ಬ್ರೇಕಿಂಗ್ ನ್ಯೂಸ್
19-07-21 11:06 pm Mangaluru Correspondent ಕರಾವಳಿ
ಉಳ್ಳಾಲ, ಜು.19: ಕಾಂಗ್ರೆಸ್ ಆಡಳಿತದಲ್ಲಿ ಕಾಶ್ಮೀರದಿಂದ ಹಿಡಿದು ಉಳ್ಳಾಲದ ವರೆಗೂ ಭಯೋತ್ಪಾದನೆ ಹಬ್ಬಿತ್ತು. ಕಾಂಗ್ರೆಸ್ ಅಧಿಕಾರದಲ್ಲಿದ್ರೂ ಇಲ್ಲದಿದ್ದರೂ ಅದು ದೇಶಕ್ಕೆ ಅಪಾಯಕಾರಿ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಸಿಂಹ ನಾಯಕ್ ಕುಹಕವಾಡಿದ್ದಾರೆ.
ಅಂಬಿಕಾ ರೋಡಿನ ಗಟ್ಟಿ ಸಮಾಜ ಭವನದಲ್ಲಿ ಇಂದು ನಡೆದ ಭಾರತೀಯ ಜನತಾ ಪಾರ್ಟಿಯ ಮಂಗಳೂರು ಮಂಡಲ ವಿಶೇಷ ಕಾರ್ಯಕಾರಿಣಿ ಸಭೆಯನ್ನು ಅವರು ಉದ್ಘಾಟಿಸಿ ಮಾತನಾಡಿದರು.


ಕಾಂಗ್ರೆಸ್ ಪಕ್ಷ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗ ಕಾಶ್ಮೀರದಿಂದ ಉಳ್ಳಾಲದ ವರೆಗೂ ಭಯೋತ್ಪಾದನೆ ಹಬ್ಬಿತ್ತು. ಕಳೆದ ಏಳು ವರುಷದಲ್ಲಿ ಕೇಂದ್ರದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ನಂತರ ಭಯೋತ್ಪಾದನೆಯನ್ನು ನಿಗ್ರಹಿಸಲಾಗಿದೆ. ಅಲ್ಲದೆ ವೈರಿಗಳ ನೆಲಕ್ಕೆ ನುಗ್ಗಿ ಹೊಡೆಯಲು ಸೈನಿಕರಿಗೆ ತಾಕತ್ತು ಬಂದಿದೆ. ಕಾಂಗ್ರೆಸ್ ಮಾತ್ರ ಎಲ್ಲದಕ್ಕೂ ಸಾಕ್ಷಿ ಕೇಳಿ ಭಾರತೀಯ ಸೈನಿಕರ ಆತ್ಮ ಸ್ಥೈರ್ಯವನ್ನು ಪ್ರಶ್ನಿಸೋ ಕಾರ್ಯ ನಡೆಸಿದೆ. ಕೋವಿಡ್ ಲಸಿಕೆಯ ಕುರಿತೇ ಕಾಂಗ್ರೆಸ್ ಗೊಂದಲ ಅಪಪ್ರಚಾರ ಮೂಡಿಸಿ ಲಸಿಕೆ ತಗೊಂಡರೆ ಮಕ್ಕಳೇ ಆಗಲ್ಲ ಎಂದಿತ್ತು. ಇದೀಗ ಅಂತಹ ಗೊಂದಲ ಸೃಷ್ಟಿಸಿದವರೇ ತಮ್ಮ ಮನೆಗೆ ಲಸಿಕೆ ತರಿಸಿ ಹಾಕುತ್ತಿದ್ದು ಅದಕ್ಕೆ ಉಳ್ಳಾಲದವರೂ ಹೊರತಾಗಿಲ್ಲ ಎಂದರು.
ಸತತ ಸೋಲಿನಿಂದ ಕಾಂಗ್ರೆಸ್ ನೀರಿನಿಂದ ಹೊರಬಿದ್ದ ಮೀನಿನಂತಾಗಿರುವುದು ಸ್ಪಷ್ಟ. ಎಷ್ಟೋ ರಾಜ್ಯಗಳಲ್ಲಿ ತನ್ನ ಅಸ್ತಿತ್ವವನ್ನೇ ಕಳಕೊಂಡು ಹತಾಶರಾದ ಕಾಂಗ್ರೆಸಿಗರು ಬಿಜೆಪಿ ವಿರುದ್ದ ಇಲ್ಲ ಸಲ್ಲದ ಮಿಥ್ಯಾರೋಪಗಳನ್ನು ಮಾಡುವುದರಲ್ಲೇ ತಲ್ಲೀಣರಾಗಿದ್ದಾರೆಂದರು.
ಮುಂಬರುವ ತಾ.ಪಂ, ಜಿಲ್ಲಾ ಪಂ, ವಿಧಾನ ಪರಿಷತ್ ಚುನಾವಣೆಗೆ ಕಾರ್ಯಕರ್ತರು ಸನ್ನದ್ಧರಾಗಿ ಎಂದು ಕರೆ ನೀಡಿದರು. ಸಭೆಯಲ್ಲಿ ಅಗಲಿದ ಬಿಜೆಪಿ ಕಾರ್ಯಕರ್ತರಿಗೆ ಸಾಮೂಹಿಕ ಶ್ರದ್ಧಾಂಜಲಿ ಅರ್ಪಿಸಲಾಯಿತು.
ಅಂತರ್ಜಲ ವೃದ್ಧಿಗಾಗಿ ಸಾಮೂಹಿಕ ಸಂಕಲ್ಪವನ್ನೂ ತೊಡಲಾಯಿತು. ಬಿಜೆಪಿ ಜಿಲ್ಲಾ ಸಹಪ್ರಭಾರಿ ರಾಜೇಶ್ ಕಾವೇರಿ, ಜಿಲ್ಲಾ ಉಪಾಧ್ಯಕ್ಷರುಗಳಾದ ಈಶ್ವರ್ ಕಟೀಲು,ಕಸ್ತೂರಿ ಪಂಜ, ಕ್ಷೇತ್ರಾಧ್ಯಕ್ಷ ಚಂದ್ರಹಾಸ್ ಪಂಡಿತ್ ಹೌಸ್ ಮೊದಲಾದವರು ಇದ್ದರು.
Congress Party is dangerous even if it excis or not slams BJP Prathap Simha Nayak in ullal
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 09:50 am
HK News Staffer
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
08-09-26 11:17 am
HK News Staffer
ಆಸ್ಪತ್ರೆ ಸಿಬ್ಬಂದಿಗೆ ಪ್ರಜ್ಞೆ ತಪ್ಪಿಸಿ ಲೈಂಗಿಕ ದೌ...
07-09-26 08:56 pm
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm