ಬ್ರೇಕಿಂಗ್ ನ್ಯೂಸ್
25-07-21 03:57 pm Mangaluru Correspondent ಕರಾವಳಿ
ಮಂಗಳೂರು, ಜುಲೈ 25: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಮತ್ತೊಂದು ಎಡವಟ್ಟು ಮಾಡಿಕೊಂಡಿದ್ದಾರೆ. ಒಲಿಂಪಿಕ್ಸ್ ನಲ್ಲಿ ಪದಕ ಗೆಲ್ಲುತ್ತಿರುವ ಭಾರತೀಯ ಕ್ರೀಡಾಳುಗಳಿಗೆ ಶುಭಾಶಯ ಕೋರುವ ಅವಸರದಲ್ಲಿ ರೆಸ್ಲಿಂಗ್ ಚಾಂಪ್ಯನ್ ಶಿಪ್ಪಿನಲ್ಲಿ ಚಿನ್ನದ ಪದಕ ಗೆದ್ದ ಪ್ರಿಯಾ ಮಲ್ಲಿಕ್ ಅವರನ್ನು ಒಲಿಂಪಿಕ್ಸ್ ನಲ್ಲಿ ಪದಕ ಗೆದ್ದಿದ್ದಾಗಿ ಶುಭಾಶಯ ಕೋರಿ ಎಡವಟ್ಟು ಮಾಡಿದ್ದಾರೆ.

ಹಂಗೇರಿಯಲ್ಲಿ ನಡೆದ ವಿಶ್ವ ಕೇಡೆಟ್ ರೆಸ್ಲಿಂಗ್ ಚಾಂಪ್ಯನ್ ಶಿಪ್ ಕೂಟದಲ್ಲಿ ಭಾರತದ ಪ್ರಿಯಾ ಮಲಿಕ್ 73 ಕೆಜಿ ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿದ್ದರು. ಫೈನಲ್ ಪಂದ್ಯದಲ್ಲಿ ಬೆಲಾರಸ್ಸಿನ ಎದುರಾಳಿ ಕ್ಸೆನಿಯಾ ಪತಾಪೊವಿಚ್ ಅವರನ್ನು 5-0 ನೇರ ಸೆಟ್ ಗಳಲ್ಲಿ ಮಣಿಸಿ ಚಿನ್ನದ ಬೇಟೆಯಾಡಿದ್ದರು. ಆದರೆ, ಇದನ್ನೇ ಒಲಿಂಪಿಕ್ಸ್ ನಲ್ಲಿ ಭಾರತದ ಮತ್ತೊಬ್ಬ ಕ್ರೀಡಾಳು ಚಿನ್ನ ಗೆದ್ದಿದ್ದಾಗಿ ಬಿಜೆಪಿ ರಾಜ್ಯಾಧ್ಯಕ್ಷರ ಟ್ವಿಟರ್ ನಲ್ಲಿ ಪ್ರಿಯಾ ಮಲಿಕ್ ಫೋಟೋ ಜೊತೆಗೆ ಪೋಸ್ಟ್ ಮಾಡಿದ್ದು, ನೆಟ್ಟಿಗರು ವ್ಯಂಗ್ಯದ ನಗೆ ಬೀರಿದ್ದಾರೆ.


ಹಲವಾರು ಮಂದಿ ನಳಿನ್ ಕುಮಾರ್ ಟ್ವೀಟನ್ನು ಮರು ಟ್ವೀಟ್ ಮಾಡಿ ತಿರುಗೇಟು ನೀಡಿದ್ದಾರೆ. ಕೆಲವರು ತುಳುವಿನಲ್ಲೇ ಟ್ವೀಟ್ ಮಾಡಿದ್ದು ಅದು ಒಲಿಂಪಿಕ್ಸ್ ಅಲ್ಲ ಮಾರ್ರೇ.. ಒಮ್ಮೆ ಡಿಲೀಟ್ ಮಾಡ್ರಿ.. ಅದು ವರ್ಲ್ಡ್ ರೆಸ್ಲಿಂಗ್.. ಎಂದು ಬರೆದುಕೊಂಡಿದ್ದಾರೆ. ಕೆಲವರು ಇವತ್ತು ಈ ಟ್ವಿಟರ್ ಹ್ಯಾಂಡ್ಲರ್ ಗೆ ಕಾದಿದೆ ಎಂದು ಬರೆದಿದ್ದಾರೆ. ಇದಲ್ಲದೆ, ಈ ರೀತಿಯ ಎಡವಟ್ಟಿನ ಟ್ವಿಟರ್ ಫೋಟೋಗಳು, ಕಮೆಂಟುಗಳನ್ನು ಫೋಟೋ ತೆಗೆದು ವಾಟ್ಸಪ್ ನಲ್ಲಿ ಹಂಚಿಕೊಂಡಿದ್ದಾರೆ. ಇತ್ತೀಚೆಗಷ್ಟೇ ಆಡಿಯೋ ಹೊರಬಂದು ತೀವ್ರ ಟ್ರೋಲ್ ಆಗಿರುವ ನಳಿನ್ ಕುಮಾರ್ ಈಗ ಮತ್ತೆ ಟ್ರೋಲ್ ಆಗುವಂತಾಗಿದೆ. ಟ್ವೀಟಿಗರು ಗರಂ ಆಗುತ್ತಿದ್ದಂತೆ ನಳಿನ್ ಕುಮಾರ್ ಎಡವಟ್ಟಿನ ಟ್ವೀಟ್ ಡಿಲೀಟ್ ಆಗಿತ್ತು.
BJP Naleem Kumar Kateel wrongly tweets as Priya Malik wins gold medal in Olympics instead of Cadet World Championship in Budapest, Hungary, on Sunday. Many Twitter handlers asked for the tweet to be deleted.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm