ಬ್ರೇಕಿಂಗ್ ನ್ಯೂಸ್
21-07-21 11:02 pm Mangaluru Correspondent ಕರಾವಳಿ
ಬೆಂಗಳೂರು, ಜುಲೈ 21: ಇತ್ತೀಚೆಗೆ ಅಕ್ರಮವಾಗಿ ಒಳನುಗ್ಗಿ ಮಂಗಳೂರಿನಲ್ಲಿ ಪೊಲೀಸರಿಗೆ ಸೆರೆಸಿಕ್ಕಿದ್ದ ಲಂಕನ್ನರ ಕೇಸನ್ನು ರಾಷ್ಟ್ರೀಯ ತನಿಖಾ ದಳ ತನಿಖೆಗೆ ಮುಂದಾಗಿದೆ. 40ಕ್ಕೂ ಹೆಚ್ಚು ಲಂಕನ್ನರು ಅಕ್ರಮ ಪ್ರವೇಶ ಮಾಡಿದ್ದು ಮೂರು ತಿಂಗಳ ಕಾಲ ತಮಿಳುನಾಡು, ಬೆಂಗಳೂರು, ಮಂಗಳೂರಿನಲ್ಲಿ ನೆಲಸಿದ್ದು ಆಂತರಿಕ ಭದ್ರತೆಗೆ ಸವಾಲಾದ ಪ್ರಕರಣವಾಗಿತ್ತು.
ಮಂಗಳೂರಿನಿಂದ ಕೆನಡಾಕ್ಕೆ ಮಾನವ ಕಳ್ಳಸಾಗಣೆ ಆಗುತ್ತಿರುವ ಬಗ್ಗೆ ಶಂಕೆ ವ್ಯಕ್ತವಾಗಿತ್ತು. ಯಾವುದೋ ಬೋಟ್ ಹಿಡಿದು ಸದ್ದಿಲ್ಲದೆ ಮಂಗಳೂರಿನಿಂದ ಪರಾರಿಯಾಗಲು ಪ್ಲಾನ್ ಹಾಕಿದ್ದಾಗಲೇ ಗುಟ್ಟು ರಟ್ಟಾಗಿ ಪೊಲೀಸರ ಬಲೆಗೆ ಬಿದ್ದಿದ್ದರು. ಇದೀಗ ಈ ಪ್ರಕದಣವನ್ನು ಗಂಭೀರವಾಗಿ ಪರಿಗಣಿಸಿದ ಕೇಂದ್ರ ಗೃಹ ಇಲಾಖೆ ಎನ್ಐಎ ತನಿಖೆಗೆ ವಹಿಸಿದೆ.
ಬೆಂಗ್ಲೂರು ಬಾಂಗ್ಲಾನ್ನರ ಅಕ್ರಮ ನೆಲೆಯೂ ಎನ್ಐಎ ತೆಕ್ಕೆಗೆ
ಬೆಂಗಳೂರಿನಲ್ಲಿ ಇತ್ತೀಚೆಗೆ ಬೆಳಕಿಗೆ ಬಂದಿದ್ದ ಬಾಂಗ್ಲಾದೇಶ ಮೂಲದ ಯುವತಿಯ ಸಾಮೂಹಿಕ ರೇಪ್ ಮತ್ತು ಬಾಂಗ್ಲಾನ್ನರ ಅಕ್ರಮ ಪ್ರವೇಶದ ಪ್ರಕರಣವನ್ನೂ ಎನ್ಐಎ ತನಿಖೆಗೆ ವಹಿಸಲಾಗಿದೆ. ಈ ಬಗ್ಗೆ ತನಿಖೆ ಆರಂಭಿಸಿರುವ ಅಧಿಕಾರಿಗಳು ಪ್ರತ್ಯೇಕ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಪ್ರಕರಣದ ಆರೋಪಿಗಳನ್ನು ಕೋರ್ಟ್ ನಲ್ಲಿ ಬಾಡಿ ವಾರೆಂಟ್ ಪಡೆದು ಶೀಘ್ರದಲ್ಲೇ ಎನ್ಐಎ ವಶಕ್ಕೆ ಪಡೆಯಲಿದ್ದಾರೆ.
ಮೇ 27ರಂದು ಬೆಂಗಳೂರಿನ ರಾಮಮೂರ್ತಿ ನಗರ ಠಾಣಾ ವ್ಯಾಪ್ತಿಯಲ್ಲಿ ಬಾಂಗ್ಲಾ ಯುವತಿಯ ಮೇಲೆ ಪೈಶಾಚಿಕ ರೀತಿಯ ಲೈಂಗಿಕ ಹಿಂಸೆ ಘಟನೆ ನಡೆದಿತ್ತು. ವಿಡಿಯೋ ಬಾಂಗ್ಲಾದೇಶದಲ್ಲಿ ವೈರಲ್ ಆಗಿ ವಾರ ಕಳೆಯುತ್ತಿದ್ದಂತೆ ಘಟನೆ ಬೆಂಗಳೂರಿನಲ್ಲಿ ನಡೆದಿತ್ತು ಅನ್ನುವ ಮಾಹಿತಿ ಪಡೆದ ಪೊಲೀಸರು ಪ್ರಕರಣ ಸಂಬಂಧಿಸಿ 10 ಮಂದಿ ಆರೋಪಿಗಳನ್ನ ಬಂಧಿಸಿದ್ದರು. ವಿಚಾರಣೆ ವೇಳೆ ಆರೋಪಿಗಳು ಬಾಂಗ್ಲಾ ಯುವತಿಯರನ್ನು ವೇಶ್ಯಾವಾಟಿಕೆಯಲ್ಲಿ ತೊಡಗಿಸಿರುವುದು ಬಯಲಾಗಿತ್ತು.
ಅಲ್ಲದೆ, ಆರೋಪಿಗಳ ವಶದಲ್ಲಿದ್ದ ಏಳು ಮಂದಿ ಬಾಂಗ್ಲಾ ಮೂಲದ ಯುವತಿಯರನ್ನು ಪೊಲೀಸರು ರಕ್ಷಣೆ ಮಾಡಿದ್ದರು. ಇವರೆಲ್ಲ ನಕಲಿ ಭಾರತೀಯ ದಾಖಲೆಗಳನ್ನು ಮಾಡಿಕೊಂಡು ಬೆಂಗಳೂರಿಗೆ ಬಂದು ನೆಲೆಸಿರುವುದನ್ನು ಪತ್ತೆ ಮಾಡಲಾಗಿತ್ತು. ಬಳಿಕ ಇಡೀ ಪ್ರಕರಣವನ್ನು ಹೆಣ್ಣೂರು ಪೊಲೀಸ್ ಠಾಣೆಗೆ ವರ್ಗಾವಣೆಯಾಗಿತ್ತು.
ಬಾಂಗ್ಲಾದಿಂದ ಅಕ್ರಮವಾಗಿ ಒಳನುಗ್ಗಿ ಪಶ್ಚಿಮ ಬಂಗಾಳದ ಗಡಿಜಿಲ್ಲೆಗಳಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ, ಆಬಳಿಕ ಸದ್ದಿಲ್ಲದೆ ಬೆಂಗಳೂರಿಗೆ ಬರುತ್ತಿದ್ದರು. ಯುವತಿಯರನ್ನು ಕೂಡ ಅದೇ ರೀತಿಯಲ್ಲಿ ಕರೆತರಲಾಗಿತ್ತು ಎನ್ನೋ ಮಾಹಿತಿ ಇದೆ. ಹೀಗಾಗಿ ಇದೆಲ್ಲವನ್ನೂ ತನಿಖೆ ಮಾಡುವ ಸಲುವಾಗಿ ಅಧಿಕೃತವಾಗಿ ಎನ್ಐಎ ಎಫ್ಐಆರ್ ದಾಖಲಿಸಿಕೊಂಡು ತನಿಖೆಗೆ ಮುಂದಾಗಿದೆ.
Read: ಅಂತಾರಾಷ್ಟ್ರೀಯ ಮಾನವ ಕಳ್ಳಸಾಗಣೆ ಜಾಲ ಪತ್ತೆ ; ಕೆನಡಾಕ್ಕೆ ತೆರಳಲು ಪ್ಲಾನ್ ಹಾಕಿದ್ದ 38 ಲಂಕನ್ನರ ಸೆರೆ !
38 Sri Lankan refugees detained in Mangalore NIA to probe the case. The Mangaluru City Police had detained 38 Sri Lankan nationals who were illegally staying in lodges of the city, in small groups, for more than a month and without passports.
10-05-25 10:40 pm
HK News Desk
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
10-05-25 11:05 pm
HK News Desk
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm