ಬ್ರೇಕಿಂಗ್ ನ್ಯೂಸ್
13-07-21 04:01 pm Mangalore Correspondent ಕರಾವಳಿ
ಮಂಗಳೂರು, ಜುಲೈ 13 : ತೆಂಕುತಿಟ್ಟು ಯಕ್ಷಗಾನದ ಹೆಸರಾಂತ ಹಿರಿಯ ಕಲಾವಿದ, ಅಗ್ರಮಾನ್ಯ ಕಿರೀಟ ವೇಷಧಾರಿಯಾಗಿ ಗುರುತಿಸಲ್ಪಟ್ಟಿದ್ದ ಸಂಪಾಜೆ ಶೀನಪ್ಪ ರೈ(81) ಇಂದು ಬೆಳಗ್ಗೆ ಅಲ್ಪಕಾಲದ ಅನಾರೋಗ್ಯದಿಂದ ಇಹಲೋಕ ತ್ಯಜಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗ ಸಂಪಾಜೆಯ ಕೀಲಾರಿನ ಮಾದೇಪಾಲು ಎಂಬಲ್ಲಿ 1940ರ ಜೂನ್ 07ರಂದು ಜನಿಸಿದ್ದ ಸಂಪಾಜೆ ಶೀನಪ್ಪ ರೈಯವರು ನಾಲ್ಕನೇ ತರಗತಿ ವರೆಗೆ ಶಾಲೆಗೆ ತೆರಳಿ, ಬಳಿಕ ಯಕ್ಷಗಾನದತ್ತ ಆಕರ್ಷಿತರಾಗಿದ್ದರು.
ಪ್ರಸ್ತುತ ಸುರತ್ಕಲ್ನ ಕಾಟಿಪಳ್ಳದಲ್ಲಿ ಪುತ್ರನ ಮನೆಯಲ್ಲಿ ನೆಲೆಸಿದ್ದರು. ಯಕ್ಷಗಾನದ ಗತ್ತಿನ ಕಿರೀಟ ವೇಷಗಳಿಗೆ ಹೆಸರಾಗಿದ್ದ ಶೀನಪ್ಪ ರೈಯವರಿಗೆ ಹೆಚ್ಚು ಹೆಸರು ತಂದುಕೊಟ್ಟಿದ್ದು ರಕ್ತಬೀಜ ಪಾತ್ರ. ಕಟೀಲು ಮೇಳದಲ್ಲಿ ನಾಲ್ಕು ದಶಕಕ್ಕೂ ಹೆಚ್ಚು ಕಾಲ ಸೇವೆಯಾಟ ಮಾಡಿದ್ದ ಶೀನಪ್ಪ ರೈಯವರು ಸುದೀರ್ಘ ಕಾಲದಿಂದ ರಕ್ತಬೀಜ ಪಾತ್ರ ಮಾಡಿಕೊಂಡೇ ಬಂದಿದ್ದರು. ದೇವಿ ಮಹಾತ್ಮೆ ಯಕ್ಷಗಾನ ಅಂದರೆ, ಶೀನಪ್ಪ ರೈ ಇದ್ದಾರಾ ಎನ್ನುವಷ್ಟರ ಮಟ್ಟಿಗೆ ಅವರ ಖದರ್ ಇತ್ತು.



ಇದಲ್ಲದೆ, ಹಿರಣ್ಯಾಕ್ಷ, ಶಿಶುಪಾಲ, ಸತ್ಯವ್ರತ, ಕೌರವ, ದೇವೇಂದ್ರ, ಇಂದ್ರಜಿತು ವೇಷಗಳಿಂದಲೂ ಅವರು ಪ್ರಸಿದ್ಧರಾಗಿದ್ದರು.
ಕಟೀಲು ಮೇಳದಲ್ಲಿ ಹಲವು ದಶಕಗಳ ತಿರುಗಾಟದ ಬಳಿಕ ಶೀನಪ್ಪ ರೈಯವರು ಕುಂಡಾವು, ವೇಣೂರು, ಇರುವೈಲು, ಸೌಕೂರು, ಚೌಡೇಶ್ವರಿ, ಎಡನೀರು, ಹೊಸನಗರ, ಹನುಮಗಿರಿ ಮೇಳಗಳಲ್ಲಿ ತಿರುಗಾಟ ನಡೆಸಿದ್ದರು. ಮೂರು ವರ್ಷಗಳ ಹಿಂದೆ ಅನಾರೋಗ್ಯದಿಂದಾಗಿ ತಿರುಗಾಟ ನಿಲ್ಲಿಸಿದ್ದರು.
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸಹಿತ ಅನೇಕ ಪ್ರಶಸ್ತಿ, ಪುರಸ್ಕಾರಗಳನ್ನು ಪಡೆದಿರುವ ಸಂಪಾಜೆ ಶೀನಪ್ಪ ರೈಗಳು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.
Mangalore Yakshagana artiste Sampaje Shinappa (81) no more. He also was awarded with Karnataka Rajyotsava Prashasti and many more prestigious awards.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 09:50 am
HK News Staffer
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
08-09-26 11:17 am
HK News Staffer
ಆಸ್ಪತ್ರೆ ಸಿಬ್ಬಂದಿಗೆ ಪ್ರಜ್ಞೆ ತಪ್ಪಿಸಿ ಲೈಂಗಿಕ ದೌ...
07-09-26 08:56 pm
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm