ಬ್ರೇಕಿಂಗ್ ನ್ಯೂಸ್
17-07-21 10:29 pm Mangaluru Correspondent ಕರಾವಳಿ
ಮಂಗಳೂರು, ಜುಲೈ 17: ಯುವಕನೊಬ್ಬ ಆಟೋ ರಿಕ್ಷಾದಲ್ಲಿ 42 ಕೆಜಿ ಗಾಂಜಾ ಇಟ್ಟು ಮಾರಾಟಕ್ಕೆ ಯತ್ನಿಸುತ್ತಿದ್ದ ಪ್ರಕರಣದಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆರೋಪಿಗೆ 10 ವರ್ಷ ಕಠಿಣ ಸಜೆ ಹಾಗೂ 1 ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದೆ. ಬಂಟ್ವಾಳ ತಾಲೂಕಿನ ಕಾರ್ಯಾಡಿ ಕುಳ ಗ್ರಾಮದ ನಿವಾಸಿ ಅಬ್ದುಲ್ ರಹೀಂ (29) ಶಿಕ್ಷೆಗೊಳಗಾದ ಯುವಕ.
ಮಂಗಳೂರಿನ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ನಾಲ್ಕನೇ ಮೈಲು ರಸ್ತೆಯ ಎ.ಜೆ.ಶೆಟ್ಟಿ ಇಂಜಿನಿಯರಿಂಗ್ ಕಾಲೇಜಿಗೆ ತೆರಳುವ ಜಾಗದಲ್ಲಿ 2018 ಸೆ.8ರಂದು ಮಧ್ಯಾಹ್ನ 1.45 ಸುಮಾರಿಗೆ ಆರೋಪಿಗಳಾದ ಅಬ್ದುಲ್ ರಹೀಂ, ರಾಜೀವ್ ಎ.ಪಿ. ಹಾಗೂ ಕಲಂದರ್ ಶಾಫಿ ಆಟೋ ರಿಕ್ಷಾ ಹಾಗೂ ಬೈಕ್ನಲ್ಲಿ ಅನುಮಾನಾಸ್ಪದವಾಗಿ ನಿಂತಿದ್ದರು. ಈ ವೇಳೆ ಕರ್ತವ್ಯದಲ್ಲಿದ್ದ ಕಾವೂರು ಠಾಣೆಯ ಪೊಲೀಸ್ ನಿರೀಕ್ಷಕ ಕೆ.ಆರ್.ನಾಯ್ಕ್ ಹಾಗೂ ಸಿಬ್ಬಂದಿ ಅನುಮಾನಗೊಂಡು ಪರಿಶೀಲಿಸಿದ್ದು ರಿಕ್ಷಾದಲ್ಲಿ 42.230 ಕೆಜಿಯ 20 ಪ್ಯಾಕೇಟ್ ಗಾಂಜಾ ಪತ್ತೆಯಾಗಿತ್ತು. ತಕ್ಷಣ ಅಬ್ದುಲ್ ರಹೀಂ ಹಾಗೂ ರಾಜೀವ್ ಎ.ಪಿ.ಯನ್ನು ಬಂಧಿಸಿದ ಪೊಲೀಸರು ಗಾಂಜಾ ಸಹಿತ ರಿಕ್ಷಾ ಹಾಗೂ ಬೈಕ್ ಗಳನ್ನು ವಶಕ್ಕೆ ಪಡೆದಿದ್ದರು. ಬೈಕ್ ನಲ್ಲಿದ್ದ ಆರೋಪಿ ಕಲಂದರ್ ಶಾಫಿ ತಪ್ಪಿಸಿಕೊಂಡಿದ್ದ.
ಕಾವೂರು ಪೊಲೀಸ್ ಠಾಣೆಯಲ್ಲಿ ಅಬ್ದುಲ್ ರಹೀಂ, ರಾಜೀವ್ ಎ.ಪಿ., ಕಲಂದರ್ ಶಾಫಿ ಸಹಿತ ಬೈಕ್ ಮಾಲೀಕ ರಫೀಕ್ ಮಂಡ್ಕೂರು ಮೇಲೆ ಪ್ರಕರಣ ದಾಖಲಾಗಿತ್ತು. ಕಾವೂರು ಠಾಣೆಯ ನಿರೀಕ್ಷಕ ರಫೀಕ್ ಕೆ.ಎಂ. ಅವರು ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಪ್ರಧಾನ ಜಿಲ್ಲಾ ಹಾಗೂ ಸತ್ರ ಮತ್ತು ವಿಶೇಷ ನ್ಯಾಯಾಲಯ ವಿಚಾರಣೆ ನಡೆಸಿ ಆರೋಪಿಗಳ ಮೇಲಿನ ಆರೋಪ ಸಾಬೀತಾಗಿದೆ ಎಂದು ಘೋಷಿಸಿದೆ.
ಈ ನಡುವೆ ಆರೋಪಿ ರಾಜೀವ್ ಎ.ಪಿ. ಮೃತಪಟ್ಟಿದ್ದು, ರಫೀಕ್ ಮಂಡ್ಯೂರು ಹಾಗೂ ಕಲಂದರ್ ಶಾಫಿ ತಲೆ ಮರೆಸಿಕೊಂಡಿದ್ದರು. ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ಮತ್ತು ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಮುರಳೀಧರ ಪೈ ಬಿ. ಅವರು ಸೆಕ್ಷನ್ 8C 20(B) (ll) (C) ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಅಬ್ದುಲ್ ರಹೀಂಗೆ 10 ವರ್ಷಗಳ ಕಾಲ ಕಠಿಣ ಸಜೆ, 1 ಲಕ್ಷ ರೂ. ದಂಡ ವಿಧಿಸಿ ಆದೇಶಿಸಿದೆ. ದಂಡ ತೆರಲು ತಪ್ಪಿದ್ದಲ್ಲಿ 1 ವರ್ಷ ಸಾದಾ ಸಜೆ ಅನುಭವಿಸಬೇಕು. ತಲೆಮರೆಸಿಕೊಂಡ ಆರೋಪಿಗಳ ಪ್ರಕರಣ ವಿಭಜಿಸಿ ಮುಂದುವರಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ಸರ್ಕಾರಿ ಅಭಿಯೋಜಕರಾದ ರಾಜು ಪೂಜಾರಿ ಬನ್ನಾಡಿ ಹಾಗೂ ಬಿ.ಶೇಖರ್ ಶೆಟ್ಟಿ ಸರ್ಕಾರದ ಪರವಾಗಿ ವಾದಿಸಿದ್ದಾರೆ.
The Mangalore court has sentenced the accused to 10 years of rigorous imprisonment and 1 lakh fine for selling drugs near private college. for a term not exceeding ten years, and shall also be liable to fine. Punishment—Imprison
12-09-25 03:04 pm
HK News Desk
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 05:34 pm
Mangalore Correspondent
Mangalore Police, Sudheer Reddy: ಶಾಂತಿ ಕಾಪಾಡಲ...
12-09-25 12:58 pm
ಗುಂಡಿ ಬಿದ್ದ ಹೆದ್ದಾರಿ ತಕ್ಷಣ ದುರಸ್ತಿ ; ಸುರತ್ಕಲ್...
12-09-25 11:32 am
ಬಂಗ್ಲೆಗುಡ್ಡೆ ಕಾಡಿನಲ್ಲಿ ರಾಶಿ ರಾಶಿ ಹೆಣಗಳ ಅವಶೇಷ,...
11-09-25 10:42 pm
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
12-09-25 05:31 pm
Udupi Correspondent
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm