ಬ್ರೇಕಿಂಗ್ ನ್ಯೂಸ್
16-07-21 01:30 pm Mangalore Correspondent ಕರಾವಳಿ
ಮಂಗಳೂರು, ಜುಲೈ 16: ಮಂಗಳೂರು – ಮುಂಬೈ ರೈಲ್ವೇ ಹಳಿಯ ಕುಲಶೇಖರ – ತೋಕೂರು ಮಧ್ಯೆ ಗುಡ್ಡ ಕುಸಿದು ಹಳಿಗೆ ಬಿದ್ದಿದ್ದು, ರೈಲು ಸಂಚಾರಕ್ಕೆ ತೊಡಕಾಗಿದೆ. ಭಾರೀ ಮಳೆಯಿಂದಾಗಿ ಗುಡ್ಡಕ್ಕೆ ಕಟ್ಟಿದ್ದ ತಡೆಗೋಡೆ ಸೇರಿದಂತೆ ಗುಡ್ಡ ಕುಸಿದು ಹಳಿಗೆ ಬಿದ್ದು ಮಣ್ಣು ಮುಚ್ಚಿದೆ.
ಇದರಿಂದಾಗಿ ಮಂಗಳೂರಿನಿಂದ ಕೊಂಕಣ ರೈಲ್ವೇ ಮೂಲಕ ಕಾರವಾರ, ಮುಂಬೈ ಸಾಗುವ ರೈಲುಗಳ ಸಂಚಾರಕ್ಕೆ ತೊಡಕಾಗಿದೆ. ಇಂದು ಬೆಳಗ್ಗೆ ಗುಡ್ಡ ಕುಸಿದ ಘಟನೆ ನಡೆದಿದ್ದು, ಈ ಭಾಗದಲ್ಲಿ ಸಂಚರಿಸುವ ರೈಲುಗಳನ್ನು ತಾತ್ಕಾಲಿಕವಾಗಿ ಮುಂದೂಡಿಕೆ ಮಾಡಲಾಗಿದೆ. ಇದೇ ವೇಳೆ, ರೈಲು ಹಳಿಯಿಂದ ಮಣ್ಣು ತೆರವು ಮಾಡುವ ಕಾರ್ಯ ನಡೆಸಲಾಗುತ್ತಿದೆ.




ರೈಲ್ವೇ ಮೂಲಗಳ ಪ್ರಕಾರ, ಇಂದು ಈ ಹಳಿಯಿಂದ ಸಂಚರಿಸುವ ಒಂಬತ್ತು ರೈಲುಗಳ ಸಂಚಾರಕ್ಕೆ ತೊಂದರೆಯಾಗಿದೆ. ಮಧ್ಯಾಹ್ನ ಮಂಗಳೂರಿನಿಂದ ಮುಂಬೈಗೆ ಹೊರಡಲಿದ್ದ ಮತ್ಸ್ಯಗಂಧ ರೈಲು ನಾಲ್ಕು ಗಂಟೆ ತಡವಾಗಿ ಸಂಚರಿಸಲಿದೆ ಎನ್ನುವ ಮಾಹಿತಿ ನೀಡಲಾಗಿದೆ.
ರೈಲು ಹಳಿಯ ಉದ್ದಕ್ಕೆ ಗುಡ್ಡದ ಬದಿಗೆ ಕಾಂಕ್ರೀಟ್ ತಡೆಗೋಡೆ ಕಟ್ಟಲಾಗಿತ್ತು. ಕಾಂಕ್ರೀಟ್ ಗೋಡೆಯೇ ಕುಸಿದು ಬಿದ್ದಿದ್ದು , ಹಳಿಯ ಬದಿಯಲ್ಲಿ ಮಳೆ ನೀರು ಹರಿಯುತ್ತಿದೆ. ಸಂಜೆ ಹೊತ್ತಿಗೆ ಮಣ್ಣು ತೆರವು ಕಾರ್ಯಾಚರಣೆ ಮುಗಿಯಬಹುದು ಎನ್ನುವ ಮಾಹಿತಿಯನ್ನು ರೈಲ್ವೇ ಅಧಿಕಾರಿಗಳು ನೀಡಿದ್ದಾರೆ. ಕೊಂಕಣ ರೈಲ್ವೇ ಮೂಲಕ ದೆಹಲಿಗೆ ತೆರಳುವ ನಿಜಾಮುದ್ದೀನ್ ಎಕ್ಸ್ ಪ್ರೆಸ್ ಸೇರಿದಂತೆ ಕೇರಳದಿಂದ ಮಂಗಳೂರು- ಮುಂಬೈಗೆ ಸಂಚರಿಸುವ ರೈಲುಗಳನ್ನು ಕಣ್ಣೂರಿನಲ್ಲಿ ಡೈವರ್ಟ್ ಮಾಡಲಾಗಿದ್ದು, ಮೈಸೂರು ಮೂಲಕ ಸಾಗಲಿದೆ.
ಹಜ್ರತ್ ನಿಜಾಮುದ್ದೀನ್ ರಾಜಧಾನಿ ಎಕ್ಸ್ ಪ್ರೆಸ್, ಜಾಮ್ ನಗರ್ ಎಕ್ಸ್ ಪ್ರೆಸ್, ಪುಣೆ ಸೂಪರ್ ಫಾಸ್ಟ್, ಮುಂಬೈ ಸಿಎಸ್ ಟಿ, ಕಾರವಾರ ಯಶವಂತಪುರ ಸ್ಪೆಷಲ್ ಟ್ರೈನ್(ವಿಳಂಬ), ಮಂಗಳಾ ಲಕ್ಷದ್ವೀಪ ಎಕ್ಸ್ ಪ್ರೆಸ್ (ದೆಹಲಿ), ಇಂದೋರ್ ಎಕ್ಸ್ ಪ್ರೆಸ್, ನೇತ್ರಾವತಿ ಮತ್ತು ಪಂಚಗಂಗಾ ಎಕ್ಸ್ ಪ್ರೆಸ್ ರೈಲುಗಳ ಸಂಚಾರಕ್ಕೆ ತೊಡಕಾಗಿದ್ದು ಮಂಗಳೂರು ರೈಲು ನಿಲ್ದಾಣಕ್ಕೆ ಬರದೆ ಬೇರೆ ಬೇರೆ ಹಾದಿಗಳಲ್ಲಿ ಅದನ್ನು ಡೈವರ್ಟ್ ಮಾಡಲಾಗಿದೆ.
Video:
Due to Heavy Rain Landslide Happened near Thokur Mangalore Konkan railway Trains Affected.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm