ಬ್ರೇಕಿಂಗ್ ನ್ಯೂಸ್
14-07-21 03:01 pm Mangalore Correspondent ಕರಾವಳಿ
ಸುಬ್ರಹ್ಮಣ್ಯ, ಜುಲೈ 14 : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ನಿರಂತರ ಮಳೆ ಸುರಿಯುತ್ತಿದ್ದು ಕುಮಾರಧಾರಾ, ನೇತ್ರಾವತಿ ನದಿ ತುಂಬಿ ಹರಿಯತೊಡಗಿದೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಬಳಿಯ ಕುಮಾರಧಾರಾ ಸ್ನಾನ ಘಟ್ಟ ಸಂಪೂರ್ಣ ಮುಳುಗಡೆಯಾಗಿದೆ.
ಶಿರಾಡಿ ಘಾಟಿ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕುಮಾರಧಾರಾ ನದಿ ತುಂಬಿ ಹರಿಯುತ್ತಿದೆ. ನಾಲ್ಕು ದಿನಗಳಿಂದ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಕುಮಾರಧಾರಾ, ನೇತ್ರಾವತಿ, ಪಯಸ್ವಿನಿ, ಗುಂಡ್ಯ ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ.




ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸಿದ ಭಕ್ತಾದಿಗಳು ಕುಮಾರಧಾರಾ ನದಿಗೆ ಇಳಿಯಲಾಗದೆ ರಸ್ತೆಗೆ ಬಂದಿರುವ ನೆರೆನೀರಿನಲ್ಲಿ ತೀರ್ಥಸ್ನಾನ ನೆರವೇರಿಸುತ್ತಿದ್ದಾರೆ. ನದಿಯ ದಡದಲ್ಲಿ ತೀರ್ಥಸ್ನಾನ ಮಾಡಲು ಭಕ್ತರಿಗೆ ಅವಕಾಶ ನೀಡಲಾಗಿದ್ದು, ನದಿಗೆ ಇಳಿಯದಂತೆ ಎಚ್ಚರಿಕೆ ಸಂದೇಶ ನೀಡಲಾಗಿದೆ. ಸ್ಥಳದಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
ಹಾಗೆಯೇ ಧರ್ಮಸ್ಥಳದಲ್ಲಿಯೂ ನೇತ್ರಾವತಿ ನದಿಯಲ್ಲಿ ನೀರು ಏರಿಕೆಯಾಗಿದ್ದು ತೀರ್ಥಸ್ನಾನ ಮಾಡುವವರಿಗೆ ನದಿಗಿಳಿಯದಂತೆ ಸ್ಥಳದಲ್ಲಿ ಸಿಬಂದಿ ಸೂಚನೆ ನೀಡುತ್ತಿದ್ದಾರೆ. ಘಟ್ಟ ಪ್ರದೇಶಗಳಲ್ಲಿ ಮಳೆಯಾದ ವೇಳೆ ನದಿಯಲ್ಲಿ ಆಗಿಂದಾಗ್ಗೆ ನೆರೆನೀರು ಬರುವುದರಿಂದ ನದಿಗೆ ಇಳಿಯುವುದು, ಈಜಾಡುವುದಕ್ಕೆ ಅವಕಾಶ ನೀಡಿಲ್ಲ. ಭಕ್ತರು ಜಾಗ್ರತೆ ವಹಿಸುವಂತೆ ಸ್ಥಳದಲ್ಲಿ ಬಂದೋಬಸ್ತ್ ಮಾಡಲಾಗಿದೆ.
Video:
Following bountiful rain in the catchment area of River Kumaradhara, the inflow of water to the river has increased and the bathing ghat (snanaghatta) at Kukke Subrahmanya Temple was inundated on Wednesday
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 09:50 am
HK News Staffer
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
08-09-26 11:17 am
HK News Staffer
ಆಸ್ಪತ್ರೆ ಸಿಬ್ಬಂದಿಗೆ ಪ್ರಜ್ಞೆ ತಪ್ಪಿಸಿ ಲೈಂಗಿಕ ದೌ...
07-09-26 08:56 pm
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm