ಬ್ರೇಕಿಂಗ್ ನ್ಯೂಸ್
25-07-21 03:57 pm Mangaluru Correspondent ಕರಾವಳಿ
ಮಂಗಳೂರು, ಜುಲೈ 25: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಮತ್ತೊಂದು ಎಡವಟ್ಟು ಮಾಡಿಕೊಂಡಿದ್ದಾರೆ. ಒಲಿಂಪಿಕ್ಸ್ ನಲ್ಲಿ ಪದಕ ಗೆಲ್ಲುತ್ತಿರುವ ಭಾರತೀಯ ಕ್ರೀಡಾಳುಗಳಿಗೆ ಶುಭಾಶಯ ಕೋರುವ ಅವಸರದಲ್ಲಿ ರೆಸ್ಲಿಂಗ್ ಚಾಂಪ್ಯನ್ ಶಿಪ್ಪಿನಲ್ಲಿ ಚಿನ್ನದ ಪದಕ ಗೆದ್ದ ಪ್ರಿಯಾ ಮಲ್ಲಿಕ್ ಅವರನ್ನು ಒಲಿಂಪಿಕ್ಸ್ ನಲ್ಲಿ ಪದಕ ಗೆದ್ದಿದ್ದಾಗಿ ಶುಭಾಶಯ ಕೋರಿ ಎಡವಟ್ಟು ಮಾಡಿದ್ದಾರೆ.

ಹಂಗೇರಿಯಲ್ಲಿ ನಡೆದ ವಿಶ್ವ ಕೇಡೆಟ್ ರೆಸ್ಲಿಂಗ್ ಚಾಂಪ್ಯನ್ ಶಿಪ್ ಕೂಟದಲ್ಲಿ ಭಾರತದ ಪ್ರಿಯಾ ಮಲಿಕ್ 73 ಕೆಜಿ ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿದ್ದರು. ಫೈನಲ್ ಪಂದ್ಯದಲ್ಲಿ ಬೆಲಾರಸ್ಸಿನ ಎದುರಾಳಿ ಕ್ಸೆನಿಯಾ ಪತಾಪೊವಿಚ್ ಅವರನ್ನು 5-0 ನೇರ ಸೆಟ್ ಗಳಲ್ಲಿ ಮಣಿಸಿ ಚಿನ್ನದ ಬೇಟೆಯಾಡಿದ್ದರು. ಆದರೆ, ಇದನ್ನೇ ಒಲಿಂಪಿಕ್ಸ್ ನಲ್ಲಿ ಭಾರತದ ಮತ್ತೊಬ್ಬ ಕ್ರೀಡಾಳು ಚಿನ್ನ ಗೆದ್ದಿದ್ದಾಗಿ ಬಿಜೆಪಿ ರಾಜ್ಯಾಧ್ಯಕ್ಷರ ಟ್ವಿಟರ್ ನಲ್ಲಿ ಪ್ರಿಯಾ ಮಲಿಕ್ ಫೋಟೋ ಜೊತೆಗೆ ಪೋಸ್ಟ್ ಮಾಡಿದ್ದು, ನೆಟ್ಟಿಗರು ವ್ಯಂಗ್ಯದ ನಗೆ ಬೀರಿದ್ದಾರೆ.


ಹಲವಾರು ಮಂದಿ ನಳಿನ್ ಕುಮಾರ್ ಟ್ವೀಟನ್ನು ಮರು ಟ್ವೀಟ್ ಮಾಡಿ ತಿರುಗೇಟು ನೀಡಿದ್ದಾರೆ. ಕೆಲವರು ತುಳುವಿನಲ್ಲೇ ಟ್ವೀಟ್ ಮಾಡಿದ್ದು ಅದು ಒಲಿಂಪಿಕ್ಸ್ ಅಲ್ಲ ಮಾರ್ರೇ.. ಒಮ್ಮೆ ಡಿಲೀಟ್ ಮಾಡ್ರಿ.. ಅದು ವರ್ಲ್ಡ್ ರೆಸ್ಲಿಂಗ್.. ಎಂದು ಬರೆದುಕೊಂಡಿದ್ದಾರೆ. ಕೆಲವರು ಇವತ್ತು ಈ ಟ್ವಿಟರ್ ಹ್ಯಾಂಡ್ಲರ್ ಗೆ ಕಾದಿದೆ ಎಂದು ಬರೆದಿದ್ದಾರೆ. ಇದಲ್ಲದೆ, ಈ ರೀತಿಯ ಎಡವಟ್ಟಿನ ಟ್ವಿಟರ್ ಫೋಟೋಗಳು, ಕಮೆಂಟುಗಳನ್ನು ಫೋಟೋ ತೆಗೆದು ವಾಟ್ಸಪ್ ನಲ್ಲಿ ಹಂಚಿಕೊಂಡಿದ್ದಾರೆ. ಇತ್ತೀಚೆಗಷ್ಟೇ ಆಡಿಯೋ ಹೊರಬಂದು ತೀವ್ರ ಟ್ರೋಲ್ ಆಗಿರುವ ನಳಿನ್ ಕುಮಾರ್ ಈಗ ಮತ್ತೆ ಟ್ರೋಲ್ ಆಗುವಂತಾಗಿದೆ. ಟ್ವೀಟಿಗರು ಗರಂ ಆಗುತ್ತಿದ್ದಂತೆ ನಳಿನ್ ಕುಮಾರ್ ಎಡವಟ್ಟಿನ ಟ್ವೀಟ್ ಡಿಲೀಟ್ ಆಗಿತ್ತು.
BJP Naleem Kumar Kateel wrongly tweets as Priya Malik wins gold medal in Olympics instead of Cadet World Championship in Budapest, Hungary, on Sunday. Many Twitter handlers asked for the tweet to be deleted.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 09:50 am
HK News Staffer
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm