ಬ್ರೇಕಿಂಗ್ ನ್ಯೂಸ್
18-07-21 07:41 pm Mangaluru Correspondent ಕರಾವಳಿ
ಮಂಗಳೂರು, ಜುಲೈ 18: ಕಂಬಳ ಪ್ರಸಿದ್ಧಿಗೆ ಬರುತ್ತಿದ್ದಂತೆ ಏಕರೂಪ ನಿಯಮಗಳನ್ನು ಜಾರಿಗೆ ತರಲು ಮತ್ತು ಕಂಬಳ ವಿಳಂಬವಾಗಿ ಮುಗಿಯುವುದನ್ನು ತಪ್ಪಿಸಲು ಕೆಲವೊಂದು ಹೊಸ ನಿಯಮಗಳನ್ನು ಜಾರಿಗೆ ತರಲು ಕಂಬಳ ಶಿಸ್ತು ಪಾಲನಾ ಸಮಿತಿ ನಿರ್ಧರಿಸಿದೆ.
ಹೊಸ ಪ್ರತಿಭೆಗಳಿಗೆ ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಒಬ್ಬ ಓಟಗಾರನಿಗೆ ಒಂದು ಕಂಬಳದಲ್ಲಿ ಮೂರು ಜೊತೆ ಕೋಣಗಳನ್ನು ಓಡಿಸಲು ಮಾತ್ರ ಅವಕಾಶ ನೀಡಲಾಗಿದೆ. ಆದರೆ ಒಂದೇ ತಂಡದ ಎರಡು ಜೊತೆಯ ಕೋಣಗಳಿದ್ದರೆ ಮಾತ್ರ 4 ಜೊತೆ ಕೋಣಗಳನ್ನು ಓಡಿಸಬಹುದಾಗಿದೆ. ಇದರಿಂದ ಹೊಸ ಓಟಗಾರರಿಗೆ ಅವಕಾಶ ನೀಡುವುದರ ಜೊತೆಗೆ ವಿಳಂಬವಾಗುವುದನ್ನು ತಪ್ಪಿಸಬಹುದು ಎನ್ನುವ ತೀರ್ಮಾನ ಸಮಿತಿಯದ್ದು.
ಇನ್ನು ಕಂಬಳವನ್ನು 24 ಗಂಟೆಯೊಳಗೆ ಮುಗಿಸಲು ಕಂಬಳ ಶಿಸ್ತು ಪಾಲನಾ ಸಮಿತಿ ನಿರ್ಧಾರ ಮಾಡಿದೆ. ಬೆಳಗ್ಗೆ 9 ಗಂಟೆಗೆ ಕಂಬಳ ಆರಂಭಿಸಿ ಮರುದಿನ ಬೆಳಗ್ಗೆ 9 ಗಂಟೆಗೆ ಕಂಬಳವನ್ನು ಮುಗಿಸಬೇಕೆಂದು ತೀರ್ಮಾನ ಮಾಡಲಾಗಿದೆ. ಅಲ್ಲದೆ, ಕಂಬಳ ಸ್ಪರ್ಧೆಯ ವಿಳಂಬವನ್ನು ತಪ್ಪಿಸಲು ಕಂಬಳ ಕೋಣಗಳನ್ನು 5 ನಿಮಿಷದ ಒಳಗೆ ಕಂಬಳದ ಗದ್ದೆಗೆ ತರಬೇಕೆಂಬ ನಿಯಮ ಮಾಡಲಾಗಿದೆ. ತಡವಾದರೆ ಆ ತಂಡವನ್ನು ಕೈಬಿಟ್ಟು ವಾಕ್ ಓವರ್ ಅಂತಾ ಘೋಷಣೆ ಮಾಡಲು ನಿರ್ಧಾರ ಮಾಡಲಾಗಿದೆ.
ಕಂಬಳದ ತೀರ್ಪುಗಾರರು ಮದ್ಯಪಾನ ಮಾಡಿ ಬರುವಂತಿಲ್ಲ ಎಂದು ನಿರ್ಣಯಿಸಲಾಗಿದೆ. ಕಂಬಳದ ಬಗ್ಗೆ ಯಾವುದೇ ದೂರುಗಳಿದ್ದರೂ, ಜಿಲ್ಲಾ ಕಂಬಳ ಸಮಿತಿಯ ಗಮನಕ್ಕೆ ತರಬೇಕು.
ಯಾವುದಾದರೂ ತಂಡದ ತಪ್ಪು ಸಾಬೀತಾದರೆ ಒಂದು ವರ್ಷ ಕಾಲ ಆ ತಂಡವನ್ನು ಕಂಬಳದಿಂದ ಅಮಾನತು ಮಾಡುವ ಕಠಿಣ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಕಂಬಳ ಓಟಗಾರರು ಮತ್ತು ಕೋಣಗಳ ಯಜಮಾನರು ಕಂಬಳ ಸಮಿತಿಯ ಸದಸ್ಯತ್ವ ಪಡೆಯಬೇಕೆಂಬ ನಿರ್ಧಾರವನ್ನೂ ಮಾಡಲಾಗಿದೆ.
New Kambala Board has implemented new rules playing Karavali Kambala in coastal Karnataka.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm