ಬ್ರೇಕಿಂಗ್ ನ್ಯೂಸ್
18-07-21 11:25 am Mangaluru Correspondent ಕರಾವಳಿ
ಮಂಗಳೂರು, ಜುಲೈ 18: ಕುಲಶೇಖರ ಬಳಿ ರೈಲ್ವೆ ಹಳಿಗೆ ಕುಸಿದು ಬಿದ್ದ ಮಣ್ಣನ್ನು ಎರಡು ದಿನಗಳ ಕಾರ್ಯಾಚರಣೆ ಬಳಿಕ ತೆರವು ಮಾಡಲಾಗಿದೆ. ಹಳಿಗೆ ಬಿದ್ದಿರುವ ಬಂಡೆ ಕಲ್ಲು, ತಡೆಗೋಡೆಯ ಕಾಂಕ್ರೀಟ್ ಸಾಮಗ್ರಿ, ಮಣ್ಣನ್ನು ತೆರವು ಮಾಡಲಾಗಿದ್ದು ಭಾನುವಾರ ಬೆಳಗ್ಗೆ ರೈಲು ಸಂಚಾರ ಪುನಾರಂಭಗೊಂಡಿದೆ.
ಮಂಗಳೂರಿನಿಂದ ಕಾರವಾರ, ಮುಂಬೈ ಕಡೆಗೆ ತೆರಳುವ ಪ್ರಮುಖ ಹಳಿಯಾಗಿದ್ದರಿಂದ ಹಲವು ರೈಲುಗಳ ಸಂಚಾರಕ್ಕೆ ತೊಡಕಾಗಿತ್ತು. ಎರಡು ದಿನಗಳಿಂದ ಕಾರವಾರ ರೈಲು ಮಂಗಳೂರಿಗೆ ಬರಲು ಸಾಧ್ಯವಾಗಲಿಲ್ಲ. ಅಲ್ಲದೆ, ಮುಂಬೈನಿಂದ ಮಂಗಳೂರು- ಕೇರಳಕ್ಕೆ ಸಾಗುವ ರೈಲುಗಳ ಸಂಚಾರಕ್ಕೂ ತೊಡಕಾಗಿತ್ತು. ಹೀಗಾಗಿ ಮಳೆಯ ನಡುವೆಯೇ ಭರದ ಕಾಮಗಾರಿ ನಡೆಸಲಾಗಿದ್ದು ಇಂದು ಬೆಳಗ್ಗೆ ಕೆಲಸ ಪೂರ್ಣಗೊಂಡಿದೆ. ಅದರಂತೆ ಇಂದು ಬೆಳಗ್ಗೆ 8.45ರ ಹೊತ್ತಿಗೆ ಮೊದಲ ರೈಲು ಸಾಗಿದ್ದು ಎರ್ನಾಕುಲಂ - ಅಜ್ಮೀರ್ ರೈಲು ಹಳಿಯಿಂದ ಸಂಚರಿಸಿದೆ. ಮಣ್ಣು ಕುಸಿತಗೊಂಡ ಕುಲಶೇಖರ ಪ್ರದೇಶದಲ್ಲಿ ರೈಲು ತೆರಳುವ ವೇಳೆ ರೈಲ್ವೆ ಇಲಾಖೆ ಸಿಬ್ಬಂದಿ, ಅಧಿಕಾರಿಗಳು ಉಪಸ್ಥಿತರಿದ್ದು, ವೀಕ್ಷಣೆ ಮಾಡಿದರು.

ರೈಲು ಸಂಚಾರವನ್ನು ಭಾನುವಾರದಿಂದ ಆರಂಭಿಸಲೇಬೇಕು ಎನ್ನುವ ಉದ್ದೇಶದಿಂದ ಕಾರ್ಯಾಚರಣೆ ಶನಿವಾರ ತಡರಾತ್ರಿಯ ವರೆಗೂ ನಡೆದಿತ್ತು. ತಡೆಗೋಡೆ ಕುಸಿತ ಪ್ರದೇಶದಿಂದ ಮಣ್ಣು, ಬೃಹತ್ ಗಾತ್ರದ ಕಲ್ಲುಗಳನ್ನು ಹಿಟಾಚಿ ಬಳಸಿ ತೆಗೆಯಲಾಯಿತು. ರೈಲ್ವೆ ಹಳಿಗೆ ವಾಲಿದ ತಡೆಗೋಡೆಯನ್ನು ಯಂತ್ರ ಬಳಸಿ ಕಟ್ಟಿಂಗ್ ಮಾಡಲಾಗಿದೆ. ಮೇಲ್ಬಾಗದಲ್ಲಿರುವ ಮಣ್ಣು, ಕಲ್ಲುಗಳು ಮತ್ತೆ ಕುಸಿತವಾಗದಂತೆ ತೆರವು ಮಾಡಲಾಗಿದೆ.
ಎರಡು ದಿನಗಳ ಹಿಂದೆ, ಕುಲಶೇಖರ ಬಳಿಯ ಸುರಂಗದಿಂದ ಸ್ವಲ್ಪ ದೂರಕ್ಕೆ ಭಾರೀ ಮಳೆಗೆ ಗುಡ್ಡ ಕುಸಿದು ಹಳಿಗೆ ಬಿದ್ದಿತ್ತು. ಇದರಿಂದಾಗಿ ಮಂಗಳೂರಿನಿಂದ ಕೊಂಕಣ ರೈಲ್ವೇ ಹಾದಿಯಲ್ಲಿ ಸಂಚಾರ ಸ್ಥಗಿತ ಮಾಡಲಾಗಿತ್ತು.
Read: ಕೊಂಕಣ ರೈಲ್ವೇಯ ತೋಕೂರು ಬಳಿ ರೈಲು ಹಳಿಗೆ ಗುಡ್ಡ ಕುಸಿತ ; 9 ರೈಲುಗಳ ಸಂಚಾರಕ್ಕೆ ತೊಡಕು
The work on removal of mud and debris, that had fallen on the railway track between Padil and Kulshekhar due to the landslide and collapse of retainer wall, was almost completed on Saturday, July 17. The trains are likely to resume on this stretch after track inspection and electric line restoration on Sunday, July 18.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm