ಬ್ರೇಕಿಂಗ್ ನ್ಯೂಸ್
18-07-21 07:41 pm Mangaluru Correspondent ಕರಾವಳಿ
ಮಂಗಳೂರು, ಜುಲೈ 18: ಕಂಬಳ ಪ್ರಸಿದ್ಧಿಗೆ ಬರುತ್ತಿದ್ದಂತೆ ಏಕರೂಪ ನಿಯಮಗಳನ್ನು ಜಾರಿಗೆ ತರಲು ಮತ್ತು ಕಂಬಳ ವಿಳಂಬವಾಗಿ ಮುಗಿಯುವುದನ್ನು ತಪ್ಪಿಸಲು ಕೆಲವೊಂದು ಹೊಸ ನಿಯಮಗಳನ್ನು ಜಾರಿಗೆ ತರಲು ಕಂಬಳ ಶಿಸ್ತು ಪಾಲನಾ ಸಮಿತಿ ನಿರ್ಧರಿಸಿದೆ.
ಹೊಸ ಪ್ರತಿಭೆಗಳಿಗೆ ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಒಬ್ಬ ಓಟಗಾರನಿಗೆ ಒಂದು ಕಂಬಳದಲ್ಲಿ ಮೂರು ಜೊತೆ ಕೋಣಗಳನ್ನು ಓಡಿಸಲು ಮಾತ್ರ ಅವಕಾಶ ನೀಡಲಾಗಿದೆ. ಆದರೆ ಒಂದೇ ತಂಡದ ಎರಡು ಜೊತೆಯ ಕೋಣಗಳಿದ್ದರೆ ಮಾತ್ರ 4 ಜೊತೆ ಕೋಣಗಳನ್ನು ಓಡಿಸಬಹುದಾಗಿದೆ. ಇದರಿಂದ ಹೊಸ ಓಟಗಾರರಿಗೆ ಅವಕಾಶ ನೀಡುವುದರ ಜೊತೆಗೆ ವಿಳಂಬವಾಗುವುದನ್ನು ತಪ್ಪಿಸಬಹುದು ಎನ್ನುವ ತೀರ್ಮಾನ ಸಮಿತಿಯದ್ದು.
ಇನ್ನು ಕಂಬಳವನ್ನು 24 ಗಂಟೆಯೊಳಗೆ ಮುಗಿಸಲು ಕಂಬಳ ಶಿಸ್ತು ಪಾಲನಾ ಸಮಿತಿ ನಿರ್ಧಾರ ಮಾಡಿದೆ. ಬೆಳಗ್ಗೆ 9 ಗಂಟೆಗೆ ಕಂಬಳ ಆರಂಭಿಸಿ ಮರುದಿನ ಬೆಳಗ್ಗೆ 9 ಗಂಟೆಗೆ ಕಂಬಳವನ್ನು ಮುಗಿಸಬೇಕೆಂದು ತೀರ್ಮಾನ ಮಾಡಲಾಗಿದೆ. ಅಲ್ಲದೆ, ಕಂಬಳ ಸ್ಪರ್ಧೆಯ ವಿಳಂಬವನ್ನು ತಪ್ಪಿಸಲು ಕಂಬಳ ಕೋಣಗಳನ್ನು 5 ನಿಮಿಷದ ಒಳಗೆ ಕಂಬಳದ ಗದ್ದೆಗೆ ತರಬೇಕೆಂಬ ನಿಯಮ ಮಾಡಲಾಗಿದೆ. ತಡವಾದರೆ ಆ ತಂಡವನ್ನು ಕೈಬಿಟ್ಟು ವಾಕ್ ಓವರ್ ಅಂತಾ ಘೋಷಣೆ ಮಾಡಲು ನಿರ್ಧಾರ ಮಾಡಲಾಗಿದೆ.
ಕಂಬಳದ ತೀರ್ಪುಗಾರರು ಮದ್ಯಪಾನ ಮಾಡಿ ಬರುವಂತಿಲ್ಲ ಎಂದು ನಿರ್ಣಯಿಸಲಾಗಿದೆ. ಕಂಬಳದ ಬಗ್ಗೆ ಯಾವುದೇ ದೂರುಗಳಿದ್ದರೂ, ಜಿಲ್ಲಾ ಕಂಬಳ ಸಮಿತಿಯ ಗಮನಕ್ಕೆ ತರಬೇಕು.
ಯಾವುದಾದರೂ ತಂಡದ ತಪ್ಪು ಸಾಬೀತಾದರೆ ಒಂದು ವರ್ಷ ಕಾಲ ಆ ತಂಡವನ್ನು ಕಂಬಳದಿಂದ ಅಮಾನತು ಮಾಡುವ ಕಠಿಣ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಕಂಬಳ ಓಟಗಾರರು ಮತ್ತು ಕೋಣಗಳ ಯಜಮಾನರು ಕಂಬಳ ಸಮಿತಿಯ ಸದಸ್ಯತ್ವ ಪಡೆಯಬೇಕೆಂಬ ನಿರ್ಧಾರವನ್ನೂ ಮಾಡಲಾಗಿದೆ.
New Kambala Board has implemented new rules playing Karavali Kambala in coastal Karnataka.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm