ಬ್ರೇಕಿಂಗ್ ನ್ಯೂಸ್
14-07-21 03:01 pm Mangalore Correspondent ಕರಾವಳಿ
ಸುಬ್ರಹ್ಮಣ್ಯ, ಜುಲೈ 14 : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ನಿರಂತರ ಮಳೆ ಸುರಿಯುತ್ತಿದ್ದು ಕುಮಾರಧಾರಾ, ನೇತ್ರಾವತಿ ನದಿ ತುಂಬಿ ಹರಿಯತೊಡಗಿದೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಬಳಿಯ ಕುಮಾರಧಾರಾ ಸ್ನಾನ ಘಟ್ಟ ಸಂಪೂರ್ಣ ಮುಳುಗಡೆಯಾಗಿದೆ.
ಶಿರಾಡಿ ಘಾಟಿ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕುಮಾರಧಾರಾ ನದಿ ತುಂಬಿ ಹರಿಯುತ್ತಿದೆ. ನಾಲ್ಕು ದಿನಗಳಿಂದ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಕುಮಾರಧಾರಾ, ನೇತ್ರಾವತಿ, ಪಯಸ್ವಿನಿ, ಗುಂಡ್ಯ ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ.




ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸಿದ ಭಕ್ತಾದಿಗಳು ಕುಮಾರಧಾರಾ ನದಿಗೆ ಇಳಿಯಲಾಗದೆ ರಸ್ತೆಗೆ ಬಂದಿರುವ ನೆರೆನೀರಿನಲ್ಲಿ ತೀರ್ಥಸ್ನಾನ ನೆರವೇರಿಸುತ್ತಿದ್ದಾರೆ. ನದಿಯ ದಡದಲ್ಲಿ ತೀರ್ಥಸ್ನಾನ ಮಾಡಲು ಭಕ್ತರಿಗೆ ಅವಕಾಶ ನೀಡಲಾಗಿದ್ದು, ನದಿಗೆ ಇಳಿಯದಂತೆ ಎಚ್ಚರಿಕೆ ಸಂದೇಶ ನೀಡಲಾಗಿದೆ. ಸ್ಥಳದಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
ಹಾಗೆಯೇ ಧರ್ಮಸ್ಥಳದಲ್ಲಿಯೂ ನೇತ್ರಾವತಿ ನದಿಯಲ್ಲಿ ನೀರು ಏರಿಕೆಯಾಗಿದ್ದು ತೀರ್ಥಸ್ನಾನ ಮಾಡುವವರಿಗೆ ನದಿಗಿಳಿಯದಂತೆ ಸ್ಥಳದಲ್ಲಿ ಸಿಬಂದಿ ಸೂಚನೆ ನೀಡುತ್ತಿದ್ದಾರೆ. ಘಟ್ಟ ಪ್ರದೇಶಗಳಲ್ಲಿ ಮಳೆಯಾದ ವೇಳೆ ನದಿಯಲ್ಲಿ ಆಗಿಂದಾಗ್ಗೆ ನೆರೆನೀರು ಬರುವುದರಿಂದ ನದಿಗೆ ಇಳಿಯುವುದು, ಈಜಾಡುವುದಕ್ಕೆ ಅವಕಾಶ ನೀಡಿಲ್ಲ. ಭಕ್ತರು ಜಾಗ್ರತೆ ವಹಿಸುವಂತೆ ಸ್ಥಳದಲ್ಲಿ ಬಂದೋಬಸ್ತ್ ಮಾಡಲಾಗಿದೆ.
Video:
Following bountiful rain in the catchment area of River Kumaradhara, the inflow of water to the river has increased and the bathing ghat (snanaghatta) at Kukke Subrahmanya Temple was inundated on Wednesday
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm