ಬ್ರೇಕಿಂಗ್ ನ್ಯೂಸ್
13-07-21 04:01 pm Mangalore Correspondent ಕರಾವಳಿ
ಮಂಗಳೂರು, ಜುಲೈ 13 : ತೆಂಕುತಿಟ್ಟು ಯಕ್ಷಗಾನದ ಹೆಸರಾಂತ ಹಿರಿಯ ಕಲಾವಿದ, ಅಗ್ರಮಾನ್ಯ ಕಿರೀಟ ವೇಷಧಾರಿಯಾಗಿ ಗುರುತಿಸಲ್ಪಟ್ಟಿದ್ದ ಸಂಪಾಜೆ ಶೀನಪ್ಪ ರೈ(81) ಇಂದು ಬೆಳಗ್ಗೆ ಅಲ್ಪಕಾಲದ ಅನಾರೋಗ್ಯದಿಂದ ಇಹಲೋಕ ತ್ಯಜಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗ ಸಂಪಾಜೆಯ ಕೀಲಾರಿನ ಮಾದೇಪಾಲು ಎಂಬಲ್ಲಿ 1940ರ ಜೂನ್ 07ರಂದು ಜನಿಸಿದ್ದ ಸಂಪಾಜೆ ಶೀನಪ್ಪ ರೈಯವರು ನಾಲ್ಕನೇ ತರಗತಿ ವರೆಗೆ ಶಾಲೆಗೆ ತೆರಳಿ, ಬಳಿಕ ಯಕ್ಷಗಾನದತ್ತ ಆಕರ್ಷಿತರಾಗಿದ್ದರು.
ಪ್ರಸ್ತುತ ಸುರತ್ಕಲ್ನ ಕಾಟಿಪಳ್ಳದಲ್ಲಿ ಪುತ್ರನ ಮನೆಯಲ್ಲಿ ನೆಲೆಸಿದ್ದರು. ಯಕ್ಷಗಾನದ ಗತ್ತಿನ ಕಿರೀಟ ವೇಷಗಳಿಗೆ ಹೆಸರಾಗಿದ್ದ ಶೀನಪ್ಪ ರೈಯವರಿಗೆ ಹೆಚ್ಚು ಹೆಸರು ತಂದುಕೊಟ್ಟಿದ್ದು ರಕ್ತಬೀಜ ಪಾತ್ರ. ಕಟೀಲು ಮೇಳದಲ್ಲಿ ನಾಲ್ಕು ದಶಕಕ್ಕೂ ಹೆಚ್ಚು ಕಾಲ ಸೇವೆಯಾಟ ಮಾಡಿದ್ದ ಶೀನಪ್ಪ ರೈಯವರು ಸುದೀರ್ಘ ಕಾಲದಿಂದ ರಕ್ತಬೀಜ ಪಾತ್ರ ಮಾಡಿಕೊಂಡೇ ಬಂದಿದ್ದರು. ದೇವಿ ಮಹಾತ್ಮೆ ಯಕ್ಷಗಾನ ಅಂದರೆ, ಶೀನಪ್ಪ ರೈ ಇದ್ದಾರಾ ಎನ್ನುವಷ್ಟರ ಮಟ್ಟಿಗೆ ಅವರ ಖದರ್ ಇತ್ತು.



ಇದಲ್ಲದೆ, ಹಿರಣ್ಯಾಕ್ಷ, ಶಿಶುಪಾಲ, ಸತ್ಯವ್ರತ, ಕೌರವ, ದೇವೇಂದ್ರ, ಇಂದ್ರಜಿತು ವೇಷಗಳಿಂದಲೂ ಅವರು ಪ್ರಸಿದ್ಧರಾಗಿದ್ದರು.
ಕಟೀಲು ಮೇಳದಲ್ಲಿ ಹಲವು ದಶಕಗಳ ತಿರುಗಾಟದ ಬಳಿಕ ಶೀನಪ್ಪ ರೈಯವರು ಕುಂಡಾವು, ವೇಣೂರು, ಇರುವೈಲು, ಸೌಕೂರು, ಚೌಡೇಶ್ವರಿ, ಎಡನೀರು, ಹೊಸನಗರ, ಹನುಮಗಿರಿ ಮೇಳಗಳಲ್ಲಿ ತಿರುಗಾಟ ನಡೆಸಿದ್ದರು. ಮೂರು ವರ್ಷಗಳ ಹಿಂದೆ ಅನಾರೋಗ್ಯದಿಂದಾಗಿ ತಿರುಗಾಟ ನಿಲ್ಲಿಸಿದ್ದರು.
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸಹಿತ ಅನೇಕ ಪ್ರಶಸ್ತಿ, ಪುರಸ್ಕಾರಗಳನ್ನು ಪಡೆದಿರುವ ಸಂಪಾಜೆ ಶೀನಪ್ಪ ರೈಗಳು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.
Mangalore Yakshagana artiste Sampaje Shinappa (81) no more. He also was awarded with Karnataka Rajyotsava Prashasti and many more prestigious awards.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am