ಬ್ರೇಕಿಂಗ್ ನ್ಯೂಸ್
19-07-21 11:22 pm Mangaluru Correspondent ಕರಾವಳಿ
ಉಳ್ಳಾಲ, ಜು.18: ದೈವಾರಾಧನೆಗೆ ಅಗತ್ಯವುಳ್ಳ ಹೂವುಗಳಲ್ಲಿ ಅತ್ಯಂತ ಪ್ರಮುಖ ಸ್ಥಾನ ಹೊಂದಿರುವ ನಾಟಿ ಕೇಪುಳ ಅಳಿವಿನಂಚಿನಲ್ಲಿದೆ. ಕೇಪುಳ ಹೂವಿನ ವೃದ್ಧಿಗಾಗಿ ತೊಕ್ಕೊಟ್ಟಿನ ಸಾಯಿ ಪರಿವಾರ್ ಟ್ರಸ್ಟ್ ನಿಂದ ಉಳ್ಳಾಲದಲ್ಲಿ ಕೇಪುಳ ಹೂವಿನ ತೋಟ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ.
ಉಳ್ಳಾಲ ಬಂಡಿಕೊಟ್ಯದ ಮಲರಾಯ ದೈವಸ್ಥಾನದಲ್ಲಿ ತೊಕ್ಕೊಟ್ಟು ಸಾಯಿ ಪರಿವಾರ್ ಟ್ರಸ್ಟ್ ನಿಂದ ಕೇಪುಳ ತೋಟದ ನಿರ್ಮಾಣ ಯೋಜನೆಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ದಯಾನಂದ ಜಿ.ಕತ್ತಲ್ ಸಾರ್ ಚಾಲನೆ ನೀಡಿದರು.


ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು ತುಳುನಾಡಿನ ದೈವಗಳಿಗೆ ನಾಟಿ ಕೇಪುಳ, ತೋಡಿನ ನೀರು, ತೋಟದ ಹಾಲೆ ಅತಿ ಪ್ರಾಮುಖ್ಯ. ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿರುವ ತುಳುನಾಡಿನ ದೈವಾರಾಧನೆಯಲ್ಲಿ ಕೇಪುಳ ಮೇಲ್ಪಂಕ್ತಿ ಹೊಂದಿದೆ. ಕೇಪುಳ ಹೂವುಗಳ ಅಭಾವದಲ್ಲಿ ದೈವಾರಾಧನೆ ಕೈಂಕರ್ಯಗಳು ಅಸಾಧ್ಯ. ಈಗಿನ ಕಾಂಕ್ರೀಟ್ ಜಗತ್ತಿನಿಂದಾಗಿ ನಾಟಿ ಕೇಪುಳ ಹೂವಿನ ಗಿಡಗಳು ಅಳಿವಿನ ಅಂಚಿಗೆ ಸಾಗುತ್ತಿರುವ ಸಂದರ್ಭದಲ್ಲಿ ಅಂತಹ ಪಾವಿತ್ರ್ಯದ ಗಿಡಗಳನ್ನು ದೈವಸ್ಥಾನಗಳಲ್ಲಿ ನೆಡುವ ಮೂಲಕ ದೈವೀ ಕಾರ್ಯವನ್ನು ಸಾಯಿ ಪರಿವಾರ್ ಟ್ರಸ್ಟ್ ಮಾಡಿದೆ ಎಂದರು.
ಸಾಯಿ ಪರಿವಾರ್ ಟ್ರಸ್ಟ್ ನ ಮಾರ್ಗದರ್ಶಕ, ಚಂದ್ರಹಾಸ್ ಪಂಡಿತ್ ಹೌಸ್ ಶುಭ ಹಾರೈಸಿದರು. ಪರಿಸರವಾದಿ ಮಾಧವ ಉಳ್ಳಾಲ್, ಓವರ್ ಬ್ರಿಡ್ಜ್ ಕೊರಗಜ್ಜ ಸೇವಾ ಸಮಿತಿಯ ಸ್ಥಾಪಕರಾದ ರಾಜೇಶ್ ಕಾಪಿಕಾಡ್, ಬಂಡಿಕೊಟ್ಯ ಮಲರಾಯ ದೈವಸ್ಥಾನದ ಪ್ರಮುಖರಾದ ಲತೀಶ್ ಪೂಜಾರಿ, ಮುಖಂಡರಾದ ದಯಾನಂದ ತೊಕ್ಕೊಟ್ಟು, ಗೋಪಾಲ ಯು.ಕೆ, ಉಳ್ಳಾಲ, ದೇವಕಿ ಆರ್. ಉಳ್ಳಾಲ, ಉದಯ ಆರ್.ಕೆ, ಗಣೇಶ್ ಪೂಜಾರಿ, ಹರ್ಷರಾಜ್ ಕುಂಪಲ, ಹರ್ಷವರ್ಧನ, ಮೋಹಿತ್ ಉಳ್ಳಾಲ, ಸುನಿತ್ ಬಂಡಿಕೊಟ್ಯ, ಸಾಗರ್ ಬಂಡಿಕೊಟ್ಯ, ಪ್ರಶಾಂತ್ ಸುವರ್ಣ, ಉಳ್ಳಾಲ ಕೊರಗಜ್ಜ ಸೇವಾ ಸಮಿತಿಯ ಲತೀಶ್ ಕೊಟ್ಟಾರ, ಶಾನ್ ಉಳ್ಳಾಲ, ಸಾಯಿ ಪರಿವಾರ್ ಟ್ರಸ್ಟಿನ ಪ್ರವೀಣ್ ಎಸ್ ಕುಂಪಲ, ಪುರುಷೋತ್ತಮ ಕಲ್ಲಾಪು, ಗಣೇಶ್ ಅಂಚನ್, ಗಣೇಶ್ ಪಂಡಿತ್ ಮುಳಿಹಿತ್ಲು, ದೀಕ್ಷಿತ್ ಪೂಜಾರಿ, ಸಂಪತ್ ಧರ್ಮನಗರ, ಸೂರ್ಯ ಕುಂಪಲ, ಸಂಪತ್ ಪಿಲಾರ್, ಕೌಶಿಕ್ ಸೇವಂತಿಗುಡ್ಡೆ, ಶೈಲೇಶ್ ಸೇವಂತಿಗುಡ್ಡೆ, ಶವಿತ್ ಉಚ್ಚಿಲ್, ಸಂತೋಷ್ ಅಂಬ್ಲಮೊಗರು, ಕುಶಾಲ್ ರಾಜ್ ಮೊದಲಾದವರು ಉಪಸ್ಥಿತರಿದ್ದರು.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm