ಬ್ರೇಕಿಂಗ್ ನ್ಯೂಸ್
16-07-21 01:30 pm Mangalore Correspondent ಕರಾವಳಿ
ಮಂಗಳೂರು, ಜುಲೈ 16: ಮಂಗಳೂರು – ಮುಂಬೈ ರೈಲ್ವೇ ಹಳಿಯ ಕುಲಶೇಖರ – ತೋಕೂರು ಮಧ್ಯೆ ಗುಡ್ಡ ಕುಸಿದು ಹಳಿಗೆ ಬಿದ್ದಿದ್ದು, ರೈಲು ಸಂಚಾರಕ್ಕೆ ತೊಡಕಾಗಿದೆ. ಭಾರೀ ಮಳೆಯಿಂದಾಗಿ ಗುಡ್ಡಕ್ಕೆ ಕಟ್ಟಿದ್ದ ತಡೆಗೋಡೆ ಸೇರಿದಂತೆ ಗುಡ್ಡ ಕುಸಿದು ಹಳಿಗೆ ಬಿದ್ದು ಮಣ್ಣು ಮುಚ್ಚಿದೆ.
ಇದರಿಂದಾಗಿ ಮಂಗಳೂರಿನಿಂದ ಕೊಂಕಣ ರೈಲ್ವೇ ಮೂಲಕ ಕಾರವಾರ, ಮುಂಬೈ ಸಾಗುವ ರೈಲುಗಳ ಸಂಚಾರಕ್ಕೆ ತೊಡಕಾಗಿದೆ. ಇಂದು ಬೆಳಗ್ಗೆ ಗುಡ್ಡ ಕುಸಿದ ಘಟನೆ ನಡೆದಿದ್ದು, ಈ ಭಾಗದಲ್ಲಿ ಸಂಚರಿಸುವ ರೈಲುಗಳನ್ನು ತಾತ್ಕಾಲಿಕವಾಗಿ ಮುಂದೂಡಿಕೆ ಮಾಡಲಾಗಿದೆ. ಇದೇ ವೇಳೆ, ರೈಲು ಹಳಿಯಿಂದ ಮಣ್ಣು ತೆರವು ಮಾಡುವ ಕಾರ್ಯ ನಡೆಸಲಾಗುತ್ತಿದೆ.




ರೈಲ್ವೇ ಮೂಲಗಳ ಪ್ರಕಾರ, ಇಂದು ಈ ಹಳಿಯಿಂದ ಸಂಚರಿಸುವ ಒಂಬತ್ತು ರೈಲುಗಳ ಸಂಚಾರಕ್ಕೆ ತೊಂದರೆಯಾಗಿದೆ. ಮಧ್ಯಾಹ್ನ ಮಂಗಳೂರಿನಿಂದ ಮುಂಬೈಗೆ ಹೊರಡಲಿದ್ದ ಮತ್ಸ್ಯಗಂಧ ರೈಲು ನಾಲ್ಕು ಗಂಟೆ ತಡವಾಗಿ ಸಂಚರಿಸಲಿದೆ ಎನ್ನುವ ಮಾಹಿತಿ ನೀಡಲಾಗಿದೆ.
ರೈಲು ಹಳಿಯ ಉದ್ದಕ್ಕೆ ಗುಡ್ಡದ ಬದಿಗೆ ಕಾಂಕ್ರೀಟ್ ತಡೆಗೋಡೆ ಕಟ್ಟಲಾಗಿತ್ತು. ಕಾಂಕ್ರೀಟ್ ಗೋಡೆಯೇ ಕುಸಿದು ಬಿದ್ದಿದ್ದು , ಹಳಿಯ ಬದಿಯಲ್ಲಿ ಮಳೆ ನೀರು ಹರಿಯುತ್ತಿದೆ. ಸಂಜೆ ಹೊತ್ತಿಗೆ ಮಣ್ಣು ತೆರವು ಕಾರ್ಯಾಚರಣೆ ಮುಗಿಯಬಹುದು ಎನ್ನುವ ಮಾಹಿತಿಯನ್ನು ರೈಲ್ವೇ ಅಧಿಕಾರಿಗಳು ನೀಡಿದ್ದಾರೆ. ಕೊಂಕಣ ರೈಲ್ವೇ ಮೂಲಕ ದೆಹಲಿಗೆ ತೆರಳುವ ನಿಜಾಮುದ್ದೀನ್ ಎಕ್ಸ್ ಪ್ರೆಸ್ ಸೇರಿದಂತೆ ಕೇರಳದಿಂದ ಮಂಗಳೂರು- ಮುಂಬೈಗೆ ಸಂಚರಿಸುವ ರೈಲುಗಳನ್ನು ಕಣ್ಣೂರಿನಲ್ಲಿ ಡೈವರ್ಟ್ ಮಾಡಲಾಗಿದ್ದು, ಮೈಸೂರು ಮೂಲಕ ಸಾಗಲಿದೆ.
ಹಜ್ರತ್ ನಿಜಾಮುದ್ದೀನ್ ರಾಜಧಾನಿ ಎಕ್ಸ್ ಪ್ರೆಸ್, ಜಾಮ್ ನಗರ್ ಎಕ್ಸ್ ಪ್ರೆಸ್, ಪುಣೆ ಸೂಪರ್ ಫಾಸ್ಟ್, ಮುಂಬೈ ಸಿಎಸ್ ಟಿ, ಕಾರವಾರ ಯಶವಂತಪುರ ಸ್ಪೆಷಲ್ ಟ್ರೈನ್(ವಿಳಂಬ), ಮಂಗಳಾ ಲಕ್ಷದ್ವೀಪ ಎಕ್ಸ್ ಪ್ರೆಸ್ (ದೆಹಲಿ), ಇಂದೋರ್ ಎಕ್ಸ್ ಪ್ರೆಸ್, ನೇತ್ರಾವತಿ ಮತ್ತು ಪಂಚಗಂಗಾ ಎಕ್ಸ್ ಪ್ರೆಸ್ ರೈಲುಗಳ ಸಂಚಾರಕ್ಕೆ ತೊಡಕಾಗಿದ್ದು ಮಂಗಳೂರು ರೈಲು ನಿಲ್ದಾಣಕ್ಕೆ ಬರದೆ ಬೇರೆ ಬೇರೆ ಹಾದಿಗಳಲ್ಲಿ ಅದನ್ನು ಡೈವರ್ಟ್ ಮಾಡಲಾಗಿದೆ.
Video:
Due to Heavy Rain Landslide Happened near Thokur Mangalore Konkan railway Trains Affected.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm