ಬ್ರೇಕಿಂಗ್ ನ್ಯೂಸ್
13-07-21 04:01 pm Mangalore Correspondent ಕರಾವಳಿ
ಮಂಗಳೂರು, ಜುಲೈ 13 : ತೆಂಕುತಿಟ್ಟು ಯಕ್ಷಗಾನದ ಹೆಸರಾಂತ ಹಿರಿಯ ಕಲಾವಿದ, ಅಗ್ರಮಾನ್ಯ ಕಿರೀಟ ವೇಷಧಾರಿಯಾಗಿ ಗುರುತಿಸಲ್ಪಟ್ಟಿದ್ದ ಸಂಪಾಜೆ ಶೀನಪ್ಪ ರೈ(81) ಇಂದು ಬೆಳಗ್ಗೆ ಅಲ್ಪಕಾಲದ ಅನಾರೋಗ್ಯದಿಂದ ಇಹಲೋಕ ತ್ಯಜಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗ ಸಂಪಾಜೆಯ ಕೀಲಾರಿನ ಮಾದೇಪಾಲು ಎಂಬಲ್ಲಿ 1940ರ ಜೂನ್ 07ರಂದು ಜನಿಸಿದ್ದ ಸಂಪಾಜೆ ಶೀನಪ್ಪ ರೈಯವರು ನಾಲ್ಕನೇ ತರಗತಿ ವರೆಗೆ ಶಾಲೆಗೆ ತೆರಳಿ, ಬಳಿಕ ಯಕ್ಷಗಾನದತ್ತ ಆಕರ್ಷಿತರಾಗಿದ್ದರು.
ಪ್ರಸ್ತುತ ಸುರತ್ಕಲ್ನ ಕಾಟಿಪಳ್ಳದಲ್ಲಿ ಪುತ್ರನ ಮನೆಯಲ್ಲಿ ನೆಲೆಸಿದ್ದರು. ಯಕ್ಷಗಾನದ ಗತ್ತಿನ ಕಿರೀಟ ವೇಷಗಳಿಗೆ ಹೆಸರಾಗಿದ್ದ ಶೀನಪ್ಪ ರೈಯವರಿಗೆ ಹೆಚ್ಚು ಹೆಸರು ತಂದುಕೊಟ್ಟಿದ್ದು ರಕ್ತಬೀಜ ಪಾತ್ರ. ಕಟೀಲು ಮೇಳದಲ್ಲಿ ನಾಲ್ಕು ದಶಕಕ್ಕೂ ಹೆಚ್ಚು ಕಾಲ ಸೇವೆಯಾಟ ಮಾಡಿದ್ದ ಶೀನಪ್ಪ ರೈಯವರು ಸುದೀರ್ಘ ಕಾಲದಿಂದ ರಕ್ತಬೀಜ ಪಾತ್ರ ಮಾಡಿಕೊಂಡೇ ಬಂದಿದ್ದರು. ದೇವಿ ಮಹಾತ್ಮೆ ಯಕ್ಷಗಾನ ಅಂದರೆ, ಶೀನಪ್ಪ ರೈ ಇದ್ದಾರಾ ಎನ್ನುವಷ್ಟರ ಮಟ್ಟಿಗೆ ಅವರ ಖದರ್ ಇತ್ತು.



ಇದಲ್ಲದೆ, ಹಿರಣ್ಯಾಕ್ಷ, ಶಿಶುಪಾಲ, ಸತ್ಯವ್ರತ, ಕೌರವ, ದೇವೇಂದ್ರ, ಇಂದ್ರಜಿತು ವೇಷಗಳಿಂದಲೂ ಅವರು ಪ್ರಸಿದ್ಧರಾಗಿದ್ದರು.
ಕಟೀಲು ಮೇಳದಲ್ಲಿ ಹಲವು ದಶಕಗಳ ತಿರುಗಾಟದ ಬಳಿಕ ಶೀನಪ್ಪ ರೈಯವರು ಕುಂಡಾವು, ವೇಣೂರು, ಇರುವೈಲು, ಸೌಕೂರು, ಚೌಡೇಶ್ವರಿ, ಎಡನೀರು, ಹೊಸನಗರ, ಹನುಮಗಿರಿ ಮೇಳಗಳಲ್ಲಿ ತಿರುಗಾಟ ನಡೆಸಿದ್ದರು. ಮೂರು ವರ್ಷಗಳ ಹಿಂದೆ ಅನಾರೋಗ್ಯದಿಂದಾಗಿ ತಿರುಗಾಟ ನಿಲ್ಲಿಸಿದ್ದರು.
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸಹಿತ ಅನೇಕ ಪ್ರಶಸ್ತಿ, ಪುರಸ್ಕಾರಗಳನ್ನು ಪಡೆದಿರುವ ಸಂಪಾಜೆ ಶೀನಪ್ಪ ರೈಗಳು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.
Mangalore Yakshagana artiste Sampaje Shinappa (81) no more. He also was awarded with Karnataka Rajyotsava Prashasti and many more prestigious awards.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm