ಬ್ರೇಕಿಂಗ್ ನ್ಯೂಸ್
31-07-21 09:51 pm Mangaluru Correspondent ಕರಾವಳಿ
ಮಂಜೇಶ್ವರ, ಜುಲೈ 31: ಬಂಟ್ವಾಳ ಬಳಿಯ ಪಾಣೆಮಂಗಳೂರಿನ ನೇತ್ರಾವತಿ ಸೇತುವೆಯ ಬಳಿ ಚಾಲನೆ ಸ್ಥಿತಿಯಲ್ಲಿ ಬೈಕನ್ನು ಬಿಟ್ಟು ನದಿಗೆ ಹಾರಿದ್ದ ಯುವಕನ ಶವ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ಬಳಿಯ ಕಣ್ವತೀರ್ಥ ಸಮುದ್ರ ಕಿನಾರೆಯಲ್ಲಿ ಪತ್ತೆಯಾಗಿದೆ.
ಬೆಂಗಳೂರಿನ ದಾಸರಹಳ್ಳಿಯ ನಿವಾಸಿ ಸತ್ಯವೇಲು (28) ಎಂಬ ಯುವಕ ಜುಲೈ 28ರಂದು ರಾತ್ರಿ ಬಿ.ಸಿ.ರೋಡಿನ ಪಾಣೆಮಂಗಳೂರು ಸೇತುವೆ ಬಳಿಗೆ ಬೈಕಿನಲ್ಲಿ ಬಂದಿದ್ದು, ಬೈಕನ್ನು ಚಾಲನೆ ಸ್ಥಿತಿಯಲ್ಲೇ ಬಿಟ್ಟು ನದಿಗೆ ಹಾರಿದ್ದ ಎನ್ನಲಾಗಿತ್ತು. ಬಳಿಕ ಆತನ ಹುಡುಕಾಟ ನಡೆಸಿದ್ದರೂ, ಶವ ಸಿಕ್ಕಿರಲಿಲ್ಲ.
ಜುಲೈ 30ರಂದು ಮಂಜೇಶ್ವರ ಸಮುದ್ರ ಕಿನಾರೆಯಲ್ಲಿ ಶವ ಪತ್ತೆಯಾಗಿದ್ದು, ಪೊಲೀಸರು ಬಂಟ್ವಾಳ ಪೊಲೀಸರ ಮೂಲಕ ಆತನ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದರು. ಕುಟುಂಬಸ್ಥರು ಬಂದು ಶವದ ಗುರುತು ಹಚ್ಚಿದ್ದಾರೆ. ಮಂಜೇಶ್ವರ ಪೊಲೀಸರು ಶವವನ್ನು ಕಾಸರಗೋಡು ಸರಕಾರಿ ಆಸ್ಪತ್ರೆಗೆ ಒಯ್ದು ಪೋಸ್ಟ್ ಮಾರ್ಟಂ ನಡೆಸಿದ್ದು, ಬಳಿಕ ಕುಟುಂಬಸ್ಥರಿಗೆ ಹಸ್ತಾಂತರ ಮಾಡಿದ್ದಾರೆ.
ಸತ್ಯವೇಲು ಇತ್ತೀಚೆಗೆ ಎರಡು ವಾರಗಳ ಹಿಂದೆಯೂ ಇದೇ ರೀತಿ ಪಾಣೆಮಂಗಳೂರಿನಲ್ಲಿ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ. ಆನಂತರ ಸ್ಥಳೀಯರು ಗಮನಿಸಿ, ಆತನ ರಕ್ಷಣೆ ಮಾಡಿ ಪೊಲೀಸರಿಗೆ ಒಪ್ಪಿಸಿದ್ದರು. ಪೊಲೀಸರು ಕುಟುಂಬಸ್ಥರನ್ನು ಕರೆಸಿ, ವಶಕ್ಕೆ ನೀಡಿದ್ದರು. ಇದೀಗ ಮತ್ತೆ ಜುಲೈ 28ರಂದು ಸತ್ಯವೇಲು ಬೆಂಗಳೂರಿನ ಮನೆಯನ್ನು ಬಿಟ್ಟು ಬಂದಿದ್ದ. ಈ ಬಗ್ಗೆ ಆತನ ತಾಯಿ ಪೊಲೀಸ್ ದೂರು ನೀಡಿದ್ದರು.
ಬೆಂಗಳೂರಿನ ಯುವಕ ನೇತ್ರಾವತಿ ನದಿಗೆ ಹಾರಿದ ಶಂಕೆ ; ಬಿ.ಸಿ.ರೋಡ್ ಸೇತುವೆಯಲ್ಲಿ ಬೈಕ್ ಪತ್ತೆ !
The mortal remains of the man who left his bike engine running and went missing from Netravati bridge at Panemangalore on July 28 morning, was found later at Manjeshwar Kanwatheertha sea shore. The person is identified as Sathyavelu (29), a resident of Dasarahalli in Bengaluru.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm