ಬ್ರೇಕಿಂಗ್ ನ್ಯೂಸ್
25-07-21 11:03 pm Mangaluru Correspondent ಕರಾವಳಿ
ಮಂಗಳೂರು, ಜುಲೈ 25: ಟಿವಿ ಜಾಹೀರಾತಿನಲ್ಲಿ ಯುವತಿಯೊಬ್ಬಳು ತಾಯಿ ಜೊತೆಗೆ ಕಾರಿನಲ್ಲಿ ತೆರಳಿದ್ದಾಗ ಟೈರ್ ಪಂಕ್ಚರ್ ಆಗಿ ಬಳಿಕ ಯುವತಿಯೇ ಟೈರ್ ತೆಗೆದು ಹಾಕುತ್ತಾಳೆ. ಕೊನೆಯಲ್ಲಿ ಅಪ್ಪನನ್ನು ನೋಡಿದ್ದೆ ಎಂದುಸುರುತ್ತಾ ಟಾನಿಕ್ ಬಗ್ಗೆ ಹೇಳುತ್ತಾಳೆ. ಅದು ಜಾಹೀರಾತು. ನಿಜ ಜೀವನದಲ್ಲಿ ಯುವತಿ ಕಾರು ಡ್ರೈವ್ ಮಾಡುವಾಗ ಟೈರ್ ಪಂಕ್ಚರ್ ಆದರೆ ಏನು ಗತಿ ? ಇಂಥಾದ್ದೇ ಪ್ರಸಂಗ ಮಂಗಳೂರಿನಲ್ಲಿ ಇವತ್ತು ಆಗಿತ್ತು.
ಮಹಿಳೆ ಮತ್ತು ಮಗು ಮಾತ್ರ ಇದ್ದ ಕಾರೊಂದು ನಾಗುರಿಯಿಂದ ಪಂಪ್ವೆಲ್ ಕಡೆಗೆ ಬರುತ್ತಿದ್ದಾಗ ಟಯರ್ ಪಂಕ್ಚರ್ ಆಗಿತ್ತು. ಕೂಡಲೇ ಕಾರಿನಿಂದಿಳಿದ ಮಹಿಳೆ ಹೊರಗೆ ನಿಂತು ಏನು ಮಾಡುವುದೆಂದು ತೋಚದೆ ನಿಂತಿದ್ದರು. ಆಕೆ ಕುಂದಾಪುರ ಮೂಲದ ಮಹಿಳೆಯಾಗಿದ್ದರಿಂದ ಸಂಬಂಧಿಕರು ಹತ್ತಿರ ಇರಲಿಲ್ಲವೋ ಏನೋ..ಮಹಿಳೆಯ ಅಸಹಾಯಕತೆ ಗಮನಿಸಿದ ನಾಗುರಿ ಸಂಚಾರಿ ಠಾಣಾ ಪೊಲೀಸರು ತಾವೇ ಟೈರ್ ಬಿಚ್ಚಿಸಲು ನೆರವಾಗಿದ್ದಾರೆ. ರಸ್ತೆ ಬದಿ ಕಾರನ್ನು ಪಾರ್ಕ್ ಮಾಡಿ, ಟೈರ್ ತೆಗೆದು ಬೇರೆ ಸ್ಟೆಪಿನ್ ಟಯರ್ ಅಳವಡಿಸಿ ಮಾನವೀಯತೆ ಕಾರ್ಯ ಮಾಡಿದ್ದಾರೆ.

ಕುಂದಾಪುರ ಮೂಲದ ಮಹಿಳೆ ನಾಗುರಿ ಕಡೆಯಿಂದ ಮಂಗಳೂರು ನಗರದ ಕಡೆಗೆ ತೆರಳುತ್ತಿದ್ದಾಗ ಘಟನೆ ನಡೆದಿತ್ತು. ಇದೇ ಸಂದರ್ಭ ಹೈವೇ ಗಸ್ತಿನಲ್ಲಿದ್ದ ಪೊಲೀಸರು ಸ್ಥಳಕ್ಕೆ ಬಂದಿದ್ದರು. ಮಹಿಳೆಯ ಅಸಹಾಯಕತೆಯನ್ನು ಗಮನಿಸಿದ ಸಂಚಾರಿ ಪೊಲೀಸರು ತಕ್ಷಣ ಕಾರಿನತ್ತ ಧಾವಿಸಿ ನೆರವಿಗೆ ನಿಂತಿದ್ದಾರೆ. ನಾಗುರಿ ಸಂಚಾರಿ ಠಾಣೆ ಎಎಸ್ ಐ ಲಸ್ರಾದೋ, ಸಿಬ್ಬಂದಿ ಮಹೇಶ್ ಹಾಗೂ ಹೋಂಗಾಡ್೯ ಆಸಿಫ್ ಸೇರಿ ಮಾಡಿರುವ ಕಾರ್ಯ ಸಾರ್ವಜನಿಕರ ಪ್ರಶಂಸೆಗೆ ಕಾರಣವಾಗಿದೆ.
Mangalore Kankandy Traffic Police help a woman fix the car tyre. Traffic police SI Lasrado, Mahesh and Home guard Asif help in fixing the punctured car. The Picture of this goes viral on social media.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm