಾಸ್ ಅಹ್ಮದ್, ತಂದೆ, ತಾಯಿ ಮತ್ತು ಮೂವರು ಸೋದರರನ್ನು ಅಗಲಿದ್ದಾರೆ.
The youth died due to asphyxiation while having a bath due to the gas geyser. This incident is reported from Maripalla of Farangipet in the taluk on the afternoon of Monday, July 12. Ijaz Ahmed (23), son of Ismail, is the youth who died in this incident. He was having a bath in the bathroom with the geyser on.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm