ಬ್ರೇಕಿಂಗ್ ನ್ಯೂಸ್
19-07-21 11:06 pm Mangaluru Correspondent ಕರಾವಳಿ
ಉಳ್ಳಾಲ, ಜು.19: ಕಾಂಗ್ರೆಸ್ ಆಡಳಿತದಲ್ಲಿ ಕಾಶ್ಮೀರದಿಂದ ಹಿಡಿದು ಉಳ್ಳಾಲದ ವರೆಗೂ ಭಯೋತ್ಪಾದನೆ ಹಬ್ಬಿತ್ತು. ಕಾಂಗ್ರೆಸ್ ಅಧಿಕಾರದಲ್ಲಿದ್ರೂ ಇಲ್ಲದಿದ್ದರೂ ಅದು ದೇಶಕ್ಕೆ ಅಪಾಯಕಾರಿ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಸಿಂಹ ನಾಯಕ್ ಕುಹಕವಾಡಿದ್ದಾರೆ.
ಅಂಬಿಕಾ ರೋಡಿನ ಗಟ್ಟಿ ಸಮಾಜ ಭವನದಲ್ಲಿ ಇಂದು ನಡೆದ ಭಾರತೀಯ ಜನತಾ ಪಾರ್ಟಿಯ ಮಂಗಳೂರು ಮಂಡಲ ವಿಶೇಷ ಕಾರ್ಯಕಾರಿಣಿ ಸಭೆಯನ್ನು ಅವರು ಉದ್ಘಾಟಿಸಿ ಮಾತನಾಡಿದರು.


ಕಾಂಗ್ರೆಸ್ ಪಕ್ಷ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗ ಕಾಶ್ಮೀರದಿಂದ ಉಳ್ಳಾಲದ ವರೆಗೂ ಭಯೋತ್ಪಾದನೆ ಹಬ್ಬಿತ್ತು. ಕಳೆದ ಏಳು ವರುಷದಲ್ಲಿ ಕೇಂದ್ರದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ನಂತರ ಭಯೋತ್ಪಾದನೆಯನ್ನು ನಿಗ್ರಹಿಸಲಾಗಿದೆ. ಅಲ್ಲದೆ ವೈರಿಗಳ ನೆಲಕ್ಕೆ ನುಗ್ಗಿ ಹೊಡೆಯಲು ಸೈನಿಕರಿಗೆ ತಾಕತ್ತು ಬಂದಿದೆ. ಕಾಂಗ್ರೆಸ್ ಮಾತ್ರ ಎಲ್ಲದಕ್ಕೂ ಸಾಕ್ಷಿ ಕೇಳಿ ಭಾರತೀಯ ಸೈನಿಕರ ಆತ್ಮ ಸ್ಥೈರ್ಯವನ್ನು ಪ್ರಶ್ನಿಸೋ ಕಾರ್ಯ ನಡೆಸಿದೆ. ಕೋವಿಡ್ ಲಸಿಕೆಯ ಕುರಿತೇ ಕಾಂಗ್ರೆಸ್ ಗೊಂದಲ ಅಪಪ್ರಚಾರ ಮೂಡಿಸಿ ಲಸಿಕೆ ತಗೊಂಡರೆ ಮಕ್ಕಳೇ ಆಗಲ್ಲ ಎಂದಿತ್ತು. ಇದೀಗ ಅಂತಹ ಗೊಂದಲ ಸೃಷ್ಟಿಸಿದವರೇ ತಮ್ಮ ಮನೆಗೆ ಲಸಿಕೆ ತರಿಸಿ ಹಾಕುತ್ತಿದ್ದು ಅದಕ್ಕೆ ಉಳ್ಳಾಲದವರೂ ಹೊರತಾಗಿಲ್ಲ ಎಂದರು.
ಸತತ ಸೋಲಿನಿಂದ ಕಾಂಗ್ರೆಸ್ ನೀರಿನಿಂದ ಹೊರಬಿದ್ದ ಮೀನಿನಂತಾಗಿರುವುದು ಸ್ಪಷ್ಟ. ಎಷ್ಟೋ ರಾಜ್ಯಗಳಲ್ಲಿ ತನ್ನ ಅಸ್ತಿತ್ವವನ್ನೇ ಕಳಕೊಂಡು ಹತಾಶರಾದ ಕಾಂಗ್ರೆಸಿಗರು ಬಿಜೆಪಿ ವಿರುದ್ದ ಇಲ್ಲ ಸಲ್ಲದ ಮಿಥ್ಯಾರೋಪಗಳನ್ನು ಮಾಡುವುದರಲ್ಲೇ ತಲ್ಲೀಣರಾಗಿದ್ದಾರೆಂದರು.
ಮುಂಬರುವ ತಾ.ಪಂ, ಜಿಲ್ಲಾ ಪಂ, ವಿಧಾನ ಪರಿಷತ್ ಚುನಾವಣೆಗೆ ಕಾರ್ಯಕರ್ತರು ಸನ್ನದ್ಧರಾಗಿ ಎಂದು ಕರೆ ನೀಡಿದರು. ಸಭೆಯಲ್ಲಿ ಅಗಲಿದ ಬಿಜೆಪಿ ಕಾರ್ಯಕರ್ತರಿಗೆ ಸಾಮೂಹಿಕ ಶ್ರದ್ಧಾಂಜಲಿ ಅರ್ಪಿಸಲಾಯಿತು.
ಅಂತರ್ಜಲ ವೃದ್ಧಿಗಾಗಿ ಸಾಮೂಹಿಕ ಸಂಕಲ್ಪವನ್ನೂ ತೊಡಲಾಯಿತು. ಬಿಜೆಪಿ ಜಿಲ್ಲಾ ಸಹಪ್ರಭಾರಿ ರಾಜೇಶ್ ಕಾವೇರಿ, ಜಿಲ್ಲಾ ಉಪಾಧ್ಯಕ್ಷರುಗಳಾದ ಈಶ್ವರ್ ಕಟೀಲು,ಕಸ್ತೂರಿ ಪಂಜ, ಕ್ಷೇತ್ರಾಧ್ಯಕ್ಷ ಚಂದ್ರಹಾಸ್ ಪಂಡಿತ್ ಹೌಸ್ ಮೊದಲಾದವರು ಇದ್ದರು.
Congress Party is dangerous even if it excis or not slams BJP Prathap Simha Nayak in ullal
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm