ಬ್ರೇಕಿಂಗ್ ನ್ಯೂಸ್
16-07-21 01:30 pm Mangalore Correspondent ಕರಾವಳಿ
ಮಂಗಳೂರು, ಜುಲೈ 16: ಮಂಗಳೂರು – ಮುಂಬೈ ರೈಲ್ವೇ ಹಳಿಯ ಕುಲಶೇಖರ – ತೋಕೂರು ಮಧ್ಯೆ ಗುಡ್ಡ ಕುಸಿದು ಹಳಿಗೆ ಬಿದ್ದಿದ್ದು, ರೈಲು ಸಂಚಾರಕ್ಕೆ ತೊಡಕಾಗಿದೆ. ಭಾರೀ ಮಳೆಯಿಂದಾಗಿ ಗುಡ್ಡಕ್ಕೆ ಕಟ್ಟಿದ್ದ ತಡೆಗೋಡೆ ಸೇರಿದಂತೆ ಗುಡ್ಡ ಕುಸಿದು ಹಳಿಗೆ ಬಿದ್ದು ಮಣ್ಣು ಮುಚ್ಚಿದೆ.
ಇದರಿಂದಾಗಿ ಮಂಗಳೂರಿನಿಂದ ಕೊಂಕಣ ರೈಲ್ವೇ ಮೂಲಕ ಕಾರವಾರ, ಮುಂಬೈ ಸಾಗುವ ರೈಲುಗಳ ಸಂಚಾರಕ್ಕೆ ತೊಡಕಾಗಿದೆ. ಇಂದು ಬೆಳಗ್ಗೆ ಗುಡ್ಡ ಕುಸಿದ ಘಟನೆ ನಡೆದಿದ್ದು, ಈ ಭಾಗದಲ್ಲಿ ಸಂಚರಿಸುವ ರೈಲುಗಳನ್ನು ತಾತ್ಕಾಲಿಕವಾಗಿ ಮುಂದೂಡಿಕೆ ಮಾಡಲಾಗಿದೆ. ಇದೇ ವೇಳೆ, ರೈಲು ಹಳಿಯಿಂದ ಮಣ್ಣು ತೆರವು ಮಾಡುವ ಕಾರ್ಯ ನಡೆಸಲಾಗುತ್ತಿದೆ.




ರೈಲ್ವೇ ಮೂಲಗಳ ಪ್ರಕಾರ, ಇಂದು ಈ ಹಳಿಯಿಂದ ಸಂಚರಿಸುವ ಒಂಬತ್ತು ರೈಲುಗಳ ಸಂಚಾರಕ್ಕೆ ತೊಂದರೆಯಾಗಿದೆ. ಮಧ್ಯಾಹ್ನ ಮಂಗಳೂರಿನಿಂದ ಮುಂಬೈಗೆ ಹೊರಡಲಿದ್ದ ಮತ್ಸ್ಯಗಂಧ ರೈಲು ನಾಲ್ಕು ಗಂಟೆ ತಡವಾಗಿ ಸಂಚರಿಸಲಿದೆ ಎನ್ನುವ ಮಾಹಿತಿ ನೀಡಲಾಗಿದೆ.
ರೈಲು ಹಳಿಯ ಉದ್ದಕ್ಕೆ ಗುಡ್ಡದ ಬದಿಗೆ ಕಾಂಕ್ರೀಟ್ ತಡೆಗೋಡೆ ಕಟ್ಟಲಾಗಿತ್ತು. ಕಾಂಕ್ರೀಟ್ ಗೋಡೆಯೇ ಕುಸಿದು ಬಿದ್ದಿದ್ದು , ಹಳಿಯ ಬದಿಯಲ್ಲಿ ಮಳೆ ನೀರು ಹರಿಯುತ್ತಿದೆ. ಸಂಜೆ ಹೊತ್ತಿಗೆ ಮಣ್ಣು ತೆರವು ಕಾರ್ಯಾಚರಣೆ ಮುಗಿಯಬಹುದು ಎನ್ನುವ ಮಾಹಿತಿಯನ್ನು ರೈಲ್ವೇ ಅಧಿಕಾರಿಗಳು ನೀಡಿದ್ದಾರೆ. ಕೊಂಕಣ ರೈಲ್ವೇ ಮೂಲಕ ದೆಹಲಿಗೆ ತೆರಳುವ ನಿಜಾಮುದ್ದೀನ್ ಎಕ್ಸ್ ಪ್ರೆಸ್ ಸೇರಿದಂತೆ ಕೇರಳದಿಂದ ಮಂಗಳೂರು- ಮುಂಬೈಗೆ ಸಂಚರಿಸುವ ರೈಲುಗಳನ್ನು ಕಣ್ಣೂರಿನಲ್ಲಿ ಡೈವರ್ಟ್ ಮಾಡಲಾಗಿದ್ದು, ಮೈಸೂರು ಮೂಲಕ ಸಾಗಲಿದೆ.
ಹಜ್ರತ್ ನಿಜಾಮುದ್ದೀನ್ ರಾಜಧಾನಿ ಎಕ್ಸ್ ಪ್ರೆಸ್, ಜಾಮ್ ನಗರ್ ಎಕ್ಸ್ ಪ್ರೆಸ್, ಪುಣೆ ಸೂಪರ್ ಫಾಸ್ಟ್, ಮುಂಬೈ ಸಿಎಸ್ ಟಿ, ಕಾರವಾರ ಯಶವಂತಪುರ ಸ್ಪೆಷಲ್ ಟ್ರೈನ್(ವಿಳಂಬ), ಮಂಗಳಾ ಲಕ್ಷದ್ವೀಪ ಎಕ್ಸ್ ಪ್ರೆಸ್ (ದೆಹಲಿ), ಇಂದೋರ್ ಎಕ್ಸ್ ಪ್ರೆಸ್, ನೇತ್ರಾವತಿ ಮತ್ತು ಪಂಚಗಂಗಾ ಎಕ್ಸ್ ಪ್ರೆಸ್ ರೈಲುಗಳ ಸಂಚಾರಕ್ಕೆ ತೊಡಕಾಗಿದ್ದು ಮಂಗಳೂರು ರೈಲು ನಿಲ್ದಾಣಕ್ಕೆ ಬರದೆ ಬೇರೆ ಬೇರೆ ಹಾದಿಗಳಲ್ಲಿ ಅದನ್ನು ಡೈವರ್ಟ್ ಮಾಡಲಾಗಿದೆ.
Video:
Due to Heavy Rain Landslide Happened near Thokur Mangalore Konkan railway Trains Affected.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am