ಬ್ರೇಕಿಂಗ್ ನ್ಯೂಸ್
13-07-21 03:47 pm Mangalore Correspondent ಕರಾವಳಿ
ಬಂಟ್ವಾಳ, ಜುಲೈ 13: ಮನೆಯಲ್ಲಿ ಗ್ಯಾಸ್ ಗೀಸರ್ ಬಳಸಿ ಸ್ನಾನ ಮಾಡುತ್ತಿದ್ದ ಯುವಕನೊಬ್ಬ ಬಾತ್ ರೂಮಿನಲ್ಲೇ ಉಸಿರುಕಟ್ಟಿ ಸಾವು ಕಂಡ ಘಟನೆ ಫರಂಗಿಪೇಟೆಯಲ್ಲಿ ನಡೆದಿದೆ. ಫರಂಗಿಪೇಟೆಯ ಮಾರಿಪಳ್ಳ ನಿವಾಸಿ ಇಸ್ಮಾಯಿಲ್ ಎಂಬವರ ಪುತ್ರ ಇಜಾಸ್ ಅಹ್ಮದ್ (23) ಮೃತ ಯುವಕ. ಜುಲೈ 12ರಂದು ಸಂಜೆ ಬಾತ್ ರೂಮಿನಲ್ಲಿ ಸ್ನಾನ ಮಾಡುತ್ತಿದ್ದಾಗ ಘಟನೆ ನಡೆದಿದೆ.
ಮಳೆ ಇದ್ದುದರಿಂದ ಗೀಸರ್ ಆನ್ ಮಾಡಿ, ಇಜಾಸ್ ಸ್ನಾನಕ್ಕೆ ಹೋಗಿದ್ದ. ಆದರೆ, ಒಂದು ಗಂಟೆ ಕಳೆದರೂ ಹೊರಗೆ ಬರದ್ದನ್ನು ಕಂಡು ತಂದೆ ಮತ್ತು ಇತರ ಸೋದರರು ಸೇರಿ ಬಾಗಿಲು ಬಡಿದು ಕರೆದಿದ್ದಾರೆ. ಬಾಗಿಲು ಬಡಿದರೂ ಸ್ಪಂದಿಸದ್ದರಿಂದ ಬಳಿಕ ಒಡೆದು ನೋಡಿದಾಗ, ಇಜಾಸ್ ನೆಲದಲ್ಲಿ ಕುಸಿದು ಬಿದ್ದಿರುವುದು ಕಂಡಿದೆ. ಕೂಡಲೇ ಆಸ್ಪತ್ರೆಗೆ ಒಯ್ದಿದ್ದು, ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಗೀಸರ್ ವರ್ಕಿಂಗ್ ಇರುವಾಗ ಕಾರ್ಬನ್ ಮೋನೋಕ್ಸೈಡ್ ಬಿಡುಗಡೆಯಾಗುವುದು ಮತ್ತು ಈ ವೇಳೆ ಬಾತ್ ರೂಮ್ ಬಾಗಿಲು ಬಂದ್ ಮಾಡಿದ್ದರಿಂದ ಅದನ್ನು ಸೇವಿಸಿ ಮೃತಪಟ್ಟಿದ್ದಾನೆ ಎನ್ನಲಾಗುತ್ತಿದೆ. ಇಜಾಸ್ ಹುಬ್ಬಳ್ಳಿಯಲ್ಲಿ ಆಭರಣ ಮಳಿಗೆಯಲ್ಲಿ ಕೆಲಸಕ್ಕಿದ್ದು, ವಾರದ ಹಿಂದಷ್ಟೇ ಊರಿಗೆ ಬಂದಿದ್ದ. ಇಜಾಸ್ ಅಹ್ಮದ್, ತಂದೆ, ತಾಯಿ ಮತ್ತು ಮೂವರು ಸೋದರರನ್ನು ಅಗಲಿದ್ದಾರೆ.
The youth died due to asphyxiation while having a bath due to the gas geyser. This incident is reported from Maripalla of Farangipet in the taluk on the afternoon of Monday, July 12. Ijaz Ahmed (23), son of Ismail, is the youth who died in this incident. He was having a bath in the bathroom with the geyser on.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am